ದೇಶದಾದ್ಯಂತ 4 ಗಂಟೆಗಳ ಕಾಲ ರೈತರಿಂದ ‘ರೈಲು ತಡೆ’

Date:

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಸ್‌ಪಿ) ಕಾನೂನು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ರೈತರು ದೇಶದಾದ್ಯಂತ ಇಂದು ರೈಲು ತಡೆ ಪ್ರಾರಂಭಿಸಿದ್ದು, ಪಂಜಾಬ್‌ನ 22 ಜಿಲ್ಲೆಗಳ ರೈಲು ನಿಲ್ದಾಣಗಳಲ್ಲಿ ಪ್ರಯಾಣ ವ್ಯತ್ಯಯವಾಗಿದೆ.

ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ದೇಶದಾದ್ಯಂತ ಈ ರೈಲು ತಡೆ ಕರೆಯನ್ನು ನೀಡಿದ್ದು, ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ರೈಲು ತಡೆ ನಡೆಸಲಾಗುತ್ತಿದೆ. ಪ್ರಮುಖವಾಗಿ ರೈತರು ಫಿರೋಜಾಬಾದ್, ಅಮೃತಸರ, ರೂಪನಗರ ಸೇರಿದಂತೆ ಪಂಜಾಬ್‌ನ ಹಲವು ಪ್ರದೇಶದಲ್ಲಿ ರೈಲು ತಡೆ ನಡೆಸಲಿದ್ದಾರೆ ಎಂದು ಕೆಎಂಎಂ ಮುಖಂಡ ಸರ್ವನ್ ಸಿಂಗ್ ಪಂಡೆರ್ ಹೇಳಿದ್ದಾರೆ.

ಭಾರ್ತಿ ಕಿಸಾನ್ ಯೂನಿಯನ್ (ಏಕ್ತಾ ಉಗ್ರಾಣ) , ಭಾರ್ತಿ ಕಿಸಾನ್ ಯೂನಿಯನ್ ಮತ್ತು ಕ್ರಾಂತಿಕಾರಿ ಕಿಸಾನ್ ಯೂನಿಯನ್ ಸಂಯುಕ್ತ ಕಿಸಾನ್ ಮೋರ್ಚಾದ ಭಾಗವಾಗಿದ್ದು ಈ ಸಂಘಟನೆಗಳು ರೈಲು ತಡೆ ನಡೆಸುತ್ತಿದೆ. ಇನ್ನು ಎಸ್‌ಕೆಎಂ ಕಿಸಾನ್ ಮಹಾಪಂಚಾಯತ್ ಅನ್ನು ದೆಹಲಿಯಲ್ಲಿ ನಡೆಸುವ ಘೋಷಣೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಿಸಾನ್ ಮಹಾಪಂಚಾಯತ್‌ನಲ್ಲಿ 400ಕ್ಕೂ ಅಧಿಕ ರೈತ ಸಂಘಟನೆಗಳು ಭಾಗಿಯಾಗಲಿದೆ” ಎಂದು ಎಸ್‌ಕೆಎಂ ತಿಳಿಸಿದೆ. ಇನ್ನು ಪಂಜಾಬ್‌ನಿಂದ ದೆಹಲಿಯತ್ತ ಸಾಗುತ್ತಿರುವ ರೈತರುಗಳು ಶಂಭು ಮತ್ತು ಖಾನೌರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಫೆಬ್ರವರಿ 13ರಂದು ಈ ರೈತರನ್ನು ಪಂಜಾಬ್-ಹರಿಯಾಣ ಗಡಿಯಲ್ಲಿ ತಡೆಯಲಾಗಿದ್ದು, ರೈತರ ಮೇಲೆ ಅಶ್ರುವಾಯು ಪ್ರಯೋಗಿಸಲಾಗಿದೆ. ರೈತರು ಪಡಿತರ ತುಂಬಿದ ಟ್ರಾಲಿಯೊಂದಿಗೆ ತಮ್ಮ ಮೆರವಣಿಗೆ ಪ್ರಾರಂಭಿಸಿದ್ದು, “ಈ ರೇಷನ್ ತಿಂಗಳುಗಟ್ಟಲೆ ಉಳಿಯುತ್ತದೆ, ನಾವು ನಮ್ಮ ಬೇಡಿಕೆ ಈಡೇರಿಸುವವರೆಗೂ ಹಿಂತಿರುಗುವುದಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

ಈ ನಡುವೆ ಪೊಲೀಸರು ರೈತರ ವಾಹನಗಳು ದೆಹಲಿಗೆ ಪ್ರವೇಶಿಸದಂತೆ ರಸ್ತೆಗಳಲ್ಲಿ ಮೊಳೆಗಳು ಮತ್ತು ಕಾಂಕ್ರೀಟ್ ಬ್ಲಾಕ್‌ಗಳನ್ನು ಹಾಕಿದ್ದಾರೆ ಎಂದು ವರದಿಯಾಗಿದೆ. ಇನ್ನು ಕಳೆದ ಬುಧವಾರ ರೈತರುಗಳು ದೆಹಲಿಗೆ ತಮ್ಮ ತಮ್ಮ ರಾಜ್ಯದಿಂದ ಆಗಮಿಸುವಂತೆ ರೈತ ಸಂಘಟನೆಗಳು ಕರೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...