ಅಡುಗೆ ಎಣ್ಣೆ ಬೆಲೆ ದಿಢೀರ್‌ ಹೆಚ್ಚಳ: ಗ್ರಾಹಕರ ಜೇಬಿಗೆ ಕತ್ತರಿ

Date:

ಸದ್ದಿಲ್ಲದೆ ಅಡುಗೆ ಎಣ್ಣೆ ಬೆಲೆ ದಿಢೀೕರ್‌ ಏರಿಕೆ ಕಂಡಿರುವುದು ಹಬ್ಬದ ಬಜೆಟ್‌ ಏರು ಪೇರಾಗುವಂತೆ ಮಾಡುತ್ತಿದೆ. ತಾಳೆ(ಪಾಮ್‌) ಎಣ್ಣೆ ಬೆಲೆ ಒಮ್ಮೆಲೆ 130 ರೂ. ಆಸುಪಾಸು ಏರಿಕೆ ಕಂಡಿರುವುದು ಗ್ರಾಹಕರ ಜೇಬು ಬಿಸಿಯಾಗುವಂತೆ ಮಾಡಿದೆ.

ಕಳೆದ ತಿಂಗಳು ಮಧ್ಯಭಾಗದವರೆಗೆ ಅಡುಗೆ ಎಣ್ಣೆ ಅದರಲ್ಲೂ ತಾಳೆ ಎಣ್ಣೆ ಬೆಲೆ ಸೆ.10ರ ವರೆಗೆ 100 ರೂ. ಒಳಗಿತ್ತು. ಹೋಲ್‌ಸೇಲ್‌ನಲ್ಲಿ 90 ರೂ. ಮಾರಾಟ ಕಂಡಿದ್ದರೆ, ರಿಟೇಲ್‌ ಆಗಿ 95 ರೂ. ಮಾರಾಟವಾಗುತ್ತಿತ್ತು. ಇದೀಗ ಒಂದು ತಿಂಗಳ ಅಂತರದಲ್ಲಿ ಸುಮಾರು ಶೇ.40ರಷ್ಟು ಹೆಚ್ಚಳ ಕಂಡಿದೆ. ಇದರಿಂದ ಸದ್ಯ ಮಾರುಕಟ್ಟೆಯಲ್ಲಿ 130ರಿಂದ 135 ರೂ. ಪ್ರತಿ ಲೀಟರ್‌ ಮಾರಾಟ ಕಾಣುತ್ತಿದೆ.

ಪಾಮ್‌ ಎಣ್ಣೆ ಜತೆ ಸೂರ್ಯಕಾಂತಿ ಎಣ್ಣೆ ಬೆಲೆಯೂ ಹೆಚ್ಚಳ ಕಂಡಿದೆ. ಸೆ.10ರವರೆಗೆ 110ರಿಂದ 115 ರೂ. ಪ್ರತಿ ಲೀಟರ್‌ಗೆ ದರ ಇತ್ತು. ಇದೀಗ ಬ್ರ್ಯಾಂಡೆಡ್‌ ಎಣ್ಣೆ ಬೆಲೆ 140 ರೂ. ದಾಟಿದೆ. ಕೆಲವು ಬ್ರ್ಯಾಂಡ್‌ ಎಣ್ಣೆಗಳ ದರ 150 ರೂ. ಮುಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಶಯ ಪರಿಹರಿಸಿ, ನ್ಯಾಯಾಂಗದ ಘನತೆ ಎತ್ತಿ ಹಿಡಿದ ನ್ಯಾಯಮೂರ್ತಿ

ಕಳೆದ ತಿಂಗಳು ಕೇಂದ್ರ ಸರಕಾರ ಪಾಮ್‌ ಹಾಗೂ ಸೂರ್ಯಕಾಂತಿ ಎಣ್ಣೆ ಆಮದು ಮೇಲೆ ಸುಂಕ ಹೆಚ್ಚಳ ಮಾಡಿತ್ತು. ಅದು ನೇರವಾಗಿ ಪ್ರಭಾವ ಬೀರಿದ್ದು ಶೇ.20ರಷ್ಟು ದರ ಹೆಚ್ಚಳ ಕಂಡಿತ್ತು. ಇನ್ನೂ ಹಬ್ಬದ ಸೀಸನ್‌ ಆಗಿದ್ದರಿಂದ ಇನ್ನುಳಿದ ಶೇ.20ರಷ್ಟು ಬೆಲೆ ಹೆಚ್ಚಳ ಕಂಡಿದೆ ಎಂದು ಎಣ್ಣೆ ವ್ಯಾಪಾರಿಗಳು ಹೇಳುತ್ತಿದ್ದಾರೆ. ಪಾಮ್‌ ಎಣ್ಣೆ ದೇಶದಲ್ಲಿಉತ್ಪಾದನೆಗಿಂತ ಆಮದಿನ ಮೇಲೆ ಹೆಚ್ಚಿನ ಅವಲಂಬನೆ ಹೊಂದಿದೆ. ಇದರಿಂದ ಸುಂಕ ಹೆಚ್ಚಳ ನೇರವಾಗಿ ಪ್ರಭಾವ ಬೀರಿದೆ ಎನ್ನಲಾಗುತ್ತಿದೆ.

ಮುಖ್ಯವಾಗಿ ನವರಾತ್ರಿ ವೇಳೆ ಉತ್ತರ ಕರ್ನಾಟಕದಲ್ಲಿಎಣ್ಣೆ ಬಳಕೆ ಹೆಚ್ಚಳ ಆಗುತ್ತದೆ. ಪ್ರತಿ ಮನೆಗಳಲ್ಲೂ9 ದಿನ ಘಟ ಸ್ಥಾಪನೆ ಮಾಡಲಾಗುತ್ತದೆ. ಈ ವೇಳೆ ನಿರಂತರ ದೇವಿ ಹೆಸರಿನಲ್ಲಿಜ್ಯೋತಿ ಪ್ರಜ್ವಲನೆ ಮಾಡಲಾಗುತ್ತದೆ. ಇದರಿಂದ ಪ್ರತಿ ಬಾರಿ ಹಬ್ಬದ ವೇಳೆ ಬೆಲೆ ತುಸು ಹೆಚ್ಚಳ ಕಾಣುತ್ತಿತ್ತು. ಆದರೆ, ಈ ಬಾರಿ ಕೇಂದ್ರದ ಆಮದು ಸುಂಕ ಹೆಚ್ಚಳ ಹಿನ್ನೆಲೆ ಒಂದು ಬಾರಿಗೆ ಶೇ.30ರಿಂದ 40 ರಷ್ಟು ಹೆಚ್ಚಳ ಕಾಣುವಂತಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...