ಸರ್ಕಾರದ ಎಂಎಸ್‌ಪಿ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ನಾಯಕರು: ಫೆ.21ರಿಂದ ದೆಹಲಿ ಚಲೋ ಆರಂಭ

Date:

ಕೇಂದ್ರ ಸರ್ಕಾರ ನೀಡಿದ ಎಂಎಸ್‌ಪಿ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ನಾಯಕರು, ಇದರಿಂದ ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತನಾಯಕ ಜಗಜಿತ್ ಸಿಂಗ್ ದಲ್ಲೇವಾಲ್,”ಎರಡೂ ಕಡೆಯ ವೇದಿಕೆಯಿಂದ ನಡೆದ ಚರ್ಚೆಯ ನಂತರ ಸರ್ಕಾರ ನೀಡಿರುವ ಪ್ರಸ್ತಾಪದಲ್ಲಿ ಏನು ಇಲ್ಲ ಎಂದು ನಿರ್ಧರಿಸಲಾಗಿದೆ. ಇದರಿಂದ ರೈತರಿಗೆ ಪ್ರಯೋಜನವಾಗುವುದಿಲ್ಲ. ಆದಕಾರಣ ನಾವು ತಿರಸ್ಕರಿಸುತ್ತೇವೆ ಎಂದು ಹೇಳಿದರು.

ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಾಂಡೇರ್ ಮಾತನಾಡಿ, ಕೇಂದ್ರವು ಚರ್ಚೆಯಲ್ಲಿ ಬೇರೆ ಏನೊ ಇದೆ ಎಂದು ಹೇಳುತ್ತಿದೆ. ಅವರು ಬೇರೆ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ನಾವು ಯಾವುದೇ ಬೇರೆ ಪ್ರಸ್ತಾಪವನ್ನು ನೀಡಿಲ್ಲ. ದೆಹಲಿ ಚಲೋ ಮೆರವಣಿಗೆಯನ್ನು ಫೆ.21ರಂದು ಬೆಳಿಗ್ಗೆ 11 ಗಂಟೆಯಿಂದ ಪುನಃ ಆರಂಭಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹರಿಯಾಣದ ಶಂಭು ಗಡಿಯಲ್ಲಿ ರೈತರನ್ನು ನಡೆಸಿಕೊಂಡ ರೀತಿ ಖಂಡನೀಯ. ರೈತರಿಗೆ ತಡೆಯೊಡ್ಡಿರುವ ಬ್ಯಾರಿಕೇಡ್‌ಗಳು ಹಾಗೂ ಆಶ್ರುವಾಯು ಪ್ರಯೋಗಿಸುತ್ತಿರುವುದರ ಸಮಸ್ಯೆಗಳನ್ನು ಚರ್ಚಿಸಲು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಈ ಸಮಸ್ಯೆಗಳನ್ನು ಬಗೆಹರಿಸುವುವುದಾಗಿ ಅವರು ತಿಳಿಸಿದ್ದಾರೆ. ಪಂಜಾಬ್‌ ಸಿಎಂ ಈ ಸಮಸ್ಯೆಗಳನ್ನು ಕೇಂದ್ರದ ಮಂತ್ರಿಗಳ ಮುಂದೆ ಇಡಬೇಕು. ಹರಿಯಾಣ ಡಿಜಿಪಿ ಕೂಡ ಪ್ರಕಟಣೆ ಹೊರಡಿಸಿ ಪೆಲಟ್ ಗನ್ ಹಾಗೂ ಅಶ್ರುವಾಯು ಶೆಲ್‌ಗಳನ್ನು ಬಳಸುವುದಿಲ್ಲ ಎಂದು ಹೇಳಿದ್ದಾರೆ. ಈ ರೀತಿ ಮಾಡುವುದರ ವಿರುದ್ಧ ಸ್ವಯಂಪ್ರೇರಿತ ಗಂಭೀರ ಪ್ರಕರಣ ದಾಖಲಿಸಬೇಕೆಂದು ನಾವು ಸುಪ್ರೀಂ ಕೋರ್ಟಿಗೂ ಮನವಿ ಮಾಡಿದ್ದೇವೆ ಎಂದು ದಲ್ಲೇವಾಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

