ಪಂಜಾಬ್‌ ಮಾಜಿ ಡಿಜಿಪಿ ಪುತ್ರನ ಆಕಸ್ಮಿಕ ಸಾವು; ವಿಡಿಯೋದಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

Date:

ಪಂಜಾಬ್‌ನ ಮಾಜಿ ಡಿಜಿಪಿ ಮೊಹಮ್ಮದ್ ಮುಸ್ತಫಾ ಅವರ ಪುತ್ರ ಅಕೀಲ್ ಅಖ್ತರ್ (35) ಅವರ ಸಾವಿನ ಪ್ರಕರಣದಲ್ಲಿ ಆಘಾತಕಾರಿ ತಿರುವು ದೊರಕಿದೆ. ಮುಸ್ತಫಾ ಅವರ ಪುತ್ರ ಅಖೀಲ್ ಅಖ್ತರ್ (35) ಆಗಸ್ಟ್ ತಿಂಗಳಲ್ಲಿ ಪಂಚಕುಲಾದ ತಮ್ಮ ಮನೆಯಲ್ಲಿ ಮೃತ ಸ್ಥಿತಿಯಲ್ಲಿ ಅವರ ದೇಹ ಪತ್ತೆಯಾಗಿತ್ತು. ಕುಟುಂಬದವರು ಡ್ರಗ್ ಅತಿಯಾದ ಸೇವನೆಯಿಂದ ಸಾವು ಸಂಭವಿಸಿದೆ ಎಂದು ಹೇಳಿದ್ದರು. ಆದರೆ, ಸಾವಿಗೆ ಕೆಲ ದಿನಗಳ ಮುಂಚೆ ಅಕೀಲ್ ಮಾಡಿದ್ದ 16 ನಿಮಿಷಗಳ ವಿಡಿಯೋದಲ್ಲಿ ತಂದೆಯು ತಮ್ಮ ಖಾಸಗಿ ಜೀವನದಲ್ಲಿ ಪ್ರವೇಶಿಸಿದ್ದು, ಕುಟುಂಬದವರು ತನ್ನನ್ನು ಕೊಲ್ಲುವ ಅಥವಾ ತಪ್ಪುದಾರಿಗೆಳೆಯುವ ಪಿತೂರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಅಕೀಲ್ ಅವರ ನೆರೆಯವರಾದ ಶಮ್ಶುದ್ದೀನ್ ಚೌಧರಿ ಅವರು ಪೊಲೀಸರಿಗೆ ಈ ವೀಡಿಯೋವನ್ನು ಸಲ್ಲಿಸಿ, ದೂರು ದಾಖಲಿಸಿದ್ದು, ವಿವರವಾದ ತನಿಖೆಗೆ ಒತ್ತಾಯಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಹರಿಯಾಣ ಪೊಲೀಸರು ಮೊಹಮ್ಮದ್ ಮುಸ್ತಫಾ, ಅವರ ಪತ್ನಿ ಮತ್ತು ಮಾಜಿ ಸಚಿವೆ ರಜಿಯಾ ಸುಲ್ತಾನಾ, ಅವರ ಮಗಳು ಹಾಗೂ ಅಕೀಲ್ ಅವರ ಪತ್ನಿ (ಸೊಸೆ) ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103(1) (ಕೊಲೆಗೆ ಶಿಕ್ಷೆ) ಮತ್ತು 61 (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆಗಸ್ಟ್ 27ರಂದು ರೆಕಾರ್ಡ್ ಮಾಡಲಾದ ಈ ವಿಡಿಯೋದಲ್ಲಿ ಅಕೀಲ್ ಅವರು ತಮ್ಮ ಕುಟುಂಬದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ತಮ್ಮ ತಂದೆ ಮೊಹಮ್ಮದ್ ಮುಸ್ತಫಾ ಅವರು ತಮ್ಮ ಪತ್ನಿಯೊಂದಿಗೆ ಸಲುಗೆಯಿಂದಿದ್ದರು ಎಂದು ಆರೋಪಿಸಿದ್ದಾರೆ. ಈ ವಿಷಯವನ್ನು 2018ರಲ್ಲಿ ಕಂಡುಹಿಡಿದ ನಂತರ ತಾನು ಮಾನಸಿಕ ಮತ್ತು ದೈಹಿಕ ಹಿಂಸೆಯನ್ನು ಅನುಭವಿಸಬೇಕಾಯಿತು ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ತಾಯಿ ಮತ್ತು ಅಕ್ಕ ತನ್ನನ್ನು ಕೊಲ್ಲುವ ಅಥವಾ ತಪ್ಪು ಕೇಸುಗಳಲ್ಲಿ ಸಿಲುಕಿಸುವ ಪಿತೂರಿ ಮಾಡುತ್ತಿದ್ದರು ಎಂದು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಘಪರಿವಾರದ ಹುನ್ನಾರಗಳನ್ನು ಅರಿತ ದಲಿತರು

