ಚುನಾವಣಾ ಬಾಂಡ್ | ತನಿಖಾ ಸಂಸ್ಥೆಗಳ ದಾಳಿಗೂ 14 ಸಂಸ್ಥೆಗಳ ದೇಣಿಗೆಗೂ ನಂಟು?

Date:

ಚುನಾವಣಾ ಬಾಂಡ್‌ ಮೂಲಕ ಯಾವೆಲ್ಲ ಸಂಸ್ಥೆಗಳು ದೇಣಿಗೆಯನ್ನು ನೀಡಿದೆ ಎಂಬ ಮಾಹಿತಿಯನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಿದ್ದರೂ ಸಂಪೂರ್ಣ ಮಾಹಿತಿಯನ್ನು ನೀಡಿಲ್ಲ. ಯಾರು ಹಣ ನೀಡಿದ್ದಾರೆ, ಎಷ್ಟು ನೀಡಿದ್ದಾರೆ ಎಂಬ ಮಾಹಿತಿ ಇದ್ದರೂ ಕೂಡಾ ಯಾರು, ಯಾವ ಪಕ್ಷಕ್ಕೆ ಹಣ ನೀಡಿದ್ದಾರೆ ಎಂಬ ಸ್ಪಷ್ಟ ಮಾಹಿತಿಯನ್ನ ಎಸ್‌ಬಿಐ ಮರೆಮಾಚಿದೆ.

ಈ ನಡುವೆ ಚುನಾವಣಾ ಬಾಂಡ್‌ನಲ್ಲಿ ದೇಣಿಗೆ ನೀಡಿದವರ ಒಂದು ಕುತೂಹಲಕಾರಿ ವಿಷಯವನ್ನು ನಾವು ತಿಳಿಯಲೇಬೇಕು. ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿರುವ 30 ದಾನಿಗಳ ಪೈಕಿ 14 ಸಂಸ್ಥೆ ಅಥವಾ ವ್ಯಕ್ತಿಗಳ ಮೇಲೆ ಕೇಂದ್ರದ ತನಿಖಾ ಸಂಸ್ಥೆಗಳಿಂದ ದಾಳಿ ನಡೆಸಲಾಗಿದೆ.

‘ಲಾಟರಿ ಕಿಂಗ್‌’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕೀಯ ಪಕ್ಷಗಳಿಗೆ ಅತೀ ಹೆಚ್ಚು ದೇಣಿಗೆ ನೀಡಿದವರು ಟಾಟಾ, ಬಿರ್ಲಾ, ಅಂಬಾನಿ, ಅದಾನಿ ಆಗಿರಬಹುದು ಎಂದು ನಾವೆಲ್ಲರೂ ಊಹಿಸಿದರೆ ಅದು ತಪ್ಪು. ‘ಲಾಟರಿ ಕಿಂಗ್’ ಎಂದೇ ಕರೆಯಲ್ಪಡುವ ಸ್ಯಾಂಟಿಯಾಗೊ ಮಾರ್ಟಿನ್‌ರ ಫ್ಯೂಚರ್ ಗೇಮಿಂಗ್ ಆಂಡ್ ಹೊಟೇಲ್ ಸರ್ವಿಸಸ್ ಕಂಪನಿಯು ರಾಜಕೀಯ ಪಕ್ಷಗಳಿಗೆ ಬರೋಬ್ಬರಿ 1368 ಕೋಟಿ ರೂಪಾಯಿ ದೇಣಿಗೆ ನೀಡಿ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ನಿಂತಿದೆ.