ಚಂಡೀಗಢದಲ್ಲಿ ರೈತರೊಂದಿಗೆ ನಡೆದ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ ಕೇಂದ್ರ ಸಚಿವರಾದ ಪಿಯೂಶ್ ಗೋಯಲ್, ಅರ್ಜುನ್ ಮುಂಡಾ ಹಾಗೂ ನಿತ್ಯಾನಂದ್ ರೈ ಕೂಡ ಭಾಗವಹಿಸಿದ್ದರು.

ಎಂಎಸ್‌ಪಿ ಖಾತರಿ ಜೊತೆಗೆ ರೈತರು ಎಂ ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳು, ರೈತರು ಹಾಗೂ ಕೃಷಿ ಕಾರ್ಮಿಕರಿಗೆ ಪಿಂಚಣಿ, ಸಾಲ ಮನ್ನಾ, ವಿದ್ಯುತ್ ಶುಲ್ಕ ಇಳಿಕೆ, 2021ರಲ್ಲಿ ಲಕೀಮ್‌ಪುರ ಖೇರಿ ಗಲಭೆಯಲ್ಲಿ ರೈತರ ಮೇಲೆ ದಾಖಲಿಸಿದ್ದ ಪೊಲೀಸ್ ಪ್ರಕರಣಗಳ ರದ್ದು, 2013ರ ಭೂಸ್ವಾಧೀನ ಕಾಯ್ದೆ ಮರು ಸ್ಥಾಪನೆ ಹಾಗೂ 2020-21ರ ರೈತ ಪ್ರತಿಭಟನೆಯಲ್ಲಿ ಮೃತಪಟ್ಟ ರೈತ ಕುಟುಂಬಗಳಿಗೆ ಪರಿಹಾರ ನೀಡುವುದು ರೈತರ ಬೇಡಿಕೆಗಳಾಗಿವೆ.

ರೈತರೊಂದಿಗೆ ಮಾತುಕತೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪಿಯೂಶ್ ಗೋಯಲ್,” ಸಹಕಾರಿ ಸಂಸ್ಥೆಗಳಾದ ಎನ್ಸಿಸಿಸಿಎಫ್ ಹಾಗೂ ಎನ್ಎಎಫ್ಇಡಿ, ಪ್ರಮುಖ ಬೆಳೆ ಬೆಳೆಯುವ ರೈತರೊಂದಿಗೆ ಒಪ್ಪಂದ ಮಾಡಿಕೊಂಡು ಮುಂದಿನ ಐದು ವರ್ಷಗಳವರೆಗೆ ಎಂಎಸ್ಪಿಯಡಿ ಬೆಳೆಗಳನ್ನು ಖರೀದಿಸಲಿದೆ ಎಂದರು.

“ಖರೀದಿಯಲ್ಲಿ ಪ್ರಮಾಣದ ಬಗ್ಗೆ ಯಾವುದೇ ಮಿತಿಯಿರುವುದಿಲ್ಲ ಹಾಗೂ ಇದಕ್ಕಾಗಿ ಪೋರ್ಟಲ್ಅನ್ನು ಕೂಡ ಅಭಿವೃದ್ಧಿಗೊಳಿಸಲಾಗುವುದು.ಚುನಾವಣೆಗಳು ಬರಲಿದ್ದು, ನೂತನ ಸರ್ಕಾರ ರಚಿತವಾಗಲಿದೆ. ಇಂತಹ ಕೆಲವೊಂದು ಸಮಸ್ಯೆಗಳ ಬಗ್ಗೆ ಚರ್ಚೆಗಳು ಮುಂದುವರಿಯಲಿದೆ” ಎಂದು ಗೋಯಲ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...