ಅಕೀಲ್ ಅವರು ತಮ್ಮ ವ್ಯವಹಾರದ ಆದಾಯದಿಂದ ವಂಚಿತರಾಗಿದ್ದು, ತಪ್ಪುದಾರಿಗೆಳೆದು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿತ್ತು ಎಂದು ಆರೋಪಿಸಿದ್ದಾರೆ. ತಮ್ಮ ವೈಯಕ್ತಿಕ ವಿಷಯಗಳಲ್ಲಿ ಕುಟುಂಬದ ಹಸ್ತಕ್ಷೇಪದಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿಗೆ ತಲುಪಿದ್ದೇನೆ ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ ಎಂದು ತಿಳಿದುಬಂದಿದೆ. ಅಕೀಲ್‌ ಅವರ ಸಾವಿನಲ್ಲಿ ಅನುಮಾನಾಸ್ಪದ ಅಂಶಗಳಿವೆ ಎಂದು ದೂರುದಾರರು ಹೇಳಿದ್ದಾರೆ.

ಪಂಚಕುಲಾದ ಮಾನ್ಸಾ ದೇವಿ ಕಾಂಪ್ಲೆಕ್ಸ್ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 20ರಂದು ಎಫ್‌ಐಆರ್ ದಾಖಲಾಗಿದ್ದು, ಡಿಸಿಪಿ ಶ್ರೀಷ್ಟಿ ಗುಪ್ತಾ ಅವರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ. ಎಸಿಪಿ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಅಕೀಲ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು, ಡಿಜಿಟಲ್ ಸಾಕ್ಷ್ಯಗಳು, ಕಾಲ್ ರೆಕಾರ್ಡ್‌ಗಳು, ಮರಣೋತ್ತರ ಪರೀಕ್ಷೆ ವರದಿ ಮತ್ತು ಕುಟುಂಬ ಸದಸ್ಯರ ಬಗ್ಗೆ ಮಾಹಿತಿ ಪರಿಶೀಲಿಸಲಾಗುತ್ತದೆ.

ಮೊದಲು ಸಾವಿನಲ್ಲಿ ಅನುಮಾನಾಸ್ಪದ ಅಂಶಗಳಿಲ್ಲ ಎಂದು ಭಾವಿಸಿ ಮರಣೋತ್ತರ ಪರೀಕ್ಷೆ ವರದಿ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿತ್ತು. ಆದರೆ ವಿಡಿಯೋ ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಬೆಳಕಿಗೆ ಬಂದ ನಂತರ ತನಿಖೆ ಆರಂಭವಾಗಿದೆ.

ಅಕೀಲ್ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದರು. ಕುಟುಂಬದಲ್ಲಿ ದೀರ್ಘಕಾಲದಿಂದ ಭಿನ್ನಾಭಿಪ್ರಾಯಗಳಿದ್ದವು ಎಂದು ದೂರುದಾರ ಶಮ್ಶುದ್ದೀನ್ ಹೇಳಿದ್ದಾರೆ. ಈ ಪ್ರಕರಣ ಹೈಪ್ರೊಫೈಲ್ ಆಗಿದ್ದು, ಮಾಜಿ ಡಿಜಿಪಿ ಮತ್ತು ಸಚಿವೆಯ ಕುಟುಂಬಕ್ಕೆ ಸಂಬಂಧಿಸಿದ್ದರಿಂದ ಸಾರ್ವಜನಿಕ ಗಮನ ಸೆಳೆದಿದೆ. ನ್ಯಾಯಾಂಗದಲ್ಲಿ ಸಂತ್ರಸ್ತನಿಗೆ ನ್ಯಾಯ ದೊರೆಯಬೇಕು ಎಂದು ಒತ್ತಾಯಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...