ಮಧ್ಯ ಪ್ರದೇಶ | ಜೀಪು ಹರಿಸಿ ರೈತನ ಹತ್ಯೆ ಮಾಡಿದ ಬಿಜೆಪಿ ನಾಯಕ; ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

Date:

ಜಮೀನು ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕನೊಬ್ಬ ರೈತರೊಬ್ಬರನ್ನು ಹತ್ಯೆ ಮಾಡಿದ್ದು, ಕೊಲೆಯನ್ನು ತಡೆಯಲು ಬಂದ ರೈತನ ಪುತ್ರಿಯರ ಮೇಲೆ ಹಲ್ಲೆಯ ಜೊತೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಮಧ್ಯ ಪ್ರದೇಶದ ಗುಣಾ ಜಿಲ್ಲೆಯ ಗಣೇಶ್‌ಪುರ ಗ್ರಾಮದಲ್ಲಿ ನಡೆದಿದೆ.

ಬಿಜೆಪಿ ನಾಯಕ ಮಹೇಂದ್ರ ನಾಗರ್ ಮತ್ತು ಆತನ ಸಹಚರರು ರಾಮಸ್ವರೂಪ ಧಾಕಡ್ ಎಂಬ ರೈತನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ಫತೇಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೈತ ರಾಮಸ್ವರೂಪ ಧಾಕಡ್ ಅವರು ಪತ್ನಿಯೊಂದಿಗೆ ಹೊಲಕ್ಕೆ ತೆರಳುತ್ತಿದ್ದ ವೇಳೆ ಮಹೇಂದ್ರ ನಾಗರ್ ಮತ್ತು ಅವರ ಗುಂಪು ಅವರನ್ನು ಮಾರ್ಗಮಧ್ಯೆ ತಡೆದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಆರೋಪಿಗಳು ರೈತನ ಮೇಲೆ ಜೀಪನ್ನು ಹರಿಸಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆಯಲ್ಲಿ ಆರೋಪಿಗಳು ಮಧ್ಯಪ್ರವೇಶಿಸಲು ಬಂದ ರೈತನ ಇಬ್ಬರು ಪುತ್ರಿಯರ ಮೇಲೂ ಹಲ್ಲೆ ನಡೆಸಿದ್ದಾರೆ. “ನಾನು ತಂದೆಯನ್ನು ರಕ್ಷಿಸಲು ಹೋದಾಗ ಅವರು ನನ್ನ ಬಟ್ಟೆ ಹರಿದು ಹಲ್ಲೆ ನಡೆಸಿದರು. ಬಂದೂಕಿನಿಂದ ಗುಂಡು ಹಾರಿಸಿ ಬೆದರಿಸಿದರು” ಎಂದು ಸಂತ್ರಸ್ತ ರೈತರ ಪುತ್ರಿಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಮಾರು ಒಂದು ಗಂಟೆಯವರೆಗೆ ದಾಳಿ ಮುಂದುವರಿದಿತ್ತು. ಆ ಸಮಯದಲ್ಲಿ ಸುಮಾರು 20 ಜನರು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದರು. ಇಬ್ಬರು ಬಾಲಕಿಯರ ಬಟ್ಟೆ ಹರಿದು, ನಂತರ ಆರೋಪಿಗಳು ವಾಹನವನ್ನು ಹರಿಸಿ ಹತ್ಯೆ ಮಾಡಿದ್ದಾರೆ” ಎಂದು ರೈತನ ಸಹೋದರ ರಾಮಕುಮಾರ್ ಅವರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ತಲೆ ಮೇಲೆ ಹೊತ್ತು ಮೆರೆಸಿದವರು ಈಗ ಪಲಾಯನ ಮಾಡುವುದು ತರವೇ?

ಗಾಯಗೊಂಡ ರೈತನನ್ನು ಸುಮಾರು ಒಂದು ಗಂಟೆಯವರೆಗೆ ಆಸ್ಪತ್ರೆಗೆ ಕರೆದೊಯ್ಯಲು ಅನುಮತಿಸಲಿಲ್ಲ. ಗನ್‌ ಹಿಡಿದು ಬೆದರಿಸಿದರು ಎಂದು ಆರೋಪಿಸಲಾಗಿದೆ. ಕೊನೆಗೆ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆನಂತರ ಚಿಕಿತ್ಸೆ ವೇಳೆ ಅವರು ಮೃತಪಟ್ಟರು ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹೇಂದ್ರ ನಾಗರ್ ಹಾಗೂ ಅವರ ಕುಟುಂಬದ ಮೂವರು ಮಹಿಳೆಯರು ಹಾಗೂ ಇತರ 14 ಜನರ ವಿರುದ್ಧ ಹತ್ಯೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಫತೇಗಢ ಠಾಣಾಧಿಕಾರಿ ತಿಳಿಸಿದ್ದಾರೆ.

ಬಾಮೋರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಋಷಿ ಅಗ್ರವಾಲ್ ಈ ಘಟನೆಯನ್ನು ಖಂಡಿಸಿದ್ದಾರೆ, “ಮಧ್ಯಪ್ರದೇಶದಲ್ಲಿ ಹಿಂಸೆ, ಲೂಟಿ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗಿರುವವರು ಈ ಎಲ್ಲವನ್ನು ನೋಡುತ್ತಾ ಸುಮ್ಮನಿದ್ದಾರೆ. ಪೊಲೀಸರು ಭಯದಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಮಹೇಂದ್ರ ನಾಗರ್ ಕಳೆದ ಕೆಲವು ವರ್ಷಗಳಿಂದ ಸಣ್ಣ ರೈತರಿಗೆ ಬೆದರಿಕೆ ಹಾಕಿ, ಸುಮಾರು 25 ರೈತರನ್ನು ತಮ್ಮ ಜಮೀನನ್ನು ಕಡಿಮೆ ಬೆಲೆಗೆ ಮಾರುವಂತೆ ಒತ್ತಾಯಿಸಿ, ಗ್ರಾಮದಿಂದ ಓಡಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಘಟನೆಯ ನಂತರ ಆರೋಪಿಯು ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧ್ಯಾ ಸೇರಿದಂತೆ ಮುಂತಾದ ಗಣ್ಯರ ಜೊತೆಯಿರುವ ಫೋಟೊಗಳು ವೈರಲ್‌ ಆಗುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...