ಚುನಾವಣಾ ಬಾಂಡ್ | ಸುಪ್ರೀಂ ಆದೇಶದ ಬಳಿಕ ಪಾತಾಳಕ್ಕಿಳಿದ ಎಸ್‌ಬಿಐ ಷೇರು

Date:

ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡಲು ಜೂನ್ 30ರವರೆಗೆ ಅವಕಾಶವನ್ನು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಇದರ ಬೆನ್ನಲ್ಲೇ ಷೇರುಪೇಟೆಯಲ್ಲಿ ಎಸ್‌ಬಿಐ ಷೇರುಗಳು ಪಾತಾಳಕ್ಕಿಳಿದಿದೆ.

ನಾಲ್ಕು ತಿಂಗಳುಗಳ ಅವಕಾಶ ಕೋರಿ ಎಸ್‌ಬಿಐ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ನಾಳೆಯೇ ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಆದೇಶವನ್ನು ಪ್ರಕಟಿಸುತ್ತಿದ್ದಂತೆಯೇ ಎಸ್‌ಬಿಐ ಷೇರು ಸುಮಾರು ಶೇಕಡ 2ರಷ್ಟು ಕುಸಿದಿದೆ.

ಸಂಜೆ 3:30ರ ಸಮಯಕ್ಕೆ ಎಸ್‌ಬಿಐ ಷೇರು ಶೇಕಡ 2ರಷ್ಟು ಇಳಿದು 773.95 ರೂಪಾಯಿಗೆ ತಲುಪಿದೆ. ಈ ಹಿಂದಿನ ವಹಿವಾಟಿನಲ್ಲಿದ್ದ ಎಸ್‌ಬಿಐ ಷೇರಿನ ದರಕ್ಕಿಂತ ಈ ದರದಲ್ಲಿ ನಾವು 15 ರೂಪಾಯಿ ವ್ಯತ್ಯಾಸವನ್ನು ಕಾಣಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಬಿಐ ಇಂಟ್ರಾಡೇ ವಹಿವಾಟಿನಲ್ಲಿ 771ರ ಕನಿಷ್ಠಮಟ್ಟಕ್ಕೆ ಇಳಿದಿದೆ. ಆದರೆ ಎಸ್‌ಬಿಐನ ಈ ಷೇರು ಕುಸಿತಕ್ಕೆ ಸುಪ್ರೀಂ ಕೋರ್ಟ್‌ನ ಆದೇಶ ಮಾತ್ರವಲ್ಲ ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರ ನಕಾರಾತ್ಮಕ ಭಾವನೆ ಕೂಡಾ ಕಾರಣವೆಂದು ತಜ್ಞರು ಹೇಳುತ್ತಾರೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ವದ, ನ್ಯಾಯಮೂರ್ತಿ ಸಂಜೀವ್ ಖನ್ನಾ, ಬಿಆರ್‌ ಗವಾಯ್, ಜೆಬಿ ಪಾರ್ದಿವಾಲಾ, ಮನೋಜ್ ಮಿಶ್ರಾರನ್ನು ಒಳಗೊಂಡ ಪಂಚ ಸದಸ್ಯ ಪೀಠವು ಇಂದು ಎಸ್‌ಬಿಐನ ಅರ್ಜಿಯ ವಿಚಾರಣೆ ನಡೆಸಿದೆ.

“ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿ ಇರುವುದಾಗಿ ಎಸ್‌ಬಿಐ ತನ್ನ ಅರ್ಜಿಯಲ್ಲೇ ಹೇಳಿಕೊಂಡಿದೆ” ಎಂದು ಒತ್ತಿ ಹೇಳಿರುವ ಸುಪ್ರೀಂ ಮಾಹಿತಿ ಚುನಾವಣಾ ಆಯೋಗಕ್ಕೆ ನೀಡಲು ಒಂದೇ ದಿನದ ಅವಕಾಶವನ್ನು ನೀಡಿದೆ.

ಅಲ್ಲದೆ ಎಲ್ಲ ಮಾಹಿತಿಯನ್ನು ಒಟ್ಟುಗೂಡಿಸಿ ಎಸ್‌ಬಿಐ ತನ್ನ ವೆಬ್‌ಸೈಟ್‌ನಲ್ಲಿ ಮಾರ್ಚ್‌ 15 ಸಂಜೆ 5 ಗಂಟೆಯೊಳಗೆ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ಆದೇಶಿಸಿದೆ.

ಚುನಾವಣಾ ಬಾಂಡ್‌ಗಳ ಬಗ್ಗೆ ಫೆ.15 ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಪ್ರಕ್ರಿಯೆ ಅಸಾಂವಿಧಾನಿಕ ಹಾಗೂ ನಾಗರಿಕರ ಮಾಹಿತಿ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ತೀರ್ಪು ನೀಡಿತ್ತು. ಎಸ್‌ಬಿಐಗೆ ಚುನಾವಣಾ ಬಾಂಡ್‌ನ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಲು ಮಾರ್ಚ್‌ 6ರವರೆಗೆ ಸಮಯ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...