ಪಂಚ ರಾಜ್ಯಗಳ ಎಕ್ಸಿಟ್ ಪೋಲ್: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಸಾಧ್ಯತೆ

Date:

ಐದು ರಾಜ್ಯಗಳ ಮತದಾನ ಮುಕ್ತಾಯವಾಗಿದ್ದು ವಿವಿಧ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಯ(ಎಕ್ಸಿಟ್ ಪೋಲ್) ಪ್ರಕಾರ ಪಂಚ ರಾಜ್ಯಗಳಲ್ಲಿ 3 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯ ವರದಿಗಳು ತಿಳಿಸಿವೆ.

ತೆಲಂಗಾಣದಲ್ಲಿ ಕಳೆದ ಎರಡು ಅವಧಿಗಳಿಂದ ಅಧಿಕಾರದಲ್ಲಿದ್ದ ಬಿಆರ್‌ಎಸ್‌ಗಿಂತ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳೊಂದಿಗೆ ಜಯಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಈ ಬಾರಿ ಗೆಲುವು ಸಾಧಿಸಲಿದ್ದು, ಛತ್ತೀಸ್‌ಗಢದಲ್ಲಿ ‘ಕೈ’ಗೆ ಮತ್ತೆ ಅಧಿಕಾರ ಸಿಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಥಾನದಲ್ಲಿ ಜಿದ್ದಾಜಿದ್ದಿ ಹೋರಾಟವಿದ್ದು, ಕಾಂಗ್ರೆಸ್ ಗೆಲುವಿನ ಸಮೀಪ ಬರಲಿದೆ ಎಂದು ಕೆಲವು ಸಮೀಕ್ಷೆಗಳು ಹೇಳಿದ್ದರೆ, ಇನ್ನೂ ಕೆಲವು ಸಮೀಕ್ಷಾ ವರದಿಗಳು ಬಿಜೆಪಿ ಜಯಗಳಿಸಲಿದೆ ಎಂದು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಪ್ರೊ. ಅರ್ನಾಲ್ಡ್ ಡಿಕ್ಸ್ : ಉತ್ತರಾಖಂಡ ಸುರಂಗ ರಕ್ಷಣಾ ಕಾರ್ಯಾಚರಣೆಯ ಹಿಂದಿನ ಶಕ್ತಿ

ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಎಂಎನ್‌ಎಫ್‌ ಹಾಗೂ ಜೆಡ್‌ಪಿಎಂ ನಡುವೆ ಪೈಪೋಟಿಯಿದ್ದು, ಕಾಂಗ್ರೆಸ್ ಕೂಡ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ಸಮೀಕ್ಷಾ ವರದಿಗಳು ಹೇಳಿವೆ.

Chattisgarh poll

ಛತ್ತೀಸ್‌ಗಢದ 90 ವಿಧಾನಸಭಾ ಕ್ಷೇತ್ರಗಳಲ್ಲಿ ಇಂಡಿಯಾ ಟುಡೆ, ಟುಡೇಸ್ ಚಾಣಕ್ಯ, ಜನ್‌ ಕಿಬಾತ್‌ ಒಳಗೊಂಡು ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್‌ 45 ರಿಂದ 66 ಸ್ಥಾನಗಳವರೆಗೆ ಗೆಲುವು ಸಾಧಿಸಲಿದೆ ಎಂದು ಹೇಳಿದ್ದರೆ, ಬಿಜೆಪಿ 30 ರಿಂದ 48 ಸ್ಥಾನ ಜಯಗಳಿಸಬಹುದೆಂದು ತಿಳಿಸಿವೆ.

Rajasthan poll

ರಾಜಸ್ಥಾನದ 200 ಕ್ಷೇತ್ರಗಳ ಪೈಕಿ ಇಂಡಿಯಾ ಟುಡೆ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ 96, ಬಿಜೆಪಿ 90 ಸ್ಥಾನ ಗಳಿಸಿದರೆ, ಟೈಮ್ಸ್ ನೌ ಪ್ರಕಾರ ಕಾಂಗ್ರೆಸ್ 56 ರಿಂದ 72, ಬಿಜೆಪಿ 108 ರಿಂದ 128 ಹಾಗೂ ಪಿ ಮಾರ್ಕ್ ಪ್ರಕಾರ ಕಾಂಗ್ರೆಸ್ 69 ರಿಂದ 91 ಹಾಗೂ ಬಿಜೆಪಿ 105 ರಿಂದ 125 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ.

