ಇ.ಡಿಯ 7ನೇ ಸಮನ್ಸ್‌ಗೂ ಕೇಜ್ರಿವಾಲ್ ಗೈರು; ದೆಹಲಿ ಹೈಕೋರ್ಟ್ ಆದೇಶಕ್ಕೆ ಕಾಯುತ್ತಿದ್ದೇವೆ ಎಂದ ಎಎಪಿ

Date:

ದೆಹಲಿಯ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇ.ಡಿ ಜಾರಿಗೊಳಿಸಿದ 7ನೇ ಸಮನ್ಸ್‌ಗೂ ಗೈರು ಹಾಜರಾಗಿದ್ದಾರೆ. ತನಿಖಾ ಸಂಸ್ಥೆಯು ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸುವುದರ ಬದಲಿಗೆ ದೆಹಲಿ ಹೈಕೋರ್ಟ್‌ ಆದೇಶಕ್ಕೆ ಕಾಯಬೇಕು ಎಂದು ಎಎಪಿ ಹೇಳಿದೆ.

ಕಳೆದ ವರ್ಷ ನವೆಂಬರ್‌ 2ರಿಂದ ಜಾರಿಗೊಳಿಸುತ್ತಿರುವ ಸಮನ್ಸ್‌ಗೆ ಗೈರು ಹಾಜರಾಗಿರುವ ಕಾರಣ ಜಾರಿ ನಿರ್ದೇಶನಾಲಯ ಫೆ.26ರೊಳಗೆ ವಿಚಾರಣೆಗೆ ಹಾಜರಾಗಬೇಕೆಂದು 7ನೇ ಸಮನ್ಸ್ ಜಾರಿಗೊಳಿಸಿತ್ತು. ಆದರೆ ಈ ನೋಟಿಸ್‌ಗಳಿಗೆ ಪ್ರತಿಕ್ರಿಯೆ ನೀಡಿರುವ ಎಎಪಿ ಸಮನ್ಸ್ ನೀಡಿರುವುದು ಕಾನೂನಿನಲ್ಲಿ ಸಮರ್ಥನೀಯವಲ್ಲ ಎಂದು ಹೇಳಿದೆ.

ಎರಡನೇ ಸಮನ್ಸ್‌ಅನ್ನು ಡಿಸೆಂಬರ್ 18ರಂದು ನೀಡಲಾಗಿತ್ತು. ಮೂರನೇ ಸಮನ್ಸ್ ಜನವರಿ 3, ನಾಲ್ಕನೆಯದನ್ನು ಜನವರಿ 18, ಐದನೇ ಸಮನ್ಸ್ ಫೆ.2 ಹಾಗೂ ಆರನೇ ಸಮನ್ಸ್ ಫೆ.19ರಂದು ವಿತರಿಸಲಾಗಿತ್ತು.ಆದಾಗ್ಯೂ ಇವೆಲ್ಲ ಸಮನ್ಸ್‌ಗಳಿಗೂ ದೆಹಲಿ ಸಿಎಂ ಗೈರು ಹಾಜರಾಗಿದ್ದು, ಸಮನ್ಸ್‌ಗಳು ಅಕ್ರಮವಾಗಿದ್ದು, ಇವುಗಳನ್ನು ಹಿಂಪಡೆಯುವಂತೆ ದೆಹಲಿ ಸಿಎಂ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಸಮನ್ಸ್‌ಗಳಿಗೆ ಗೈರು ಹಾಜರಾಗಿರುವುದು ವಿಧೇಯಕವಲ್ಲ ಎಂದು ಪ್ರಶ್ನಿಸಿರುವ ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

ಮದ್ಯ ಮಾರಾಟವನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಹಾಗೂ ಮದ್ಯ ಮಾರಾಟಗಾರರಿಗೆ ಪರವಾನಗಿ ಶುಲ್ಕದ ಪರಿಮಾಣ ಆಧಾರಿತ ಬದಲು ಗ್ರಾಹಕರಿಗೆ ಉತ್ತಮ ಖರೀದಿ ಅನುಭವ ನೀಡುವ ಮಳಿಗೆಗಳನ್ನು ಸ್ಥಾಪಿಸುವ ಅಬಕಾರಿ ನೀತಿಯನ್ನು 2021-22ರಲ್ಲಿ ದೆಹಲಿ ಸರ್ಕಾರ ಜಾರಿಗೊಳಿಸಿತ್ತು. ನಂತರದಲ್ಲಿ ಈ ಯೋಜನೆಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ರದ್ದುಗೊಳಿಸಿ ಸಿಬಿಐ ತನಿಖೆಗೆ ಆದೇಶಿಸಿದ್ದರು.

ಇ.ಡಿ ವರದಿಯ ಪ್ರಕಾರ ಕೇಜ್ರಿವಾಲ್ ನೇತೃತ್ವದ ಎಎಪಿ ಈ ಯೋಜನೆಯನ್ನು ಅಂತಿಮಗೊಳಿಸಲು 100 ಕೋಟಿ ರೂ. ಲಂಚವನ್ನು ಪಡೆದಿದೆ ಎಂದು ಆರೋಪಿಸಿದೆ. ಇದೇ ಹಣವನ್ನು ಎಎಪಿಯು ಗೋವಾ ಚುನಾವಣಾ ಪ್ರಚಾರಕ್ಕೆ ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಎಎಪಿ ನಾಯಕರಾದ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಅವರನ್ನು ಬಂಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...