ಹರಿಯಾಣ | ಬಿಜೆಪಿಯ ಮಾಜಿ ಮೈತ್ರಿ ಪಕ್ಷದಿಂದ ವಿಶ್ವಾಸಮತಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ

Date:

ಹರಿಯಾಣ ದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಮಾಜಿ ಮೈತ್ರಿ ಪಕ್ಷ ಜನನಾಯಕ ಜನತಾ ಪಕ್ಷದ(ಜೆಜೆಪಿ) ಅಧ್ಯಕ್ಷರಾದ ದುಷ್ಯಂತ್ ಚೌತಾಲಾ ಅವರು ವಿದಾನಸಭೆಯಲ್ಲಿ ಸರ್ಕಾರಕ್ಕೆ ವಿಶ್ವಾಸಮತ ಕರೆಯುವಂತೆ ರಾಜ್ಯಪಾಲರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಆಡಳಿತಾರೂಢ ಬಿಜೆಪಿ ಮೈತ್ರಿ ಪಕ್ಷಕ್ಕೆ ಮೂವರು ಪಕ್ಷೇತರರು ಬೆಂಬಲ ವಾಪಸ್ ಪಡೆದ ನಂತರ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದಿದೆ.

ಹರಿಯಾಣದ ರಾಜ್ಯಪಾಲರಾದ ಬಂಡಾರು ದತ್ತಾತ್ರೆಯ ಅವರಿಗೆ ಪತ್ರ ಬರೆದಿರುವ ದುಶ್ಯಂತ್ ಚೌತಾಲಾ,ಬಿಜೆಪಿ ಆಡಳಿತಾರೂಢ ಪಕ್ಷಕ್ಕೆ ಮೂವರು ಪಕ್ಷೇತರರು ರಾಜೀನಾಮೆ ನೀಡಿದ ನಂತರ ಸರ್ಕಾರ ಬಹುಮತ ಕಳೆದುಕೊಂಡಿದೆ. ತಕ್ಷಣವೇ ಸೂಕ್ತ ನಿರ್ಧಾರ ತೆಗೆದುಕೊಂಡು ಬಹುಮತ ಸಾಬೀತು ಪಡಿಸಲು ವಿಶ್ವಾಸಮತ ಪರೀಕ್ಷೆಗೆ ಸರ್ಕಾರಕ್ಕೆ ನಿರ್ದೇಶಿಸುವಂತೆ ನಾನು ನಿಮಗೆ ಆಗ್ರಹಿಸುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಯಾಬ್ ಸಿಂಗ್ ಸೈನಿ ಅವರ ನೇತೃತ್ವದಲ್ಲಿ ಮೂರು ತಿಂಗಳ ಹಿಂದೆ ರಚನೆಯಾಗಿದ್ದ ನೂತನ ಸರ್ಕಾರಕ್ಕೆ ಇತ್ತೀಚಿಗೆ ಮೂವರು ಪಕ್ಷೇತರರು ಬೆಂಬಲ ಹಿಂಪಡೆದು ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದಾರೆ. ಮೂವರು ಪಕ್ಷೇತರರು ಬೆಂಬಲ ವಾಪಸ್ ಪಡೆದುಕೊಂಡಿರುವ ಬಗ್ಗೆ ರಾಜ್ಯಪಾಲರಿಗೆ ಪತ್ರ ಕೂಡ ಬರೆದಿದ್ದಾರೆ. ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾದರೆ ನಮ್ಮ ಜೆಜೆಪಿ ಪಕ್ಷ ಬೆಂಬಲ ನೀಡಲಿದೆ” ಎಂದು ಚೌತಾಲಾ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಕಾಶ್ ಆನಂದ್ ಗೆ ಅರ್ಧಚಂದ್ರ ಪ್ರಯೋಗ- ಮಾಯಾವತಿಯವರ ಹಿಂದೆ ಕೆಲಸ ಮಾಡಿರುವ ಶಕ್ತಿಗಳು ಯಾವುವು?

