ಪೋಷಕರಿಗೆ ಮಾದಕ ದ್ರವ್ಯ ನೀಡಿ ಮನೆ ದೋಚಿದ ಆಳು: ಮಾಜಿ ಐಎಎಸ್ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್ ಆರೋಪ

Date:

ತನ್ನ ಹೆತ್ತವರಿಗೆ ಮಾದಕ ದ್ರವ್ಯ ನೀಡಿ ಆಳು ಮನೆ ದೋಚಿಸಿರುವುದಾಗಿ ಅಮಾನತುಗೊಂಡ ಮಾಜಿ ಐಎಎಸ್ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್ ಆರೋಪಿಸಿದ್ದಾರೆ. ಫೊನ್‌ಗಳನ್ನು, ಇತರೆ ಕೆಲವು ವಸ್ತುಗಳನ್ನು ಕದಿಯಲಾಗಿದ್ದು, ಪುಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಖೇಡ್ಕರ್ ಕುಟುಂಬವು ವಾಸಿಸುತ್ತಿರುವ ಬನೇರ್ ರಸ್ತೆಯ ಬಂಗಲೆಯಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಕೇವಲ ಎಂಟು ದಿನಗಳ ಹಿಂದೆ ನೇಪಾಳದಿಂದ ಆಗಮಿಸಿದ್ದ ಆಳು ಓರ್ವ ಈ ಅಪರಾಧ ಎಸಗಿರುವುದಾಗಿ ಶಂಕಿಸಲಾಗಿದೆ. ಆಳು ತನ್ನ ಪೋಷಕರಾದ ದಿಲೀಪ್ ಮತ್ತು ಮನೋರಮಾ ಖೇಡ್ಕರ್‌ಗೆ ಮಾದಕ ದ್ರವ್ಯ ನೀಡಿ ಪ್ರಜ್ಞೆ ತಪ್ಪಿದ್ದಾರೆ ಎಂದು ಖೇಡ್ಕರ್ ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ತನ್ನನ್ನು ಕಟ್ಟಿಹಾಕಿ ಕುಟುಂಬದ ಎಲ್ಲ ಸದಸ್ಯರ ಮೊಬೈಲ್ ಫೋನ್‌ಗಳೊಂದಿಗೆ ಪರಾರಿಯಾಗಿದ್ದಾನೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ನಕಲಿ ಪ್ರಮಾಣ ಪತ್ರ ಪ್ರಕರಣ: ಮಾಜಿ ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನನ್ನು ತಾನು ಬಿಡಿಸಿಕೊಂಡ ಪೂಜಾ ಖೇಡ್ಕರ್ ನಂತರ ಮತ್ತೊಂದು ಫೋನ್ ಬಳಸಿ ಪೊಲೀಸರನ್ನು ಸಂಪರ್ಕಿಸಿದ್ದು, ಚತುರ್ಶೃಂಗಿ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದೆ. ಈ ವೇಳೆ ದಿಲೀಪ್ ಮತ್ತು ಮನೋರಮಾ ಖೇಡ್ಕರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ತಕ್ಷಣ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಖೇಡ್ಕರ್ ಇನ್ನೂ ಲಿಖಿತ ದೂರು ನೀಡಿಲ್ಲ, ಮಾನಸಿಕವಾಗಿ ಉಂಟಾದ ಆಘಾತದಿಂದ ಸುಧಾರಿಸಿಕೊಂಡು ಲಿಖಿತ ದೂರು ನೀಡುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಮೊಬೈಲ್ ಫೋನ್‌ಗಳನ್ನು ಹೊರತುಪಡಿಸಿ ಮನೆಯಿಂದ ಬೇರೆ ಯಾವುದೇ ವಸ್ತುಗಳು ಕಳುವಾಗಿವೆಯೇ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿಲ್ಲ.

ಪೂಜಾ ಖೇಡ್ಕರ್ ಯಾರು?

ಮಹಾರಾಷ್ಟ್ರ ಕೇಡರ್‌ನ 2023ರ ಬ್ಯಾಚ್‌ನ ಐಎಎಸ್ ಟ್ರೈನಿ ಪೂಜಾ ಖೇಡ್ಕರ್, ಅಧಿಕಾರ ದುರುಪಯೋಗ ಮತ್ತು ವಂಚನೆಯ ಆರೋಪಗಳಲ್ಲಿ ಈ ಹಿಂದೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರು. ವಂಚನೆ ಮತ್ತು ಅರ್ಹತಾ ನಿಯಮಗಳ ಉಲ್ಲಂಘನೆಯ ಆರೋಪದಲ್ಲಿ ಕೇಂದ್ರ ಸರ್ಕಾರವು 2024ರ ಸೆಪ್ಟೆಂಬರ್‌ನಲ್ಲಿ ಪೂಜಾ ಖೇಡ್ಕರ್ ಅವರನ್ನು ಸೇವೆಯಿಂದ ವಜಾಗೊಳಿಸಿದೆ. ಹಾಗೆಯೇ ಸುಳ್ಳು ಮಾಹಿತಿ ನೀಡಿ ನಿಗದಿತ ಮಿತಿಗಿಂತ ಅಧಿಕ ಬಾರಿ ಪರೀಕ್ಷೆ ಬರೆದ ಆರೋಪದಲ್ಲಿ ಯುಪಿಎಸ್‌ಸಿ ಪೂಜಾ ಅಭ್ಯರ್ಥಿತನವನ್ನು ರದ್ದುಗೊಳಿಸಿದೆ. ಹಾಗೆಯೇ ಭವಿಷ್ಯದಲ್ಲಿ ಯಾವುದೇ ಪರೀಕ್ಷೆ ಬರೆಯದಂತೆ ಶಾಶ್ವತವಾಗಿ ನಿರ್ಬಂಧಿಸಿದೆ. ಜತೆಗೆ ಒಬಿಸಿ (OBC) ಮೀಸಲಾತಿ ಮತ್ತು ಅಂಗವೈಕಲ್ಯ ಕೋಟಾವನ್ನು ದುರುಪಯೋಗಪಡಿಸಿಕೊಂಡು ಸುಳ್ಳು ಪ್ರಮಾಣಪತ್ರಗಳ ಮೂಲಕ ಐಎಎಸ್ ಹುದ್ದೆಗಿಟ್ಟಿಸಿಕೊಂಡಿರುವ ಗಂಭೀರ ಆರೋಪವೂ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...