ಜಪ್ತಿ ಮಾಡಿದ ₹25 ಸಾವಿರ ಕೋಟಿ ಮೌಲ್ಯದ ಮಾದಕ ದ್ರವ್ಯ ಪಾಕ್‌ನಿಂದ ಬಂದಿದ್ದು: ಎನ್‌ಸಿಬಿ

Date:

ಕೊಚ್ಚಿಯ ಕರಾವಳಿಯಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮತ್ತು ಭಾರತೀಯ ನೌಕಾಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಭಾನುವಾರ (ಮೇ 15) ವಶಪಡಿಸಿಕೊಂಡಿದ್ದ ₹25 ಸಾವಿರ ಕೋಟಿ ಮೌಲ್ಯದ 2,525 ಕೆಜಿ ಮೆಥಾಂಫೆಟಮೈನ್ ಎಂಬ ಮಾದಕ ದ್ಯವ್ಯವು ಪಾಕಿಸ್ತಾನದ ಮಾದಕದ್ರವ್ಯ ಕಿಂಗ್‌ಪಿನ್ ಹಾಜಿ ಸಲೀಂ ತಂಡದಿಂದ ಸರಬರಾಜಾಗಿದೆ.

ವಶಪಡಿಸಿಕೊಂಡ ಮೆಥಾಂಫೆಟಮೈನ್ ಮಾದಕದ್ತವ್ಯದ ಬೆಲೆ ಅಕ್ರಮ ಮಾರುಕಟ್ಟೆಯಲ್ಲಿ ₹12,000 ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಎಂದು ಎನ್‌ಸಿಬಿ ಈ ಹಿಂದೆ ಹೇಳಿತ್ತು. ಆದರೆ ಮಾರುಕಟ್ಟೆ ಬೆಲೆಯನ್ನು ಪರಿಷ್ಕರಿಸಿದಾಗ ಇದರ ಬೆಲೆ ₹25 ಸಾವಿರ ಕೋಟಿಗೂ ಹೆಚ್ಚಿದೆ ಎಂದು ಎನ್‌ಸಿಬಿ ತಿಳಿಸಿದೆ. ಇದು ದೇಶದ ಅತೀ ದೊಡ್ಡ ರವಾನೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಪ್ರಸ್ತುತ ವಶಪಡಿಸಿಕೊಂಡಿರುವ ಮಾದಕದ್ರವ್ಯ ಅಕ್ರಮ ಮಾರುಕಟ್ಟೆಯಲ್ಲಿ ಅತ್ಯುತ್ತಮ ಗುಣಮಟ್ಟದ್ದಾಗಿದ್ದು, ಶುದ್ಧ ಬಿಳಿ ಸ್ಫಟಿಕ ರೂಪದಲ್ಲಿದೆ. ಹೀಗಾಗಿ, ಇದರ ಮಾರುಕಟ್ಟೆ ಮೌಲ್ಯ ₹25,000 ಕೋಟಿ ರೂಪಾಯಿ ಎಂದು ನಾವು ಕಂಡುಕೊಂಡಿದ್ದೇವೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಮಾದಕದ್ರವ್ಯವು ಭಾರತ, ಶ್ರೀಲಂಕಾ, ಮಾಲ್ಡೀವ್ಸ್ ದೇಶಗಳಿಗೆ ಸರಬರಾಜು ಮಾಡಲು ರವಾನೆಯಾಗಿದೆ. ಕಿಂಗ್‌ಪಿನ್ ಹಾಜಿ ಸಲೀಂ ತಂಡದ ಸದಸ್ಯನಾಗಿ ಕೆಲಸ ಮಾಡುತ್ತಿದ್ದ 29 ವರ್ಷದ ಪಾಕಿಸ್ತಾನದ ಪ್ರಜೆಯನ್ನು ನಾವು ಬಂಧಿಸಿದ್ದೇವೆ. ಬಂಧಿತ ವ್ಯಕ್ತಿಯು ಅಂತಾರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಣೆ ಗುಂಪುಗಳ ಭಾಗವಾಗಿದ್ದ”ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಹಿಂದೆ ಹಾಜಿ ಸಲೀಂ ಗುಂಪಿನ ಮಾದಕವಸ್ತು ಕಳ್ಳಸಾಗಣೆ ಪ್ರಯತ್ನಗಳನ್ನು ಎನ್‌ಸಿಬಿ ಭೇದಿಸಿದ್ದರೂ, ಇಷ್ಟು ದೊಡ್ಡ ಪ್ರಮಾಣದ ಮಾದಕದ್ರವ್ಯ ವಶಪಡಿಸಿಕೊಂಡಿರುವುದು ಇದೇ ಮೊದಲಾಗಿದೆ.

