ತಿರುಪತಿ ದೇಗುಲದ ಗೋಪುರ ಏರಿ ಮದ್ಯಕ್ಕಾಗಿ ಪಟ್ಟು ಹಿಡಿದ ಯುವಕ; ಪೊಲೀಸರಿಂದ 3 ಗಂಟೆ ಹರಸಾಹಸ

Date:

ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾದ ರಾತ್ರಿ ಭದ್ರತಾ ಲೋಪ ಉಂಟಾದ ಘಟನೆಯೊಂದು ನಡೆದಿದ್ದು, ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ದೇಗುಲದ ರಾಜಗೋಪುರವನ್ನು ಏರಿ ಹೈಡ್ರಾಮಾ ಸೃಷ್ಟಿಸಿದ್ದಾನೆ. ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಒಳನುಗ್ಗಿದ ಈತ, ಗೋಪುರದ ಮೇಲಿದ್ದ ಕಳಶಗಳಿಗೆ ಹಾನಿ ಮಾಡಿದ್ದಲ್ಲದೆ, ತನಗೆ ಮದ್ಯ ತಂದುಕೊಟ್ಟರೆ ಮಾತ್ರ ಕೆಳಗೆ ಇಳಿಯುವುದಾಗಿ ಪಟ್ಟು ಹಿಡಿದಿದ್ದಾನೆ.

ಶುಕ್ರವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ, ದೇಗುಲದಲ್ಲಿ ‘ಏಕಾಂತ ಸೇವೆ’ ಮುಕ್ತಾಯಗೊಂಡ ಬೆನ್ನಲ್ಲೇ ಈ ಘಟನೆ ಸಂಭವಿಸಿದೆ. ಭದ್ರತಾ ವಲಯವನ್ನು ಭೇದಿಸಿ, ಕಾಂಪೌಂಡ್ ಗೋಡೆ ಹಾರಿದ ಆಗಂತುಕ, ಮಹಾದ್ವಾರದ ಸಮೀಪವಿರುವ ಗೋಪುರವನ್ನು ಸರಸರನೆ ಏರಿದ್ದಾನೆ. ಈ ವೇಳೆ ಆತ ಎರಡು ಕಳಶಗಳನ್ನು ಭಾಗಶಃ ಜಖಂಗೊಳಿಸಿದ್ದಾನೆ.

​ವಿಷಯ ತಿಳಿದು ಸ್ಥಳಕ್ಕೆ ದಾವಿಸಿದ ತಿರುಪತಿ ಪೂರ್ವ ವಿಭಾಗದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ, ವ್ಯಕ್ತಿಯನ್ನು ಕೆಳಗೆ ಇಳಿಯುವಂತೆ ಮನವೊಲಿಸಲು ಯತ್ನಿಸಿದರು. ಆದರೆ, ಇದಕ್ಕೆ ಜಗ್ಗದ ಆತ, “ನನಗೆ ಕುಡಿಯಲು ಮದ್ಯ ನೀಡಿದರೆ ಮಾತ್ರ ನಾನು ಕೆಳಗೆ ಬರುತ್ತೇನೆ, ಇಲ್ಲದಿದ್ದರೆ ಇಲ್ಲೇ ಇರುತ್ತೇನೆ,” ಎಂದು ಕೂಗಾಡುತ್ತಾ ಅವಾಂತರ ಸೃಷ್ಟಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಕ ವಸ್ತು ಉತ್ಪಾದನೆಗಿಳಿದ ಹೊರರಾಜ್ಯ ಮಾಫಿಯಾ ಗ್ಯಾಂಗ್‌; ಕರ್ನಾಟಕದ ಕಳಂಕ!

​ಸುಮಾರು ಮೂರು ಗಂಟೆಗಳ ಕಾಲ ನಡೆದ ಹಗ್ಗ-ಜಗ್ಗಾಟದ ನಂತರ, ಅಗ್ನಿಶಾಮಕ ಸಿಬ್ಬಂದಿ ಕಬ್ಬಿಣದ ಏಣಿಗಳನ್ನು ಅಳವಡಿಸಿ ಗೋಪುರವನ್ನು ಏರಿದರು. ನಂತರ ಹಗ್ಗದ ಸಹಾಯದಿಂದ ಆತನನ್ನು ಬಂಧಿಸಿ, ಸುರಕ್ಷಿತವಾಗಿ ಕೆಳಗೆ ಕರೆತರುವಲ್ಲಿ ಯಶಸ್ವಿಯಾದರು.

ಬಂಧಿತ ವ್ಯಕ್ತಿಯನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಕೂರ್ಮಾವಾಡಾ ನಿವಾಸಿ ‘ಕುಟ್ಟಾಡಿ ತಿರುಪತಿ’ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ತಾನು ಮದ್ಯ ಸೇವಿಸಿರುವುದಾಗಿ ಹಾಗೂ ಅಮಲಿನಲ್ಲಿ ಈ ಕೃತ್ಯ ಎಸಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ತಿರುಪತಿ ಪೂರ್ವ ಡಿವೈಎಸ್‌ಪಿ ಭಕ್ತವತ್ಸಲಂ, “ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅತಿಸೂಕ್ಷ್ಮ ವಲಯದಲ್ಲಿ ಭದ್ರತಾ ಲೋಪ ಉಂಟಾಗಿದ್ದು ಹೇಗೆ ಎಂಬ ಬಗ್ಗೆಯೂ ಸಮಗ್ರ ತನಿಖೆ ನಡೆಸಲಾಗುವುದು,” ಎಂದು ತಿಳಿಸಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಕಳಶಗಳಿಗೆ ಆಗಿರುವ ಹಾನಿಯ ಬಗ್ಗೆ ದೇಗುಲದ ಅಧಿಕಾರಿಗಳು ಮೌಲ್ಯಮಾಪನ ನಡೆಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...