ಲಾಟರಿ ಕಿಂಗ್‌ ಮಾರ್ಟಿನ್‌ರ ಈ ಸಂಸ್ಥೆಯ ಮೇಲೆ 2022ರಲ್ಲಿ ಮನಿಲಾಂಡರಿಂಗ್ ಪ್ರಕರಣದಲ್ಲಿ ಕೇಂದ್ರದ ತನಿಖಾ ಸಂಸ್ಥೆಯಾದ ಇಡಿ ದಾಳಿ ಮಾಡಿ 409 ಕೋಟಿ ರೂಪಾಯಿ ಆಸ್ತಿ ಜಪ್ತಿ ಮಾಡಿದೆ. ಈಗ ಈ ಸಂಸ್ಥೆಯೇ ಯಾವುದೋ ಒಂದು ಪಕ್ಷಕ್ಕೆ 1368 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಕೇಂದ್ರದ ತನಿಖಾ ಸಂಸ್ಥೆಗಳ ದಾಳಿ ನಡುವೆ 1368 ಕೋಟಿ ರೂಪಾಯಿ ದೇಣಿಗೆ ನೀಡಿರುವುದು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದೆಡೆ ಬೊಟ್ಟು ಮಾಡುವಂತೆ ಮಾಡಿದೆ.

ಮೆಘಾ ಇಂಜಿನಿಯರಿಂಗ್ ಆಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್

ಮೆಘಾ ಇಂಜಿನಿಯರಿಂಗ್ ಆಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಅತೀ ಹೆಚ್ಚು ದೇಣಿಗೆ ನೀಡಿದ ಸಂಸ್ಥೆಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. 2019ರ ಅಕ್ಟೋಬರ್‌ನಲ್ಲಿ ಕೃಷ್ಣ ರೆಡ್ಡಿಗೆ ಸೇರಿದ ಈ ಸಂಸ್ಥೆಯ ಹೈದಾರಾಬಾದ್‌ನ ಕಚೇರಿ ಮತ್ತು ಇತರೆಡೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದೆ. ಅದಾದ ಬಳಿಕ ಈವರೆಗೆ ಈ ಸಂಸ್ಥೆ ಚುನಾವಣಾ ಬಾಂಡ್‌ ಮೂಲಕ 966 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಅಷ್ಟು ಮಾತ್ರವಲ್ಲ ಈ ಸಂಸ್ಥೆಗೆ ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಗುತ್ತಿಗೆಯೂ ಲಭಿಸಿದೆ.

ಇತರೆ ಸಂಸ್ಥೆಗಳ ಮೇಲೆ ದಾಳಿ

2020ರಲ್ಲಿ ಸಿಬಿಐ ತನಿಖೆಗೆ ಒಳಗಾಗಿರುವ ಹಲ್ದಿಯಾ ಇಂಜಿನಿಯರಿಂಗ್ ಕಂಪನಿ 377 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಇನ್ನು ವೇದಾಂತ ಗ್ರೂಪ್‌ನ ಟಿಎಸ್‌ಪಿಎಲ್ ಸಂಸ್ಥೆ ಮೇಲೆ ಮನಿಲಾಂಡರಿಂಗ್ ಆರೋಪದಲ್ಲಿ 2022ರಲ್ಲಿ ಇಡಿ ದಾಳಿ ಮಾಡಲಾಗಿದ್ದು ಈ ವೇದಾಂತ ಗ್ರೂಪ್‌ ಚುನಾವಣಾ ಬಾಂಡ್‌ ಮೂಲಕ 400 ಕೋಟಿ ರೂಪಾಯಿ ದೇಣಿಗೆ ನೀಡಿದೆ.

ಹೈದಾರಾಬಾದ್ ಮೂಲದ ಕಾರ್ಪೋರೇಟ್ ಹಾಸ್ಪಿಟಲ್ ಆದ ಯಶೋಧಾ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ಮೇಲೆ 2020ರಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. 2021ರಲ್ಲಿ ಈ ಸಂಸ್ಥೆ ಚುನಾವಣಾ ಬಾಂಡ್ ಮೂಲಕ 162 ಕೋಟಿ ರೂಪಾಯಿ ದೇಣಿಗೆ ನೀಡಿದೆ.