“ ನಾವು ರಾಜ್ಯಪಾಲರಿಗೆ ಪತ್ರ ಬರೆದಿದ್ದು, ಕಾಂಗ್ರೆಸ್ ಕೂಡ ವಿಶ್ವಾಸ ಮತಕ್ಕೆ ಸರ್ಕಾರದ ವಿರುದ್ಧ ಆಗ್ರಹಿಸಬೇಕಿದೆ. ರಾಜ್ಯಪಾಲರು ವಿಶ್ವಾಸಮತ ಕರೆಯಲು ಅಧಿಕಾರ ಹೊಂದಿದ್ದು, ಒಂದು ವೇಳೆ ಸರ್ಕಾರಕ್ಕೆ ಬಹುಮತವಿಲ್ಲದಿದ್ದರೆ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು” ಆಗ್ರಹಿಸಿದ್ದಾರೆ

ಮೂವರು ಪಕ್ಷೇತರ ಶಾಸಕರಾದ ಸೋಬೀರ್ ಸಂಗ್ವಾನ್, ರಣಧೀರ್ ಸಿಂಗ್ ಗೊಲ್ಲೇನ್ ಹಾಗೂ ಧರ್ಮಪಾಲ್ ಗೊಡೇರ್ ಬಿಜೆಪಿ ಸರ್ಕಾರದಿಂದ ತಮ್ಮ ಬೆಂಬಲ ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದರು.

ಒಟ್ಟು 90 ಸದಸ್ಯರ ಹರಿಯಾಣ ವಿಧಾನಸಭೆಯಲ್ಲಿ ಪ್ರಸ್ತುತ 88 ಸದಸ್ಯರಿದ್ದಾರೆ. ಬಹುಮತ ಸಂಖ್ಯೆಗೆ 45 ಸದಸ್ಯರ ಬೆಂಬಲ ಬೇಕು. ಆಡಳಿತರೂಢ ಬಿಜೆಪಿ ಸರ್ಕಾರ 40 ಬಿಜೆಪಿ ಶಾಸಕರೊಂದಿಗೆ 6 ಪಕ್ಷೇತರ ಶಾಸಕರಿದ್ದರು. ಈಗ ಮೂವರು ಪಕ್ಷೇತರ ಶಾಸಕರು ರಾಜೀನಾಮೆ ನೀಡಿರುವುದರಿಂದ ಸರ್ಕಾರದ ಸಂಖ್ಯಾಬಲ 43ಕ್ಕೆ ಕುಸಿದಿದೆ. ವಿಪಕ್ಷ ಕಾಂಗ್ರೆಸ್‌ನ 30 ಶಾಸಕರು ಹಾಗೂ ಮೂವರು ಪಕ್ಷೇತರ ಶಾಸಕರ ಬೆಂಬಲ ಹೊಂದಿದೆ.

ಬಿಜೆಪಿ ಮೈತ್ರಿಯಿಂದ ಹೊರ ಬಂದು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇವೆ ಎಂದಿರುವ ಜೆಜೆಪಿ 10 ಶಾಸಕರನ್ನು ಹೊಂದಿದೆ. ಈ ಸಂಖ್ಯಾಬಲವನ್ನು ಕೂಡಿದರೆ ಒಟ್ಟು  ಕಾಂಗ್ರೆಸ್ ಬೆಂಬಲಿತರ ಸಂಖ್ಯೆ 43 ಆಗಲಿದೆ. ಮ್ಯಾಜಿಕ್ ಸಂಖ್ಯೆ ಪಡೆಯಲು ಇವರಿಗೂ ಇಬ್ಬರು ಶಾಸಕರ ಕೊರತೆ ಎದುರಾಗಲಿದೆ. ಇನ್ನುಳಿದಂತೆ ಐಎನ್ಎಲ್‌ಡಿ ಹಾಗೂ ಹೆಚ್ಎಲ್‌ಪಿ ಪಕ್ಷದ ಇಬ್ಬರು ಶಾಸಕರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...