ಈ ಸುದ್ದಿ ಓದಿದ್ದೀರಾ? ಸಿಬಿಐ ನಿರ್ದೇಶಕರಾಗಿ ನೇಮಕರಾದ ಡಿಜಿಪಿ ಪ್ರವೀಣ್‌ ಸೂದ್‌

ಇರಾನ್ ಗಡಿಗೆ ಸಮೀಪದಲ್ಲಿರುವ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಬಂದರು ಪಟ್ಟಣವಾದ ಜಿವಾನಿಯಿಂದ ಈ ಮಾದಕವಸ್ತು ಬಂದಿದೆ ಎಂದು ಎನ್‌ಸಿಬಿ ಮೂಲಗಳು ತಿಳಿಸಿವೆ.

“ಮೆಥಾಂಫೆಟಮೈನ್ ತಯಾರಿಸಲು ಬಳಸುವ ಸ್ಯೂಡೋಫೆಡ್ರಿನ್ ಎಂಬ ರಾಸಾಯನಿಕ ವಸ್ತುವು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸುಲಭವಾಗಿ ಲಭ್ಯವಿದೆ. ಈ ಪ್ರದೇಶದಲ್ಲಿ ಮೆಥಾಂಫೆಟಮೈನ್ ತಯಾರಿಕೆಯಲ್ಲಿ ತೊಡಗಿರುವ ಸ್ಥಳೀಯ ಪ್ರಯೋಗಾಲಯಗಳಿವೆ. ಇದನ್ನು ಪೊಟ್ಟಣಗಳಲ್ಲಿ ಪ್ಯಾಕ್ ಮಾಡಿ, ಸಣ್ಣ ದೋಣಿಗಳ ಮೂಲಕ ಲೋಡ್ ಮಾಡಿ ಹಡಗಿನ ಮೂಲಕ ಅಂತಾರಾಷ್ಟ್ರೀಯ ಸಮುದ್ರಗಡಿಗೆ ರವಾನಿಸಲಾಗುತ್ತದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಮೆಥಾಂಫೆಟಮೈನ್ ಕೊಕೇನ್‌ಗಿಂತ ಅಗ್ಗವಾಗಿದೆ, ಆದ್ದರಿಂದ ಇದನ್ನು ಬಡವರ ಕೊಕೇನ್ ಎಂದೂ ಕರೆಯುತ್ತಾರೆ. ದಕ್ಷಿಣ ಭಾರತದಲ್ಲಿ ಮೆಥಾಂಫೆಟಮೈನ್ ವಶಪಡಿಸಿಕೊಂಡ ಹಲವಾರು ನಿದರ್ಶನಗಳಿವೆ’’ ಎಂದು ಎನ್‌ಸಿಬಿ ತಿಳಿಸಿವೆ.

“2022ರ ಫೆಬ್ರವರಿಯಲ್ಲಿ ನಾವು ಆಪರೇಷನ್ ಸಮುದ್ರಗುಪ್ತ್ ಎಂಬ ಕಾರ್ಯಾಚರಣೆ ಆರಂಭಿಸಿದ್ದೇವೆ. ಈ ಕಾರ್ಯಾಚರಣೆಯಡಿ, ಎನ್‌ಸಿಬಿ ತಂಡವು ಇದುವರೆಗೆ ಸುಮಾರು 4000 ಕೆಜಿಯಷ್ಟು ವಿವಿಧ ರೀತಿಯ ಮಾದಕದ್ರವ್ಯ ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಕಾರ್ಯಾಚರಣೆಯಲ್ಲಿ, ಫೆಬ್ರವರಿ 2022 ರಲ್ಲಿ, ಎನ್‌ಸಿಬಿ ಮತ್ತು ಭಾರತೀಯ ನೌಕಾಪಡೆಯ ಜಂಟಿ ಕಾರ್ಯಾಚರಣೆಯ ಮೂಲಕ ಗುಜರಾತ್ ಕರಾವಳಿಯಿಂದ 529 ಕೆಜಿ ಹಶಿಶ್, 221 ಕೆಜಿ ಮೆಥಾಂಫೆಟಮೈನ್ ಮತ್ತು 13 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...