ಅಬಕಾರಿ ನೀತಿ ಪ್ರಕರಣ | ಕೇಜ್ರಿವಾಲ್ ‘ಕ್ರಿಮಿನಲ್ ಪಿತೂರಿ’ಯಲ್ಲಿ ಭಾಗಿ: ಸಿಬಿಐ

Date:

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ), ತನ್ನ ಇತ್ತೀಚಿನ ಚಾರ್ಜ್‌ಶೀಟ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಅಬಕಾರಿ ನೀತಿಯ ರಚನೆ ಮತ್ತು ಜಾರಿಯಲ್ಲಿ ‘ಅಪರಾಧ ಸಂಚಿನಲ್ಲಿ ಭಾಗಿ’ಯಾಗಿದ್ದಾರೆ ಎಂದು ಆರೋಪಿಸಿದೆ.

ಪ್ರಕರಣದಲ್ಲಿ ತನ್ನ ಐದನೇ ಮತ್ತು ಅಂತಿಮ ಚಾರ್ಜ್ ಶೀಟ್ ಸಲ್ಲಿಕೆಯೊಂದಿಗೆ, ಸಿಬಿಐ ತನ್ನ ತನಿಖೆಯನ್ನು ಮುಕ್ತಾಯಗೊಳಿಸಿದೆ. ಕೇಜ್ರಿವಾಲ್ ಅವರು ಅಬಕಾರಿ ನೀತಿಯನ್ನು ಖಾಸಗೀಕರಣಗೊಳಿಸುವ ಪೂರ್ವ ಯೋಜನೆ ಹೊಂದಿದ್ದರು. ಅದಾದ ಬಳಿಕ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಾಗ ಆ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂದು ಸಿಬಿಐ ಹೇಳಿದೆ.

ಸಹ-ಆರೋಪಿ ಮನೀಶ್ ಸಿಸೋಡಿಯಾ ನೇತೃತ್ವದ ದೆಹಲಿ ಸಚಿವರ ತಂಡ ಈ ಅಬಕಾರಿ ನೀತಿಯನ್ನು ರೂಪಿಸುತ್ತಿರುವಾಗ ಅವರು (ಕೇಜ್ರಿವಾಲ್) ಮಾರ್ಚ್ 2021ರಲ್ಲಿ ತಮ್ಮ ಎಎಪಿಗೆ ಹಣಕಾಸು ಬೆಂಬಲವನ್ನು ಕೋರಿದ್ದರು. ಬಳಿಕ ಕೇಜ್ರಿವಾಲ್ ನಿಕಟ ಮತ್ತು ಎಎಪಿಯ ಮಾಧ್ಯಮ ಮತ್ತು ಸಂವಹನದ ಉಸ್ತುವಾರಿ ವಿಜಯ್ ನಾಯರ್ ದೆಹಲಿಯ ಅಬಕಾರಿ ವ್ಯವಹಾರದ ವಿವಿಧ ಪಾಲುದಾರರನ್ನು ಸಂಪರ್ಕಿಸಿದ್ದಾರೆ. ಈ ಉದ್ಯಮಿಗಳಿಗೆ ಅನುಕೂಲವಾಗುವಂತಹ ಅಬಕಾರಿ ನೀತಿ ಜಾರಿ ಮಾಡಿ ಅದರ ಬದಲಿಗೆ ಅಕ್ರಮ ಹಣವನ್ನು ಪಡೆದಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಆದರೆ ಆಮ್ ಆದ್ಮಿ ಪಕ್ಷ (ಎಎಪಿ) ಆರೋಪವನ್ನು ನಿರಾಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಅಬಕಾರಿ ಪ್ರಕರಣ | ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ಜೂನ್ 26ರಂದು ತಿಹಾರ್ ಜೈಲಿನಲ್ಲಿ ಸಿಬಿಐ ಬಂಧಿಸಿದೆ. ಸಿಬಿಐ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ನೀಡಲಿಲ್ಲ.

ಇನ್ನು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ನೇತೃತ್ವದ ‘ಸೌತ್ ಗ್ರೂಪ್‌’ನ ಮಾತುಕತೆ ನಡೆಸಲು ವಿಜಯ್ ನಾಯರ್ ಕೇಜ್ರಿವಾಲ್‌ಗೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಆರೋಪಿಸಿದೆ. ಅಬಕಾರಿ ನೀತಿ ಬದಲಾಗಿ ನೂರು ಕೋಟಿ ರೂಪಾಯಿ ಪಡೆಯಲು ನಾಯರ್ ಅನುಕೂಲ ಮಾಡಿಕೊಟ್ಟಿದ್ದರು ಎಂದು ಸಂಸ್ಥೆ ಹೇಳಿಕೊಂಡಿದೆ.

ಮುಖ್ಯಮಂತ್ರಿಯಾಗಿ ತಿರುಚಿತ ಅಬಕಾರಿ ನೀತಿಯ ಪ್ರಕ್ರಿಯೆ ಮತ್ತು ಅನುಮೋದನೆಯಲ್ಲಿ ಕೇಜ್ರಿವಾಲ್ ಭಾಗಿಯಾಗಿದ್ದಾರೆ. ಹವಾಲಾ ಮಾರ್ಗವನ್ನು ಬಳಸಿಕೊಂಡು ಇತರ ಇಬ್ಬರು ಆರೋಪಿಗಳಾದ ವಿನೋದ್ ಚೌಹಾಣ್ ಮತ್ತು ಆಶಿಶ್ ಮಾಥುರ್ ಮೂಲಕ ಗೋವಾಕ್ಕೆ ಅಕ್ರಮವಾಗಿ ಗಳಿಸಿದ ಹಣವನ್ನು ವರ್ಗಾವಣೆ ಮಾಡುವಲ್ಲಿ ಕೇಜ್ರಿವಾಲ್ ಪಾತ್ರವು ಬೆಳಕಿಗೆ ಬಂದಿದೆ ಎಂದು ಸಿಬಿಐ ಆರೋಪಿಸಿದೆ.

ಅಬಕಾರಿ ನೀತಿಯನ್ನು ತನಗೆ ಅನುಕೂಲವಾಗಿ ಮಾಡುವಂತೆ ರಚಿಸಲು ‘ಸೌತ್ ಗ್ರೂಪ್’ ಪಾವತಿಸಿದ 90-100 ಕೋಟಿ ರೂಪಾಯಿಗಳಲ್ಲಿ 44.5 ಕೋಟಿ ರೂ.ಗಳನ್ನು ಚುನಾವಣಾ ವೆಚ್ಚವನ್ನು ಭರಿಸಲು ಗೋವಾಕ್ಕೆ ಕಳುಹಿಸಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಈ ‘ಕ್ರಿಮಿನಲ್ ಪಿತೂರಿ’ಯಲ್ಲಿ ಎಲ್ಲಾ ಪಿತೂರಿದಾರರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದು ದೆಹಲಿ ಸರ್ಕಾರದ ಬೊಕ್ಕಸಕ್ಕೆ ಗಮನಾರ್ಹ ನಷ್ಟ ಉಂಟು ಮಾಡಿದೆ. ಹಾಗೆಯೇ ಇತರ ಆರೋಪಿಗಳಿಗೆ ಅನಗತ್ಯ ಹಣಕಾಸು ಲಾಭ ನೀಡಿದೆ ಎಂದು ಸಿಬಿಐ ದೂರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...