ಶೇ. 0.001 ನಿರ್ಲಕ್ಷ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು: ನೀಟ್‌ ಪರೀಕ್ಷೆ ಬಗ್ಗೆ ಸುಪ್ರೀಂ ಆಕ್ರೋಶ

Date:

ನೀಟ್ – ಯುಜಿ 2024ರ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮವೆಸಗಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿಗೊಳಿಸಿದೆ.

ರಜಾ ಪೀಠದ ನ್ಯಾಯಾಧೀಶರಾದ ವಿಕ್ರಂನಾಥ್ ಹಾಗೂ ಎಸ್‌ಟಿ ಭಟ್ಟಿ ಅವರ ಪೀಠವು ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ಹಾಗೂ ಕೆಲವು ವಿದ್ಯಾರ್ಥಿಗಳಿಗೆ ನೀಡಲಾದ ಕೃಪಾಂಕ ಅಂಕಗಳ ಕುರಿತ ಹಿಂದಿನ ಅರ್ಜಿಗಳ ರೀತಿಯ ಒಂದು ಪ್ರಕರಣವನ್ನು ವಿಚಾರಣೆ ನಡೆಸಿತು.

ರಾಷ್ಟ್ರದಾದ್ಯಂತ ವಿದ್ಯಾರ್ಥಿಗಳು ಕಠಿಣ ಪರಿಶ್ರಮವಹಿಸಿ ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವಾಗ ಎಲ್ಲ ರೀತಿಯ ಗಂಭೀರತೆ ಕೈಗೊಳ್ಳಬೇಕು. ಯಾರಾದರೂ ಶೇ.0.001 ನಿರ್ಲಕ್ಷ್ಯ ವಹಿಸಿದರೂ ಅದನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ಪರೀಕ್ಷೆಗಾಗಿ ಮಕ್ಕಳು ಅಪಾರ ಶ್ರಮ ಹಾಕಿರುತ್ತಾರೆ ಎಂಬುದನ್ನು ಮರೆಯಬಾರದು ಎಂದು ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ಸಂದರ್ಭದಲ್ಲಿ ತಿಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೀಟಾಗಿಲ್ಲ ಎನ್ನುವುದು ಗೊತ್ತಿದ್ದೂ ಭಂಡತನ ಮೆರೆದ ಬಿಜೆಪಿ

“ವ್ಯವಸ್ಥೆಯಲ್ಲಿ ವಂಚನೆವೆಸಗಿರುವ ವ್ಯಕ್ತಿಯ ಸಂದರ್ಭವನ್ನು ಕಲ್ಪಿಸಿಕೊಳ್ಳಿ, ಆತ ವೈದ್ಯನಾದರೆ ಸಮಾಜಕ್ಕೆ ಅತ್ಯಂತ ಹಾನಿಕಾರಕನಾಗುತ್ತಾನೆ. ಪ್ರಮುಖವಾಗಿ ಪರೀಕ್ಷೆಗಾಗಿ ಮಕ್ಕಳು ಅಪಾರ ಶ್ರಮ ಹಾಕಿರುತ್ತಾರೆ ಎಂಬುದನ್ನು ನಮ್ಮೆಲ್ಲರಿಗೂ ತಿಳಿದಿದೆ” ಎಂದು ನ್ಯಾಯಮೂರ್ತಿಗಳಾದ ಭಟ್ಟಿ ತಿಳಿಸಿದರು.

ಪರೀಕ್ಷೆ ನಡೆಸುವ ಜವಾಬ್ದಾರಿ ಹೊಂದಿರುವ ಸಂಸ್ಥೆಯನ್ನು ನೀವು ಪ್ರತಿನಿಧಿಸಿರುವ ಕಾರಣ ನ್ಯಾಯಾಲಯವನ್ನು ಪ್ರವೇಶಿಸಿದ ನಂತರ ನಿಮ್ಮ ನಿಲುವುಗಳು ಬದಲಾಗಬಾರದು. ನೀವು ದೃಢವಾಗಿ ನಿಲ್ಲಬೇಕು, ಯಾರಾದರೂ ತಪ್ಪು ಮಾಡಿದ್ದರೆ, ಹೌದು ತಪ್ಪಾಗಿದೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರೆ ನಿಮ್ಮ ಕಾರ್ಯವೈಖರಿಯ ಬಗ್ಗೆ ಕನಿಷ್ಠ ಆತ್ಮವಿಶ್ವಾಸ ಮೂಡುತ್ತದೆ ಎಂದು ಸುಪ್ರೀಂ ಪೀಠ ತಿಳಿಸಿತು.

“ಯಾರಾದರೂ ತಪ್ಪೆಸಗಿದರೆ, ಅವರನ್ನು ಸಂಪೂರ್ಣವಾಗಿ ಪರಿಶೀಲನೆಗೊಳಪಡಿಸಬೇಕು. ಅದು ಎಲ್ಲಿ ತಪ್ಪಾಗಿದೆ, ಎಷ್ಟು ಸೆಲ್‌ಫೋನ್‌ಗಳನ್ನು ಬಳಸಲಾಗಿದೆ ಎಂಬುದನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು” ಎಂದು ಪೀಠ ತಿಳಿಸಿತು.

ಈಗಾಗಲೇ ಸುಪ್ರೀಂ ಪೀಠವು ಸಿಬಿಐ ತನಿಖೆಯ ಬಗ್ಗೆ ಕೇಂದ್ರ ಹಾಗೂ ಎನ್‌ಟಿಎಗೆ ಜೂನ್ 14 ರಂದು ನೋಟಿಸ್ ನೀಡಿದೆ. ಎಲ್ಲ ಅರ್ಜಿಗಳ ವಿಚಾರಣೆಯನ್ನು ಜುಲೈ 6 ರಂದು ಕೈಗೊಳ್ಳಲಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...