ಉತ್ತರ ಪ್ರದೇಶ ರಾಜ್ಯದ ಬರೇಲಿ ಜಿಲ್ಲೆಯಲ್ಲಿ ಎಸ್ಯುವಿ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು ಸೇರಿದಂತೆ ಎಂಟು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಟೈರ್ ಪಂಕ್ಚರ್ ಆದ ನಂತರ ಎಸ್ಯುವಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ. ನಂತರ ಕಾರು ಬ್ಯಾರಿಕೇಟ್ನಿಂದ ರಸ್ತೆಯ ಇನ್ನೊಂದು ಬದಿಗೆ ಹಾರಿ ವಿರುದ್ಧ ದಿಕ್ಕಿನಿಂದ ಬಂದ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬರೇಲಿ-ನೈನಿತಾಲ್ ರಸ್ತೆಯ ದುಬೌರಾ ಗ್ರಾಮದ ಬಳಿ ಶನಿವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಅಂದು ಗನ್ ಹಿಡಿದಿದ್ದ ನಕ್ಸಲೈಟ್, ಇಂದು ಕ್ಯಾಬಿನೆಟ್ ಮಿನಿಸ್ಟರ್; ಸೀತಕ್ಕನ ರೋಚಕ ಪಯಣ
ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ಎಸ್ಯುವಿ ಹೊತ್ತಿ ಉರಿದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಗು ಸೇರಿದಂತೆ ಎಂಟು ಜನರ ಸಾವನ್ನು ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಚಂದ್ರಬಾನು ಖಚಿತಪಡಿಸಿದ್ದಾರೆ. ಸಂತ್ರಸ್ತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಎಸ್ಯುವಿ ಸುಮಿತ್ ಗುಪ್ತಾ ಎಂಬುವವರಿಗೆ ಸೇರಿದ್ದು, ಅವರು ಅದನ್ನು ಫುರ್ಖಾನ್ ಅವರಿಗೆ ನೀಡಿದ್ದರು. ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.





