ಎಎಪಿ ನಾಯಕರಿಗೆ 100 ಕೋಟಿ ಲಂಚ: ಕೆ ಕವಿತಾ ವಿರುದ್ಧ ಆರೋಪ ಪಟ್ಟಿ ದಾಖಲಿಸಿದ ಇ.ಡಿ

Date:

ಭಾರತ್‌ ರಾಷ್ಟ್ರ ಸಮಿತಿ(ಬಿಆರ್‌ಎಸ್‌) ನಾಯಕಿ ಕೆ ಕವಿತಾ ಅವರು ಈಗಾಗಲೇ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಭಾಗಿಯಾಗಿದ್ದಾರೆ. ದೊಡ್ಡ ಮಟ್ಟದಲ್ಲಿ ಅನುಕೂಲ ಪಡೆಯುವ ಸಲುವಾಗಿ ಎಎಪಿ ನಾಯಕರಿಗೆ 100 ಕೋಟಿ ರೂ. ಲಂಚ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಕವಿತಾ ವಿರುದ್ಧ ಸಲ್ಲಿಸಲಾಗಿರುವ ಆರೋಪಟ್ಟಿಯಲ್ಲಿ ದಾಖಲಿಸಿದೆ.

ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ಇಂಡೋ ಸ್ಪಿರಿಟ್ಸ್‌ ಎಂಬ ಸಂಸ್ಥೆಯನ್ನು ರಚಿಸಿ ಅದನ್ನು ಸ್ವಾಧೀನಪಡಿಸಿಕೊಳ್ಳುವ ಪಿತೂರಿಯ ಭಾಗವಾಗಿ 292.8 ಕೋಟಿ ರೂ. ಮೊತ್ತವನ್ನು ಬಳಸುವ ಪ್ರಕ್ರಿಯೆಯಾಗಿತ್ತು. ಇದಕ್ಕಾಗಿ ಲಂಚ ನೀಡಲಾಗಿತ್ತು ಎಂದು ತನಿಖಾ ಸಂಸ್ಥೆ ಆರೋಪಪಟ್ಟಿಯಲ್ಲಿ ತಿಳಿಸಿದೆ.

ಇಂಡೋ ಸ್ಪಿರಿಟ್ಸ್‌ನಿಂದ ಸಹಾಯಕ ಅಭಿಷೇಕ್‌ ಬೋಯ್ನಪಲ್ಲಿ ಎಂಬುವವರ ಹೆಸರಿನಲ್ಲಿ ಬಿಆರ್‌ಎಸ್‌ ನಾಯಕಿ 5.5 ಕೋಟಿ ರೂ. ಆದಾಯವನ್ನು ಸ್ವೀಕರಿಸಿದ್ದಾರೆ ತನಿಖಾ ಸಂಸ್ಥೆ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆ ಕವಿತಾ ಅವರು ಸರ್ಕಾರದಲ್ಲಿ ಇಂಡೋ ಸ್ಪಿರಿಟ್ಸ್‌ ಕಾರ್ಯ ಸ್ಥಾಪಿಸುವ ಸಲುವಾಗಿ 1100 ಕೋಟಿ ರೂ. ಲಾಭ ಪಡೆಯಲು ಮಧ್ಯವರ್ತಿಯ ಮೂಲಕ ಲಂಚ ನೀಡಿದ್ದಾರೆ. ಅಲ್ಲದೆ ಪ್ರಕರಣದಲ್ಲಿ ಭಾಗಿಯಾಗಿರುವ ಪುರಾವೆಗಳು ಹಾಗೂ ತಮ್ಮ ಮೊಬೈಲ್‌ನಲ್ಲಿರುವ ದಾಖಲೆಗಳನ್ನು ಅಳಿಸಿದ್ದಾರೆ. ಪರಿಶೀಲನೆಗಾಗಿ ಇ.ಡಿ ಸಂಸ್ಥೆಗೆ ನೀಡಲಾಗಿರುವ 9 ಫೋನ್‌ಗಳಲ್ಲಿ ಯಾವುದೇ ಡಾಟಾ ಇಲ್ಲದಂತೆ ಫಾರ್ಮೆಟ್ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

ವಿಚಾರಣೆಯ ಸಂದರ್ಭದಲ್ಲಿ ಪ್ರಕರಣದಲ್ಲಿ ತಪ್ಪಿಸಿಕೊಳ್ಳುವ ಸಲುವಾಗಿ ಕವಿತಾ ಅವರು ಫಾರ್ಮೇಟ್‌ ಮಾಡಲಾದ ಫೋನ್‌ಗಳ ಬಗ್ಗೆ ಯಾವುದೇ ಮಾಹಿತಿಗಳನ್ನು ನೀಡುತ್ತಿರಲಿಲ್ಲ. ಅಲ್ಲದೆ ಪ್ರಕರಣದಲ್ಲಿ ಭಾಗಿಯಾಗಿರುವ ಸಾಕ್ಷಿಗಳ ಮೇಲೂ ಕವಿತಾ ಅವರು ಪ್ರಭಾವ ಬೀರಿದ್ದಾರೆ ಎಂದು ಇ.ಡಿ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.

ಕೆ ಕವಿತಾ ಅವರ ಚಾರ್ಟೆಡ್‌ ಅಕೌಂಟೆಡ್‌ ಆಗಿರುವ ಬುಚಿ ಬಾಬು ಅವರು ಇ.ಡಿ ಮುಂದೆ ಕಳೆದ ಫೆ.23 ಹಾಗೂ ಫೆ.28ರಂದು ನೀಡಿರುವ ಹೇಳಿಕೆಗಳಲ್ಲಿ ಇದು ದಾಖಲಾಗಿದೆ. ಆತನು ತಾನು ನೀಡಿರುವ ಹೇಳಿಕೆ ಹಿಂತೆಗೆದುಕೊಳ್ಳುವಂತೆ ಕವಿತಾ ಅವರು ಪ್ರಭಾವ ಬೀರಿದ್ದರು ಎಂದು ತನಿಖಾ ಸಂಸ್ಥೆ ಮುಂದೆ ತಿಳಿಸಿದ್ದಾನೆ.

ನಿನ್ನೆಯಷ್ಟೆ ಕವಿತಾ ಅವರನ್ನು ದೆಹಲಿ ಕೋರ್ಟ್‌ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.3ರವರೆಗೂ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿತ್ತು. ಅಬಕಾರಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಬಿಐ ಹಾಗೂ ಇ.ಡಿ ಎರಡೂ ಸಂಸ್ಥೆಗಳು ತನಿಖೆ ನಡೆಸುತ್ತಿದೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿಯಾದ ಕೆ ಚಂದ್ರಶೇಖರ್‌ ರಾವ್‌ ಅವರ ಪುತ್ರಿಯಾದ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಮಾ.15 ರಂದು ಹೈದರಾಬಾದ್‌ನಿಂದ ಬಂಧಿಸಿತ್ತು. ಸದ್ಯ ಅವರು ತಿಹಾರ್‌ ಜೈಲಿನಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...