ಪತಿಯ ವಿವಾಹೇತರ ಸಂಬಂಧ ಕ್ರೌರ್ಯವಾಗಲೀ, ಆತ್ಮಹತ್ಯೆಗೆ ಪ್ರಚೋದನೆಯಾಗಲೀ ಅಲ್ಲ: ಹೈಕೋರ್ಟ್

Date:

ಪತಿಯ ವಿವಾಹೇತರ ಸಂಬಂಧವು ಪತ್ನಿಗೆ ತೊಂದರೆ ಉಂಟುಮಾಡಿದೆ ಎಂದು ಸಾಬೀತಾಗದ ಹೊರತು, ಅದು ಕ್ರೌರ್ಯ ಅಥವಾ ಆತ್ಮಹತ್ಯೆಗೆ ಪ್ರಚೋದನೆ ಆಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಮತ್ತು ಕೊಲೆ ಆರೋಪದ‌ ಮೇಲೆ‌ ಬಂಧನಕ್ಕೊಳಗಾಗಿದ್ದ ಆರೋಪಿ ಪತಿಗೆ ಜಾಮೀನು ಮಂಜೂರು ಮಾಡಿದೆ.

ಮಹಿಳೆಯೊಬ್ಬರು 2024ರ ಮಾರ್ಚ್ 18ರಂದು ತನ್ನ ಪತಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿಗೆ ಆತ್ಮಹತ್ಯೆಗೆ ಪ್ರಚೋದನೆ, ವರದಕ್ಷಿಣೆ ಕಿರುಕುಳ ಹಾಗೂ ಪತಿಯ ವಿವಾಹೇತರ ಸಂಬಂಧ ಕಾರಣವೆಂದು ಆರೋಪಿಸಲಾಗಿತ್ತು. ಮಹಿಳೆಯ ಪತಿಯನ್ನು ಪೊಲೀಸರು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಪತಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜೀವ್ ನರುಲಾ ವಿಚಾರಣೆ ನಡೆಸಿದ್ದಾರೆ. “ವಿವಾಹೇತರ ಸಂಬಂಧವು ಪತಿಯನ್ನು ವರದಕ್ಷಿಣೆ, ಕೊಲೆಗೆ ಸಿಲುಕಿಸಲು ಆಧಾರವಲ್ಲ” ಎಂದು ಹೇಳಿದ್ದಾರೆ.

“ಮೃತ ಮಹಿಳೆಯು ಪತಿಯ ವಿವಾಹೇತರ ಸಂಬಂಧದ ಕಾರಣಕ್ಕಾಗಿ ಸಾವನ್ನಪ್ಪಿದ್ದರೆ (ಆತ್ಮಹತ್ಯೆ ಮಾಡಿಕೊಂಡಿದ್ದರೆ) ಪ್ರಕರಣದಲ್ಲಿ ವರದಕ್ಷಿಣೆ ಬೇಡಿಕೆ ಅಥವಾ ಕಿರುಕುಳ ಹೇಗೆ ಬರುತ್ತದೆ. ವಿವಾಹೇತರ ಸಂಬಂಧ ಮತ್ತು ವರದಕ್ಷಿಣೆ ಕಿರುಕುಳ ನಡುವಿನ ಸಂಬಂಧವನ್ನು ಸಾಕ್ಷ್ಯಗಳ ಆಧಾರದ ಮೇಲೆ ಸಾಬೀತುಪಡಿಸಬೇಕು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

“ಪ್ರಕರಣದಲ್ಲಿ ಮಹಿಳೆ ಜೀವಂತವಾಗಿರುವವರೆಗೆ, ಮಹಿಳೆಯಾಗಲೀ ಅಥವಾ ಆಕೆಯ ಪೋಷಕರಾಗಲೀ ವರದಕ್ಷಿಣೆ ಕಿರುಕುಳದ ಯಾವುದೇ ಆರೋಪ ಮಾಡಿಲ್ಲ. ದೂರನ್ನೂ ನೀಡಿಲ್ಲ. ಮಹಿಳೆ ಮೃತಪಟ್ಟ ಬಳಿಕ ವರದಕ್ಷಿಣೆ ಆರೋಪ‌ ಮಾಡಲಾಗಿದೆ. ಇಂತಹ ಆರೋಪಗಳು ನಂಬಿಕಾರ್ಹವಲ್ಲ. ಪ್ರಕರಣದ ಪೂರ್ಣ ವಿಚಾರಣೆಯ ನಂತರವೇ ನ್ಯಾಯಾಲಯವು ತನ್ನ ಅಂತಿಮ ನಿರ್ಧಾರವನ್ನು ನೀಡಲು ಸಾಧ್ಯ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...