ಭವಿಷ್ಯದ ಆಂದೋಲನಗಳ ತಡೆಗೆ 1974ರ ನಂತರದ ಪ್ರತಿಭಟನೆಗಳ ಅಧ್ಯಯನಕ್ಕೆ ಅಮಿತ್ ಶಾ ಆದೇಶ

Date:

ಭವಿಷ್ಯದಲ್ಲಿ ‘ಪಟ್ಟಭದ್ರ ಹಿತಾಸಕ್ತಿಗಳಿಂದ’ ಸಾಮೂಹಿಕ ಆಂದೋಲನಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, ಸ್ವಾತಂತ್ರ್ಯಾ ನಂತರದ, ವಿಶೇಷವಾಗಿ 1974ರ ನಂತರದ ಎಲ್ಲ ಪ್ರತಿಭಟನೆಗಳ ಅಧ್ಯಯನ ನಡೆಸುವಂತೆ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಘಟಕಕ್ಕೆ (BPR&D) ಆದೇಶಿಸಿದ್ದಾರೆ ಎಂದು ಹಿರಿಯ ಸರಕಾರಿ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದೆ.

ಪ್ರತಿಭಟನೆಗಳಿಗೆ ಕಾರಣಗಳು, ಹಣಕಾಸು ನೆರವು, ಅಂತಿಮ ಫಲಿತಾಂಶಗಳು ಮತ್ತು ತೆರೆಮರೆಯಲ್ಲಿನ ರೂವಾರಿಗಳನ್ನು ವಿಶ್ಲೇಷಿಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು(ಎಸ್‌ಒಪಿ) ಸಿದ್ಧಪಡಿಸುವಂತೆಯೂ ಅವರು ಸೂಚಿಸಿದ್ದಾರೆ.

ಗುಪ್ತಚರ ಸಂಸ್ಥೆಯು(ಐಬಿ) ಜುಲೈ ಕೊನೆಯ ವಾರದಲ್ಲಿ ದೆಹಲಿಯಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ರಾಷ್ಟ್ರೀಯ ಭದ್ರತಾ ಕಾರ್ಯತಂತ್ರಗಳ ಸಮ್ಮೇಳನ-2025’ರಲ್ಲಿ ಶಾ ಈ ನಿರ್ದೇಶನಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮಿತ್ ಶಾ ನಿರ್ದೇಶನದ ಮೇರೆಗೆ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ BPR&D ಅಪರಾಧ ತನಿಖಾ ಇಲಾಖೆಗಳ(ಸಿಐಡಿ) ವರದಿಗಳು ಸೇರಿದಂತೆ ಹಳೆಯ ಪ್ರಕರಣಗಳ ಕಡತಗಳಿಗಾಗಿ ರಾಜ್ಯಗಳ ಪೋಲಿಸ್ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ತಂಡವೊಂದನ್ನು ರಚಿಸುವ ಪ್ರಕ್ರಿಯೆಯಲ್ಲಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತಾಂತರ ವಿಚಾರದಲ್ಲಿ ಬಿಜೆಪಿಯ ಬೂಟಾಟಿಕೆ ಮತ್ತು ವಾಸ್ತವ

ಅಧಿಕಾರಿಯೊಬ್ಬರ ಪ್ರಕಾರ, ಇಂತಹ ಪ್ರತಿಭಟನೆಗಳಿಗೆ ಹಣಕಾಸು ನೆರವುಗಳನ್ನು ಪರಿಶೀಲಿಸಲು ಜಾರಿ ನಿರ್ದೇಶನಾಲಯ(ಇ.ಡಿ), ಹಣಕಾಸು ಗುಪ್ತಚರ ಘಟಕ-ಭಾರತ(ಎಫ್‌ಐಯು-ಐಎನ್‌ಡಿ) ಮತ್ತು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ(ಸಿಬಿಡಿಟಿ)ಯಂತಹ ಹಣಕಾಸು ಸಂಸ್ಥೆಗಳನ್ನು ಸೇರಿಸಿಕೊಳ್ಳುವಂತೆಯೂ ಅಮಿತ್ ಶಾ BPR&Dಗೆ ಸೂಚಿಸಿದ್ದಾರೆ.

ಹೆಚ್ಚುವರಿಯಾಗಿ, ಭಯೋತ್ಪಾದನೆಗೆ ಹಣಕಾಸು ನೆರವು ಜಾಲಗಳನ್ನು ನಿರ್ಮೂಲನ ಮಾಡಲು ಹಣಕಾಸು ಅಕ್ರಮಗಳ ವಿಶ್ಲೇಷಣೆಯ ಮೂಲಕ ಅಪರಿಚಿತ ಭಯೋತ್ಪಾದಕ ಜಾಲಗಳು,ಅವುಗಳ ಸಂಪರ್ಕಗಳು ಮತ್ತು ಉದ್ದೇಶಗಳನ್ನು ಗುರುತಿಸಲು ಎಸ್‌ಒಪಿಯನ್ನು ಸಿದ್ಧಗೊಳಿಸುವಂತೆ ಇ.ಡಿ., ಎಫ್‌ಐಯು-ಐಎನ್‌ಡಿ ಮತ್ತು ಸಿಬಿಡಿಟಿಗಳಿಗೆ ಸೂಚಿಸಲಾಗಿದೆ.

ಕಾಲ್ತುಳಿತದಂತಹ ಘಟನೆಗಳ ಹಿಂದಿನ ಕಾರಣಗಳನ್ನು ತಿಳಿದುಕೊಳ್ಳಲು ವಿವಿಧ ಧಾರ್ಮಿಕ ಸಮಾವೇಶಗಳ ಕುರಿತು ಅಧ್ಯಯನಕ್ಕಾಗಿ ರಾಜ್ಯಗಳ ಪೋಲಿಸ್ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವಂತೆ ಮತ್ತು ಅಂತಹ ಸಮಾವೇಶಗಳ ಮೇಲೆ ನಿಗಾ ಹಾಗೂ ನಿಯಂತ್ರಣಕ್ಕಾಗಿ ಎಸ್‌ಒಪಿಯೊಂದನ್ನು ರೂಪಿಸುವಂತೆಯೂ ಶಾ BPR&Dಗೆ ಸೂಚಿಸಿದ್ದಾರೆನ್ನಲಾಗಿದೆ.

ಮೂಲಗಳ ಪ್ರಕಾರ ಪಂಜಾಬಿನಲ್ಲಿ ಖಾಲಿಸ್ತಾನಿ ಉಗ್ರವಾದ ಮತ್ತು ಸಾಮಾನ್ಯ ಕ್ರಿಮಿನಲ್ ಚಟುವಟಿಕೆಗಳನ್ನು ಎದುರಿಸಲು ಪ್ರತ್ಯೇಕ ಕಾರ್ಯವಿಧಾನಗಳನ್ನು ರೂಪಿಸುವಂತೆ ಶಾ ಅವರು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಡಿಎ),ಗಡಿ ರಕ್ಷಣಾ ಪಡೆ(ಬಿಎಸ್‌ಎಫ್) ಮತ್ತು ಮಾದಕ ದ್ರವ್ಯ ನಿಯಂತ್ರಣ ಘಟಕ(ಎನ್‌ಸಿಬಿ)ಗಳಿಗೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...