ಬದುಕಿರುವಾಗಲೇ ಮಗಳ ಶ್ರಾದ್ಧ ಮಾಡಿದ ಕುಟುಂಬ!

Date:

ಬೇರೆ ಧರ್ಮದ ಯುವಕನೊಂದಿಗೆ ಮದುವೆಯಾದ ಕಾರಣ ಕುಟುಂಬಸ್ಥರು ತಮ್ಮ ಮನೆ ಮಗಳ ಶ್ರಾದ್ಧವನ್ನು ಮಾಡಿದ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಮನೆ ಬಿಟ್ಟು ಹೋಗಿ ಮದುವೆಯಾದ 12 ದಿನಗಳ ನಂತರ ಶ್ರಾದ್ಧ ಮಾಡಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಯುವತಿಯ ಚಿಕ್ಕಪ್ಪ ಸೋಮನಾಥ್ ಬಿಸ್ವಾಸ್, “ಆಕೆ ನಮ್ಮ ಪಾಲಿಗೆ ಸತ್ತಂತೆ. ನಾವು ಅವಳಿಗೆ ಮದುವೆ ಗೊತ್ತು ಮಾಡಿದ್ದೆವು. ಆದರೆ ನಮ್ಮ ಮಾತನ್ನು ಆಕೆ ಕೇಳಿಲ್ಲ. ನಮ್ಮನ್ನು ಬಿಟ್ಟು ಹೋಗಿ ಬೇರೆ ಮದುವೆ ಆಗಿದ್ದಾಳೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅಂತರ್ಜಾತಿ ವಿವಾಹ | ಶುದ್ಧೀಕರಣ ಹೆಸರಲ್ಲಿ ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಲೆ ಬೋಳಿಸುವುದು ಸೇರಿದಂತೆ ಶ್ರಾದ್ಧದ ಎಲ್ಲಾ ವಿಧಿಗಳನ್ನು ಕುಟುಂಬ ಅನುಸರಿಸಿದೆ. ಹಾಗೆಯೇ ಕಾರ್ಯದ ವೇಳೆ ಯುವತಿಯ ಭಾವಚಿತ್ರಕ್ಕೆ ಹಾರವನ್ನು ಹಾಕಿಯೂ ಇರಿಸಲಾಗಿತ್ತು. “ನಾವು ಅವಳ ಎಲ್ಲಾ ವೈಯಕ್ತಿಕ ವಸ್ತುಗಳನ್ನು ಸುಟ್ಟು ಹಾಕಿದ್ದೇವೆ” ಎಂದು ತಾಯಿ ತಿಳಿಸಿದ್ದಾರೆ.

ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿರುವಾಗಲೇ ಯುವತಿಗೆ ಕುಟುಂಬಸ್ಥರು ಮದುವೆ ನಿಶ್ಚಯ ಮಾಡಿದ್ದರು. ಆದರೆ ತಾನು ಮದುವೆ ಆಗುವುದಿಲ್ಲ ಎಂದು ಯುವತಿ ಹೇಳಿದ್ದಳು. ಕುಟುಂಬಸ್ಥರೊಂದಿಗೆ ಹಲವು ಬಾರಿ ವಾದ ಮಾಡಿದ್ದಳು. ಮನೆಯವರು ವಿವಾಹಕ್ಕೆ ಒತ್ತಡ ಹೇರಿದಾಗ ಬೇರೆ ಧರ್ಮಕ್ಕೆ ಸೇರಿದ ತನ್ನ ಸ್ನೇಹಿತನೊಂದಿಗೆ ಮನೆ ತೊರೆದು ಹೋಗಿದ್ದಾಳೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಶೂದ್ರ ಧರ್ಮವೇ ಬೇರೆ, ಸನಾತನ ಧರ್ಮವೇ ಬೇರೆ: ಡಾ.ಬೂದಾಳು

ಯುವತಿಯ ತಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದು ಕುಟುಂಬದ ನಿರ್ಧಾರವನ್ನು ಬೆಂಬಲಿಸಿದ್ದಾರೆ ಎಂದು ಚಿಕ್ಕಪ್ಪ ಬಿಸ್ವಾಸ್ ಹೇಳಿದ್ದಾರೆ. ಇನ್ನೊಂದೆಡೆ ಯುವತಿ ಜಿಲ್ಲೆಯ ಬೇರೆಡೆ ತನ್ನ ಅತ್ತೆ-ಮಾವನ ಜೊತೆ ಇದ್ದು, ಸದ್ಯ ಎಲ್ಲಾ ಬೆಳವಣಿಗೆಯಿಂದಾಗಿ ಮಾನಸಿಕವಾಗಿ ನೊಂದಿದ್ದಾಳೆ. ಆದ್ದರಿಂದ ಮನಶ್ಶಾಸ್ತ್ರಜ್ಞರ ಸಮಾಲೋಚನೆ ಪಡೆಯುತ್ತಿದ್ದಾಳೆ ಎಂದು ವರದಿಯಾಗಿದೆ.

“ಘಟನೆಯ ಬಗ್ಗೆ ನಮಗೆ ತಿಳಿದುಬಂದಿದೆ. ಯುವತಿ ವಯಸ್ಕಳು. ಆಕೆಯ ಬದುಕಿನ ಬಗ್ಗೆ ಆಕೆ ನಿರ್ಧಾರ ಕೈಗೊಳ್ಳುವ ಅವಕಾಶವಿದೆ. ಆದ್ದರಿಂದ ಈ ಸಂಬಂಧ ಯಾರೂ ದೂರು ದಾಖಲಿಸಿಲ್ಲ” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...