‘insta’ ಫಾಲೋವರ್‍ಸ್ ಕುಸಿತ: ಮಿಶಾ ಅಗರ್ವಾಲ್ ಆತ್ಮಹತ್ಯೆ; ಯುವಜನರ ಗೀಳು ಕುರಿತು ಕಳವಳಗೊಂಡ ತಾಪ್ಸಿ ಪನ್ನು

Date:

ಸಾಮಾಜಿಕ ಜಾಲತಾಣ ವೇದಿಕೆ ‘ಇನ್‌ಸ್ಟಾಗ್ರಾಮ್‌’ನಲ್ಲಿ ತನ್ನ ಫಾಲೋವರ್‌ಗಳ ಸಂಖ್ಯೆ ಕುಸಿದಿದೆ ಎಂಬ ಕಾರಣಕ್ಕೆ ಸೋಷಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟರ್ ಮಿಶಾ ಅಗರ್ವಾಲ್ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಾಲಿವುಡ್‌ ನಟಿ ತಾಪ್ಸಿ ಪನ್ನು, ‘ಇದು ನಾನು ಬಹಳ ದಿನಗಳಿಂದ ಆತಂಕ (ಭಯ) ಪಡುತ್ತಿರುವ ವಿಷಯವಾಗಿದೆ’ ಎಂದಿದ್ದಾರೆ.

25 ವರ್ಷ ಹರೆಯದ ಮಿಶಾ ಅಗರ್ವಾಲ್ ಅವರು ಈ ಡಿಜಿಟಲ್ ಯುಗದಲ್ಲಿ ಇನ್‌ಸ್ಟಾಗ್ರಾಮ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಂಟೆಂಟ್‌ ಕ್ರಿಯೇಟ್‌ ಮಾಡಿ, ವಿಡಿಯೋ ಮಾಡುವುದನ್ನೇ ವೃತ್ತಿಯಾಗಿ ಪರಿಗಣಿಸಿದ್ದರು. ಅದರಿಂದ, ಒಂದಷ್ಟು ಸಂಪಾದನೆಯನ್ನೂ ಮಾಡುತ್ತಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಮಿಲಿಯನ್ (10 ಲಕ್ಷ) ಅನುಯಾಯಿಗಳನ್ನು ಪಡೆಯಬೇಕು ಎಂಬುದು ಅವರ ಗುರಿಯಾಗಿತ್ತು. ಆದರೆ, ಇತ್ತೀಚೆಗೆ ಅವರು ಹಲವಾರು ಫಾಲೋವರ್‌ಗಳನ್ನು ಕಳೆದುಕೊಂಡಿದ್ದರು. ಅಂದರೆ, ಹಲವಾರು ಫಾಲೋವರ್‌ಗಳು ಅವರ ಖಾತೆಯನ್ನು ಅನ್‌ಲೈಕ್ ಮತ್ತು ಅನ್‌ಫಾಲೋ ಮಾಡಿದ್ದರು.

ಸಾಮಾಜಿಕ ಜಾಲತಾಣ ವೇದಿಕೆಯಲ್ಲಿ ಫಾಲೋವರ್‍ಸ್ ಕಳೆದುಕೊಂಡ ಮಿಶಾ ಅಗರ್ವಾಲ್‌ ಅವರು ಸೋಷಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟ್ ಮಾಡುವ ತಮ್ಮ ವೃತ್ತಿಜೀವನವು ಅಂತ್ಯಗೊಳ್ಳುತ್ತಿದೆ ಎಂದು ಆತಂಕಗೊಂಡಿದ್ದರು. ಅದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಸಂಬಂಧಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಜಾತಿ ಗಣತಿ ವರದಿ ವಿರೋಧಿಸುತ್ತಿರುವ ಶಾಮನೂರು ಹುನ್ನಾರವೇನು? ಕಾಂಗ್ರೆಸ್‌ನಲ್ಲಿ ಕ್ರಮ ಯಾಕಿಲ್ಲ?

ಮಿಶಾ ಅವರ ಸಾವಿನ ಬಗ್ಗೆ ನಟಿ ತಾಪ್ಸಿ ಪನ್ನು ಆತಂಕ ವ್ಯಕ್ತಪಡಿಸಿದ್ದಾರೆ. ಇದೊಂದು ಹೃದಯವಿದ್ರಾವಕ ಘಟನೆ ಎಂದಿದ್ದಾರೆ. ಅಲ್ಲದೆ, ಸಾಮಾಜಿಕ ಮಾಧ್ಯಮಗಳ ಕುರಿತಾಗಿ ಹೆಚ್ಚುತ್ತಿರುವ ಯುವಜನರ ಗೀಳಿನ ಬಗ್ಗೆ ಕಳವಳ ಹೊರಹಾಕಿದ್ದಾರೆ. ಸಾಮಾಜಿಕ ಮಾಧ್ಯಮವು ಮಾನಸಿಕ ಆರೋಗ್ಯದ ಮೇಲೆ ಬೀರುವ ಪ್ರಭಾವಗಳ ಬಗ್ಗೆ ಗಮನ ಸೆಳೆದಿದ್ದಾರೆ.

“ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲೆ ಬಹಳಷ್ಟು ಜನರ ಗೀಳನ್ನು ನೋಡಿ ನಾನು ಬಹಳ ದಿನಗಳಿಂದ ಭಯಪಡುತ್ತಿದ್ದೇನೆ. ಇಂತಹದ್ದೊಂದು ದಿನ ಬರುತ್ತವೆ ಎಂಬ ಭಯ ಹಿಂದಿನಿಂದಲೂ ನನ್ನನ್ನು ಕಾಡುತ್ತಿತ್ತು” ಎಂದು ತಾಪ್ಸಿ ಪನ್ನು ಹೇಳಿದ್ದಾರೆ.

“ವರ್ಚುವಲ್ ಪ್ರೀತಿಯ ತೀವ್ರ ಅಗತ್ಯವು ನಿಮ್ಮ ಸುತ್ತಲಿನ ನಿಜವಾದ ಪ್ರೀತಿಯ ಕುರಿತು ನಿಮ್ಮನ್ನು ಕುರುಡಾಗಿಸುತ್ತದೆ ಎಂಬ ಭಯ ಕಾಡುತ್ತಲೇ ಇದೆ. ಈ ತ್ವರಿತ ತೃಪ್ತಿ, ಇಷ್ಟಗಳು ಹಾಗೂ ಕಾಮೆಂಟ್‌ಗಳು ನಿಮ್ಮನ್ನು ಹೆಚ್ಚು ಯೋಗ್ಯರನ್ನಾಗಿ ಮಾಡುವುದಿಲ್ಲ. ಬದಲಾಗಿ, ಮಾನಸಿಕ ರೋಗಿಯನ್ನಾಗಿಸುತ್ತದೆ. ಇಂತಹ ಘಟನೆಗಳನ್ನು ನೋಡುವುದು ಹೃದಯವನ್ನು ಹಿಂಡುತ್ತದೆ” ಎಂದಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...