ತೆಲಂಗಾಣ
Telangana poll

ತೆಲಂಗಾಣದ 119 ಕ್ಷೇತ್ರಗಳಲ್ಲಿ ಸಿಎನ್‌ಎನ್‌ ನ್ಯೂಸ್‌ 18 ಪ್ರಕಾರ ಕಾಂಗ್ರೆಸ್ 56, ಬಿಆರ್‌ಎಸ್ 48 ಸ್ಥಾನಗಳಲ್ಲಿ ಗೆದ್ದರೆ, ಟುಡೇಸ್‌ ಚಾಣಾಕ್ಯ ಸಮೀಕ್ಷೆಯಂತೆ ಕಾಂಗ್ರೆಸ್ 71, ಬಿಆರ್‌ಎಸ್ 33 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಕ್ಸಿಟ್ ಪೋಲ್ ಭವಿಷ್ಯ ನುಡಿದಿವೆ.

Madya pradesh poll

ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ ಜನ್‌ ಕೀಬಾತ್‌ ಪ್ರಕಾರ ಕಾಂಗ್ರೆಸ್ 125, ಬಿಜೆಪಿ 100,  ಪೋಲ್‌ಸ್ಟ್ರಾಟ್ ಪ್ರಕಾರ ಕಾಂಗ್ರೆಸ್ 121, ಬಿಜೆಪಿ 116 ಕ್ಷೇತ್ರಗಳಲ್ಲಿ  ಗೆಲುವು ಸಾಧಿಸಲಿದ್ದು, ಫಲಿತಾಂಶ ತೀವ್ರ ಪೈಪೋಟಿಯಿಂದ ಕೂಡಿರಲಿದೆ ಎಂದು ತಿಳಿಸಿವೆ.

mizoram poll 1

ಮಿಜೋರಾಂನ ಒಟ್ಟು 40 ಕ್ಷೇತ್ರಗಳಲ್ಲಿ ಎಂಎನ್‌ಎಫ್‌ ಹಾಗೂ ಜೆಡ್‌ಪಿಎಂ ನಡುವೆ ತೀವ್ರ ಸ್ಪರ್ಧೆಯಿದೆ ಎಂದು ಬಹುತೇಕ ಎಲ್ಲ ಸಮೀಕ್ಷೆ ತಿಳಿಸಿವೆ. ಈ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸಾಧ್ಯತೆಯಿದ್ದು  ಕಾಂಗ್ರೆಸ್ ನಿರ್ಣಾಯಕ ಪಾತ್ರ ವಹಿಸಲಿವೆ ಎಂದು ಕೂಡ ಎಕ್ಸಿಟ್‌ ಪೋಲ್‌ಗಳು ಭವಿಷ್ಯ ನುಡಿದಿವೆ.

ಇವೆಲ್ಲ ವರದಿಗಳ ಸತ್ಯಾಸತ್ಯತೆ ಡಿ. 3 ರಂದು ಭಾನುವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಚುನಾವಣಾ ಎಣಿಕೆ ಮೂಲಕ ಬಹಿರಂಗಗೊಳ್ಳಲಿದೆ.

ಮಧ್ಯಪ್ರದೇಶದಲ್ಲಿ 230 ಸ್ಥಾನಗಳಿಗೆ ನವೆಂಬರ್‌ 17 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿದ್ದರೆ, ರಾಜಸ್ಥಾನದ 199 ಸ್ಥಾನಗಳಿಗೆ ನ.25, ಛತ್ತೀಸ್‌ಗಢದಲ್ಲಿ 90 ಸ್ಥಾನಗಳಿ ನ.7 ಹಾಗೂ ನ.17ರಂದು ಎರಡು ಹಂತಗಳು, ತೆಲಂಗಾಣದಲ್ಲಿ ನ.30 ಹಾಗೂ ಮಿಜೋರಾಂನಲ್ಲಿ ನ.7 ರಂದು ಮತದಾನ ನಡೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...