ರಾಷ್ಟ್ರೀಯ ಪಕ್ಷ ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ,ಸಿಪಿಐ

Date:

ಭಾರತೀಯ ಚುನಾವಣಾ ಆಯೋಗವು ಟಿಎಂಸಿ, ಎನ್‌ಸಿಪಿ ಹಾಗೂ ಭಾರತೀಯ ಕಮ್ಯುನಿಸ್ಟ್ ಪಕ್ಷಗಳಿಗೆ ನೀಡಿರುವ ರಾಷ್ಟ್ರೀಯ ಪಕ್ಷಗಳ ಸ್ಥಾನಮಾನವನ್ನು ವಾಪಸ್‌ ಪಡೆದಿದೆ. ಅಂತೆಯೇ ಅರವಿಂದ್‌ ಕೇಜ್ರೀವಾಲ್‌ ನೇತೃತ್ವದ ಅಮ್‌ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನವನ್ನು ನೀಡಿದೆ.

“ಎರಡು ಲೋಕಸಭಾ ಚುನಾವಣೆಗಳು ಹಾಗೂ 21 ವಿಧಾನಸಭಾ ಚುನಾವಣೆಗಳಲ್ಲಿ ಮೂರು ಪಕ್ಷಗಳಿಗೂ ಸಾಕಷ್ಟು ಅವಕಾಶವನ್ನು ಒದಗಿಸಿದ ನಂತರ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿ ರಾಷ್ಟ್ರೀಯ ಪಕ್ಷಗಳ ಮಾನ್ಯತೆ ಹಿಂತೆಗೆದುಕೊಳ್ಳಲಾಗಿದೆ” ಎಂದು ಚುನಾವಣಾ ಸಮಿತಿ ತನ್ನ ಹೇಳಿಕೆಯಲ್ಲಿ ಪ್ರಕಟಿಸಿದೆ.

ಅದೇ ರೀತಿ ಆರು ಪ್ರಮುಖ ಪಕ್ಷಗಳಾದ ಉತ್ತರ ಪ್ರದೇಶದ ಆರ್‌ಎಲ್‌ಡಿ, ಆಂಧ್ರಪ್ರದೇಶದ ಬಿಆರ್‌ಎಸ್, ಮಣಿಪುರದಲ್ಲಿ ಪಿಡಿಎ, ಪುದುಚೇರಿಯ ಪಿಎಂಕೆ, ಪಶ್ಚಿಮ ಬಂಗಾಳದ ಆರ್‌ಎಸ್‌ಪಿ ಮತ್ತು ಮಿಜೋರಾಂನ ಎಂಪಿಸಿಗೆ ನೀಡಲಾಗಿದ್ದ ರಾಜ್ಯ ಪಕ್ಷದ ಸ್ಥಾನಮಾನವನ್ನು ರದ್ದುಗೊಳಿಸಲಾಗಿದೆ. ಅವು ನೋಂದಾಯಿತ ಗುರುತಿಸಲ್ಪಡದ ರಾಜಕೀಯ ಪಕ್ಷಗಳಾಗಿ ಉಳಿಯುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಗಲ್ಯಾಂಡಿನ ರಾಮ್‌ ವಿಲಾಸ್‌ ನೇತೃತ್ವದ ಲೋಕಜನಶಕ್ತಿ, ಮೇಘಾಲಯದ ವಾಯ್ಸ್ ಆಫ್‌ ದಿ ಪೀಪಲ್‌ ಪಾರ್ಟಿ ಹಾಗೂ ತ್ರಿಪುರಾದ ತಿಪ್ರಾ ಮೋತಾ ಪಕ್ಷಕ್ಕೆ ಗುರುತಿಸಲ್ಪಡುವ ರಾಜಕೀಯ ಪಕ್ಷಗಳ ಮಾನ್ಯತೆ ನೀಡಲಾಗಿದೆ.

ಆಮ್ ಆದ್ಮಿ ಪಕ್ಷವು, ಚುನಾವಣಾ ಆಯೋಗದ ನಿಯಮ 6 ಬಿ (iii) ಯ ಷರತ್ತನ್ನು ಪೂರೈಸಿದೆ. ಅಂದರೆ ದೆಹಲಿ, ಗೋವಾ, ಪಂಜಾಬ್ ಮತ್ತು ಗುಜರಾತ್‌ ರಾಜ್ಯಗಳಲ್ಲಿ ಚುನಾವಣಾ ಕಾರ್ಯಕ್ಷಮತೆಯ ಆಧಾರದಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಲ್ಪಟ್ಟಿದೆ.

ರಾಷ್ಟ್ರೀಯ ಮಾನ್ಯತೆ ಕಳೆದುಕೊಂಡಿರುವ ಪಕ್ಷಗಳು ಕೂಡ ಮುಂದಿನ ಚುನಾವಣಾ ಪ್ರಕ್ರಿಯೆಯಲ್ಲಿ ಕಾರ್ಯಕ್ಷಮತೆಯ ಆಧಾರದ ಮೇಲೆ ಸ್ಥಾನಮಾನವನ್ನು ಮರಳಿ ಪಡೆಯಬಹುದು ಎಂದು ಚುನಾವಣಾ ಆಯೋಗ ಹೇಳಿದೆ.

