ಮತಯಂತ್ರ ತೆರೆಯಲು ಒಟಿಪಿ ಅಗತ್ಯವಿಲ್ಲ: ಮುಂಬೈ ಚುನಾವಣಾಧಿಕಾರಿ

Date:

ವಿದ್ಯುನ್ಮಾನ ಮತಯಂತ್ರ ತೆರೆಯಲು ಮುಂಬೈನ ಶಿವಸೇನಾ ಸಂಸದರೊಬ್ಬರ ಸಂಬಂಧಿಕರೊಬ್ಬರು ಮೊಬೈಲ್‌ ಮೂಲಕ ಒಟಿಪಿ ಬಳಸಿದ್ದಾರೆ ಎಂಬ ಆರೋಪವನ್ನು ಚುನಾವಣಾ ಅಧಿಕಾರಿಗಳು ತಳ್ಳಿಹಾಕಿದ್ದಾರೆ.

ಮುಂಬೈ ವಾಯುವ್ಯ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿ ವಂದನಾ ಸೂರ್ಯವಂಶಿ, ಇವಿಎಂ ಸ್ವತಂತ್ರ ವ್ಯವಸ್ಥೆಯ ಯಂತ್ರವಾಗಿದ್ದು ಮತಯಂತ್ರ ತೆರೆಯಲು ಒಟಿಪಿ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಮಾಧ್ಯಮವೊಂದು ಲೋಕಸಭೆ ಚುನಾವಣೆಯಲ್ಲಿ 48 ಮತಗಳ ಅಂತರದಲ್ಲಿ ಜಯಗಳಿಸಿದ ಶಿಂಧೆ ಬಣದ ಶಿವಸೇನಾ ಅಭ್ಯರ್ಥಿಯಾದ ರವೀಂದ್ರ ವೈಕರ್‌ ಅವರ ಸಂಬಂಧಿಕರು ಜೂನ್‌ 4 ರಂದು ಮತ ಎಣಿಕೆ ಸಂದರ್ಭದಲ್ಲಿ ಪೋನ್‌ ಮೂಲಕ ಒಟಿಪಿ ಬಳಸಿ ಮತ ಯಂತ್ರವನ್ನು ತೆರೆದಿದ್ದರು ಎಂದು ಪ್ರಕಟಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವಿಎಂ ಪ್ರೋಗ್ರಾಂ ವ್ಯವಸ್ಥೆ ಹೊಂದಿರದ ಹಾಗೂ ಯಾವುದೇ ವೈರ್‌ಲೆಸ್‌ ಕಮ್ಯೂನಿಕೇಷನ್‌ ಸಾಮರ್ಥ್ಯ ಬೆಂಬಲಿಸಲದ ಕಾರಣ ಮೊಬೈಲ್‌ ಮೂಲಕ ಒಟಿಪಿ ಅಗತ್ಯವಿಲ್ಲ. ಅಲ್ಲದೆ ಇವಿಎಂಗೆ ಯಾವುದೇ ಯಾವುದೇ ಹೊರಗಿನ ಸಂಪರ್ಕ ಕಲ್ಪಿಸುವುದಕ್ಕೆ ಸಾದ್ಯವಿಲ್ಲ. ಈ ಸುದ್ದಿ ಮಾಧ್ಯಮವೊಂದರ ಮೂಲಕ ಹರಡಲಾಗಿದ್ದು,ಕೆಲ ನಾಯಕರು ಸುಳ್ಳು ಸುದ್ದಿಯನ್ನು ಹರಡಿದ್ದಾರೆ” ಎಂದು ಸೂರ್ಯವಂಶಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪ್ರಕರಣಗಳು ಮತ್ತು ‘ಮಾನವಂತ’ ಮಾಧ್ಯಮಗಳು

ಸುಳ್ಳು ಸುದ್ದಿ ಹರಡಿದ ಮಾಧ್ಯಮದ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಇದೇ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ತಿಳಿಸಿದರು.

“ಆಧುನಿಕ ತಂತ್ರ ವ್ಯವಸ್ಥೆ ಹಾಗೂ ಸುರಕ್ಷಿತ ಕ್ರಮಗಳನ್ನು ಅಳವಡಿಸಿರುವುದರಿಂದ ಮತಯಂತ್ರವನ್ನು ತಿರುಚುವುದಕ್ಕೆ ಸಾಧ್ಯವಿಲ್ಲ. ಸುರಕ್ಷಿತ ಕ್ರಮಗಳನ್ನು ಒಳಗೊಂಡ ಪ್ರತಿಯೊಂದನ್ನು ಅಭ್ಯರ್ಥಿಗಳು ಹಾಗೂ ಅವರ ಏಜೆಂಟ್‌ಗಳ ಉಪಸ್ಥಿತಿಯಲ್ಲಿ ಅಳವಡಿಸಲಾಗಿರುತ್ತದೆ” ಎಂದು ಸೂರ್ಯವಂಶಿ ತಿಳಿಸಿದ್ದಾರೆ.

ಸಂಸದ ರವೀಂದ್ರ ವೈಕರ್‌ ಅವರ ಸಂಬಂಧಿ ಮಂಗೇಶ್ ಪಂಡ್ಲಿಕರ್‌ ಜೂನ್‌ 4 ರಂದು ಮತಯಂತ್ರ ತೆರೆಯಲು ಒಟಿಪಿ ಬಳಸಿದ್ದರು ಎಂದು ಮಾಧ್ಯಮದಲ್ಲಿ ಪ್ರಕಟವಾಗಿತ್ತು.

ಮೊಬೈಲ್‌ ಫೋನಿನಲ್ಲಿರುವ ಕರೆ ವಿವರಗಳನ್ನು ಪತ್ತೆ ಹಚ್ಚಲು ಹಾಗೂ ಬೇರೆ ಉದ್ದೇಶಕ್ಕೆ ಬಳಸಲಾಗಿದೆಯೆ ಎಂಬುದನ್ನು ಪರೀಕ್ಷಿಸಲು ಫೋರೆನ್ಸಿಕ್‌ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗೇಶ್ ಪಂಡ್ಲಿಕರ್‌ ವಿರುದ್ಧ ಮತಗಟ್ಟೆ ಅಧಿಕಾರಿ ದಿನೇಶ್ ಗೌರವ್‌ ಕೂಡ ದೂರು ನೀಡಿದ್ದಾರೆ. ಅದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಮಂಗೇಶ್ ಪಂಡ್ಲಿಕರ್‌ ಫೋನ್‌ ಬಳಸಿರುವುದನ್ನು ಗಮನಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...