ಇನ್ನು ಡಿಎಲ್‌ಎಫ್‌ ಕಮರ್ಷಿಯಲ್ ಡೆವಲಪರ್ಸ್ ಕಂಪನಿ 130 ಕೋಟಿ ರೂಪಾಯಿಯನ್ನು ರಾಜಕೀಯ ಪಕ್ಷ ಒಂದಕ್ಕೆ ಚುನಾವಣಾ ಬಾಂಡ್ ಮೂಲಕ ದೇಣಿಗೆ ನೀಡಿದೆ. ಈ ಸಂಸ್ಥೆ ಮೇಲೆ 2019ರಲ್ಲಿ ಭೂಮಿ ಹಂಚಿಕೆಯಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪದಲ್ಲಿ ಸಿಬಿಐ ದಾಳಿ ನಡೆಸಿತ್ತು. ನವೆಂಬರ್ 2023ರಲ್ಲಿ ಮತ್ತೆ ಈ ಸಂಸ್ಥೆಯ ಗುರುಗ್ರಾಮದ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಜಿಂದಾಲ್ ಸ್ಟೀಲ್ ಮೇಲೆ ವಿದೇಶಿ ವಿನಿಮಯ ನಿಯಮವನ್ನು ಉಲ್ಲಂಘಿಸಿದ ಆರೋಪದಲ್ಲಿ ಏಪ್ರಿಲ್ 2022ರಲ್ಲಿ ಇಡಿ ದಾಳಿ ಮಾಡಲಾಗಿದೆ. ಈ ಕಂಪನಿ 123 ಕೋಟಿ ರೂಪಾಯಿಯನ್ನು ಚುನಾವಣಾ ಬಾಂಡ್ ಮೂಲಕ ದೇಣಿಗೆಯಾಗಿ ನೀಡಿದೆ. ಚೆನ್ನೈ ಗ್ರೀನ್‌ವುಡ್ ಪ್ರೈವೇಟ್ ಲಿಮಿಟೆಡ್‌ ಸಂಸ್ಥೆ ಮೇಲೆ 2021ರ ಜುಲೈನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ಸಂಸ್ಥೆ 2022ರ ಜನವರಿಯಲ್ಲಿ ಚುನಾವಣಾ ಬಾಂಡ್‌ ಖರೀದಿಸಿ 105 ಕೋಟಿ ರೂಪಾಯಿ ದೇಣಿಗೆ ನೀಡಿದೆ.

ಡಾ ರೆಡ್ಡೀಸ್ ಲ್ಯಾಬೋರೆಟರೀಸ್‌ನ ಡಾ ಕೆ ನಾಗೇಂದ್ರ ರೆಡ್ಡಿ ಮೇಲೆ 2023ರ ನವೆಂಬರ್‌ನಲ್ಲಿ ಐಟಿ ದಾಳಿ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ತೆಲಂಗಾಣದ ಶಿಕ್ಷಣ ಸಚಿವರು ಸಬಿತಾ ಇಂದ್ರಾ ರೆಡ್ಡಿಗೆ ಸೇರಿದ ಕಚೇರಿಗಳ ಮೇಲೆಯೂ ದಾಳಿ ಮಾಡಲಾಗಿದೆ. ಅದಾದ ಬಳಿಕ ಈವರೆಗೆ ಡಾ ರೆಡ್ಡೀಸ್ ಲ್ಯಾಬೋರೆಟರೀಸ್‌ ರಾಜಕೀಯ ಪಕ್ಷವೊಂದಕ್ಕೆ 80 ಕೋಟಿ ರೂಪಾಯಿ ದೇಣಿಗೆ ನೀಡಿದೆ.

