ದಲಿತ ಯುವತಿಯ ಅಮಾನುಷ ಕೊಲೆ ಪ್ರಕರಣ: ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಸಂಸದ

Date:

ಉತ್ತರಪ್ರದೇಶದ ಅಯೋಧ್ಯೆಯ ಫೈಜಾಬಾದ್ ಗ್ರಾಮದ ಬಳಿಯ ನಿರ್ಜನ ಕಾಲುವೆಯಲ್ಲಿ ನಾಪತ್ತೆಯಾಗಿದ್ದ ದಲಿತ ಯುವತಿಯ ಬೆತ್ತಲೆ ಮೃತದೇಹ ಪತ್ತೆ ಬೆನ್ನಲ್ಲೇ ಫೈಜಾಬಾದ್ ಸಂಸದ ಅವಧೇಶ್ ಪ್ರಸಾದ್ ಮಾಧ್ಯಮದ ಮುಂದೆ ಗದ್ಗದಿತರಾಗಿ ಅಳುತ್ತಿರುವುದು ಕಂಡುಬಂದಿದೆ.

ಫೈಜಾಬಾದ್ ಗ್ರಾಮದಲ್ಲಿ ದಲಿತ ಸಮುದಾಯದ ಯುವತಿಯೊಬ್ಬರು ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ, ಆಕೆಯ ಕಣ್ಣುಗಳನ್ನು ಕಿತ್ತು ಹಾಕಲಾಗಿದೆ, ಮೃತದೇಹದ ಮೇಲೆ ಆಳವಾದ ಗಾಯಗಳು ಕಂಡು ಬಂದಿದೆ ಎಂದು ಮೃತ ಯುವತಿಯ ಕುಟುಂಬ ಆರೋಪಿಸಿದೆ.

ಘಟನೆಯ ಬಗ್ಗೆ ಅಯೋಧ್ಯೆಯ ಸಂಸದ ಅವಧೇಶ್ ಪ್ರಸಾದ್ ಮಾಧ್ಯಮದ ಮುಂದೆ ಮಾತನಾಡುತ್ತಾ ದುಃಖವನ್ನು ವ್ಯಕ್ತಪಡಿಸಿದ್ದಾರೆ. “ನಾನು ದೆಹಲಿಗೆ ಹೋಗಿ ಪ್ರಧಾನಿ ಮೋದಿ ಬಳಿ ವಿಷಯವನ್ನು ಪ್ರಸ್ತಾಪಿಸುತ್ತೇನೆ. ನಮಗೆ ನ್ಯಾಯ ಸಿಗದಿದ್ದರೆ, ನಾನು ರಾಜೀನಾಮೆ ನೀಡುತ್ತೇನೆ. ಆ ಯುವತಿಯ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ರಾಮ ಎಲ್ಲಿದ್ದೀಯಾ, ಸೀತಾ ತಾಯಿ ಎಲ್ಲಿದ್ದೀಯಾ?” ಎಂದು ಗದ್ಗದಿತರಾಗಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಅಲ್ಲಿದ್ದವರು ಜನರಿಗಾಗಿ ಹೋರಾಡಲು ನಿಮ್ಮನ್ನು ಸಂಸದರನ್ನಾಗಿ ಮಾಡಲಾಗಿದೆ. ಆದ್ದರಿಂದ ನೀವು ಹೋರಾಡಿ ನ್ಯಾಯ ಪಡೆಯುತ್ತೀರಿ ಎಂದು ಅವರಿಗೆ ಸಮಾಧಾನ ಪಡಿಸುತ್ತಿರುವುದು ಕಂಡು ಬಂದಿದೆ.

ಈ ಸುದ್ದಿ ಓದಿದ್ದೀರಾ? ಅಲ್ಲಮನ ಅನನ್ಯ ಪದಪ್ರಯೋಗಗಳು | ಸಜ್ಜನವೆ ಮಜ್ಜನ: ಪುಣ್ಯಸ್ನಾನವಲ್ಲ

“ಗುರುವಾರ ರಾತ್ರಿಯಿಂದ ಯುವತಿ ನಾಪತ್ತೆಯಾಗಿದ್ದಾಳೆ, ನಂತರ ಗ್ರಾಮದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಸಣ್ಣ ಕಾಲುವೆಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಆಕೆಯ ಕೈಗಳು ಮತ್ತು ಕಾಲುಗಳನ್ನು ಹಗ್ಗಗಳಿಂದ ಕಟ್ಟಿ ಹಾಕಲಾಗಿತ್ತು, ಆಕೆಯ ದೇಹದ ಮೇಲೆ ತೀವ್ರವಾದ ಗಾಯಗಳು ಕಂಡು ಬಂದಿದೆ, ಆಕೆಯ ಕಾಲು ಮುರಿದಿತ್ತು” ಎಂದು ಯುವತಿಯ ಸೋದರ ಮಾವ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಸ್ಥಳೀಯ ಪೊಲೀಸ್‌ ಅಧಿಕಾರಿ ಅಶುತೋಷ್ ತಿವಾರಿ, ಶುಕ್ರವಾರ ಯುವತಿಯ ನಾಪತ್ತೆ ಕುರಿತು ಪ್ರಕರಣ ದಾಖಲಾಗಿತ್ತು. ಯುವತಿಯ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಳಿಕ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...