ಪ್ರಸ್ತುತ ಬಿಜೆಪಿ, ಕಾಂಗ್ರೆಸ್, ಸಿಪಿಐ(ಎಂ), ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮತ್ತು ಎಎಪಿ ರಾಷ್ಟ್ರೀಯ ಪಕ್ಷಗಳಾಗಿವೆ.

ರಾಷ್ಟ್ರೀಯ ಪಕ್ಷದ ರಚನೆ ಹೇಗೆ?
ಭಾರತದ ಚುನಾವಣಾ ಆಯೋಗ ಕೆಲ ಮಾನದಂಡಗಳ ಮೇಲೆ ಚುನಾಯಿತ ಪಕ್ಷಗಳಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡುತ್ತದೆ.ಆಯೋಗ ನೀಡುವ ಷರತ್ತಿನಲ್ಲಿ ಒಂದನ್ನು ಪೂರೈಸಿದರೂ ಪಕ್ಷಗಳಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಲಾಗುತ್ತದೆ.

ಆಯೋಗದ ಷರತ್ತಿನ ಪ್ರಕಾರ 3 ರಾಜ್ಯಗಳ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಶೇ.2 ಸ್ಥಾನ ಗೆಲ್ಲಬೇಕು. ನಾಲ್ಕು ಲೋಕಸಭಾ ಸ್ಥಾನಗಳ ಜೊತೆಗೆ, ಪಕ್ಷವು ಲೋಕಸಭೆಯಲ್ಲಿ ಶೇ.6 ಮತಗಳನ್ನು ಅಥವಾ ಯಾವುದೇ ನಾಲ್ಕು ವಿಧಾನಸಭೆ ಚುನಾವಣೆಯಲ್ಲಿ ಶೇ.6ರಷ್ಟು ಮತಗಳನ್ನು ಗಳಿಸಬೇಕು. 4 ಅಥವಾ ಅದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಪಕ್ಷವು ಪ್ರಾದೇಶಿಕ ಪಕ್ಷವಾಗಿ ಗುರುತಿಸಲ್ಪಡುವುದು.

ರಾಷ್ಟ್ರೀಯ ಪಕ್ಷವಾದರೆ ಏನು ಪ್ರಯೋಜನ?
ಭಾರತದಾದ್ಯಂತ ಬೇರಾವುದೇ ರಾಜಕೀಯ ಪಕ್ಷವು ರಾಷ್ಟ್ರೀಯ ಪಕ್ಷವಾದ ಬಳಿಕ ಅದರ ಚಿಹ್ನೆಯನ್ನು ಬಳಸಿಕೊಂಡು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ರಾಷ್ಟ್ರೀಯ ಪಕ್ಷಗಳು ತಮ್ಮ ಪಕ್ಷದ ಕಚೇರಿ ಸ್ಥಾಪಿಸಲು ಸರಕಾರದಿಂದ ಭೂಮಿ ಅಥವಾ ಕಟ್ಟಡವನ್ನು ಪಡೆಯಬಹುದು.ರಾಷ್ಟ್ರೀಯ ಪಕ್ಷಗಳು ಗರಿಷ್ಠ 40 ಮಂದಿ ಸ್ಟಾರ್ ಪ್ರಚಾರಕರನ್ನು ಹೊಂದಬಹುದು. ಆದರೆ, ರಾಜ್ಯ ಅಥವಾ ಪ್ರಾದೇಶಿಕ ಪಕ್ಷಗಳಿಗೆ ಈ ಅವಕಾಶ ಕೇವಲ 20ಕ್ಕೆ ಸೀಮಿತ. ಅಲ್ಲದೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ನಿರ್ದಿಷ್ಟ ಪ್ರಸಾರ ಪಡೆದು, ಪಕ್ಷದ ಸಂದೇಶಗಳನ್ನು ರವಾನಿಸಬಹುದು.

ಪ್ರತಿ 10 ವರ್ಷಕ್ಕೊಮ್ಮೆ ಪರಿಶೀಲನೆ
ಪ್ರತಿ 10 ವರ್ಷಕ್ಕೊಮ್ಮೆ ಚುನಾವಣಾ ಆಯೋಗ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ವಿಮರ್ಶೆಗೊಳಪಡಿಸುತ್ತದೆ. ಈ ಹಿಂದೆ ಪ್ರತಿ 5 ವರ್ಷಕ್ಕೊಮ್ಮೆ ರಾಷ್ಟ್ರೀಯ ಪಕ್ಷದ ಮಾನ್ಯತಾ ವಿಮರ್ಶೆಯನ್ನು ಆಯೋಗ ಮಾಡುತ್ತಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...