ಇನ್ನು ಐಎಫ್‌ಬಿ ಅಗ್ರೋ ಲಿಮಿಟೆಡ್ ಮೇಲೆ 2020ರ ಜೂನ್‌ನಲ್ಲಿ ಡಿಜಿಜಿಎಸ್‌ಟಿ ದಾಳಿ ನಡೆಸಿದೆ. ಈ ಸಂಸ್ಥೆ ಚುನಾವಣಾ ಬಾಂಡ್ ಮೂಲಕ 92 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಎನ್‌ಸಿಸಿ ಲಿಮಿಟೆಡ್ ಸಂಸ್ಥೆಯು 60 ಕೋಟಿ ರೂಪಾಯಿ ಚುನಾವಣಾ ಬಾಂಡ್ ದೇಣಿಗೆ ನೀಡಿದ್ದು, ಈ ಸಂಸ್ಥೆ ಮೇಲೆ 2022ರಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಡಿವೀಸ್ ಲ್ಯಾಬೋರೇಟರಿಸ್‌ 2019ರಲ್ಲಿ ಐಟಿ ದಾಳಿಗೆ ಒಳಗಾಗಿತ್ತು. ಈ ಸಂಸ್ಥೆ ಚುನಾವಣಾ ಬಾಂಡ್ ಮೂಲಕ 55 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಯುಪಿಎಲ್‌ ಸಂಸ್ಥೆ ಮೇಲೆ 2020ರ ಜನವರಿಯಲ್ಲಿ ದಾಳಿ ಆಗಿದೆ. ಈ ಸಂಸ್ಥೆ 50 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಅರಬಿಂದೋ ಫಾರ್ಮಾದ ಡೈರೆಕ್ಟರ್‌ ಶರತ್ ರೆಡ್ಡಿಯನ್ನು ಮನಿಲಾಂಡರಿಂಗ್ ಪ್ರಕರಣದಲ್ಲಿ 2022ರ ನವೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಈ ಸಂಸ್ಥೆ 1.6 ಕೋಟಿ ರೂಪಾಯಿ ಬಾಂಡ್ ದೇಣಿಗೆ ನೀಡಿದೆ.

ಬಿಜೆಪಿ ಟಾಪ್‌ನಲ್ಲಿ

ನಾವು ಯಾವ ಪಕ್ಷಕ್ಕೆ ಅಧಿಕ ದೇಣಿಗೆ ಬಂದಿದೆ ಎಂದು ನೋಡಿದರೆ ಟಾಪ್‌ನಲ್ಲಿ ಇರುವುದು 6060.51 ಕೋಟಿ ರೂಪಾಯಿ ದೇಣಿಗೆ ಪಡೆದ ಬಿಜೆಪಿ. ಎರಡನೇ ಸ್ಥಾನದಲ್ಲಿ 1609.53 ಕೋಟಿ ಪಡೆದ ಟಿಎಂಸಿ ಇದ್ದರೆ ಮೂರನೇ ಸ್ಥಾನದಲ್ಲಿ 1421.85 ಕೋಟಿ ಪಡೆದ ಕಾಂಗ್ರೆಸ್ ಇದೆ. ಬಿಆರ್‌ಎಸ್ 1214.61 ಕೋಟಿ ರೂಪಾಯಿ, ಬಿಜೆಡಿ 775.50 ಕೋಟಿ ದೇಣಿಗೆ ಪಡೆದಿದೆ. ಇವು ಅಧಿಕ ದೇಣಿಗೆ ಪಡೆದ ಐದು ಪಕ್ಷಗಳಾಗಿದೆ.

ಇನ್ನು ಮೇಲೆ ತಿಳಿಸಲಾದ ಸಂಸ್ಥೆಗಳ ಮೇಲೆ ತನಿಖಾ ಸಂಸ್ಥೆಗಳ ದಾಳಿ ಬಳಿಕ ಈ ಸಂಸ್ಥೆಗಳು ದೇಣಿಗೆಯನ್ನು ನೀಡಿದೆ ಎಂದು ಹೇಳಲಾಗದು. ಆದರೆ ತನಿಖಾ ಸಂಸ್ಥೆಗಳು ದಾಳಿ ಮಾಡಿದ ಯಾವೆಲ್ಲ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ ಎಂದು ನಾವು ನೋಡಿದರೆ ಇವಿಷ್ಟು ಸಂಸ್ಥೆಗಳು ಬರುತ್ತದೆ. ಒಟ್ಟಿನಲ್ಲಿ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಾರ್ಪೋರೇಟ್ ಸಂಸ್ಥೆಗಳಿಂದ ದೇಣಿಗೆ ಲೂಟಿ ಮಾಡಿದೆ ಎಂಬ ಆರೋಪಗಳನ್ನು ಅಲ್ಲಗಳೆಯಲಾಗದು.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...