ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ: ರಾಹುಲ್ ಗಾಂಧಿ ಆಕ್ರೋಶ

Date:

ಭಾರತ–ಅಮೆರಿಕ ವ್ಯಾಪರ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ ಅವರು, ಇದೀಗ ಮತ್ತೊಮ್ಮೆ ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಲು ಸಾಲು ಪ್ರಶ್ನೆ ಕೇಳಿರುವ ಅವರು, ಭಾರತೀಯ ರೈತರಿಗೆ ದ್ರೋಹ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ‘ಅಮೆರಿಕದ ಜೊತೆ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತೀಯ ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಡ್ರೈ ಡಿಸ್ಟಿಲರ್ಸ್ ಧಾನ್ಯಗಳನ್ನು ಆಮದು ಮಾಡಿಕೊಳ್ಳುವುದರ ಅರ್ಥವೇನು? ಭಾರತೀಯ ಜಾನುವಾರುಗಳಿಗೆ ಅಮೆರಿಕದ ಮೆಕ್ಕೆಜೋಳದಿಂದ ತಯಾರಿಸಿದ ಡಿಸ್ಟಿಲರ್‌ಗಳ ಧಾನ್ಯಗಳನ್ನು ನೀಡಲಾಗುತ್ತದೆಯೇ? ಹೀಗೆ ಮಾಡುವುದರಿಂದ ನಮ್ಮ ಹಾಲಿನ ಉತ್ಪನ್ನಗಳು ಅಮೆರಿಕದ ಕೃಷಿ ಉದ್ಯಮದ ಮೇಲೆ ಅವಲಂಬಿತವಾಗುವಂತೆ ಮಾಡುವುದಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಭಾರತವು ಅಮೆರಿಕದಿಂದ ಸೋಯಾ ಎಣ್ಣೆಯನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿದರೆ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಸೇರಿದಂತೆ ದೇಶದಾದ್ಯಂತದ ಸೋಯಾ ಬೆಳೆಯುವ ರೈತರ ಮೇಲೆ ನೇರ ಪರಿಣಾಮ ಬೀರಲಿದೆ. ಮಾತ್ರವಲ್ಲ, ತೀವ್ರ ಬೆಲೆ ನಷ್ಟ ಉಂಟಾಗಲಿದೆ. ಇದನ್ನು ಭಾರತದ ರೈತರು ಹೇಗೆ ತಡೆದುಕೊಳ್ಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಹೆಚ್ಚುವರಿ ಪದಾರ್ಥಗಳು ಎಂದರೆ ಏನು? ಅದು ಏನನ್ನು ಒಳಗೊಂಡಿದೆ? ಇದರಿಂದ ಮುಂದಿನ ದಿನಗಳಲ್ಲಿ ಅಮೆರಿಕದ ದ್ವಿದಳ ಧಾನ್ಯಗಳು ಹಾಗೂ ಇತರೆ ಬೆಳಗಳ ಆಮದಿಗೆ ಅಡಿಪಾಯ ಹಾಕುವುದಿಲ್ಲವೇ? ಎಂದು ಕೇಳಿದ್ದಾರೆ.

‘ವ್ಯಾಪಾರೇತರ ಅಡೆತಡೆಗಳನ್ನು ತೆಗೆದುಹಾಕುವುದರ ಅರ್ಥವೇನು? ಮುಂದಿನ ದಿನಗಳಲ್ಲಿ ಮಾರ್ಪಡಿಸಿದ ತಳಿಗಳ ಮೇಲಿನ ತಮ್ಮ ನಿಲುವನ್ನು ಸಡಿಲಗೊಳಿಸಿ, ಸಂಗ್ರಹಣೆಯನ್ನು ಕಡಿಮೆ ಮಾಡುವ ಸಾಧ್ಯತೆ ಇದೆ ಮತ್ತು ಬೋನಸ್‌ ಅನ್ನು ಕಡಿಮೆ ಮಾಡಲು ಭಾರತದ ರೈತರ ಮೇಲೆ ಒತ್ತಡ ಹೇರಲಾಗುವುದಿಲ್ಲವೇ? ಎಂದು ಅವರು ಕೇಳಿದ್ದಾರೆ.

ಅಮೆರಿಕ ಹಾಗೂ ಭಾರತ ನಡುವಿನ ಈ ವ್ಯಾಪಾರ ಒಮ್ಮೆ ಆರಂಭವಾದರೆ, ಇದು ಪ್ರತೀ ವರ್ಷವೂ ದೊಡ್ಡದಾಗುತ್ತದೆ. ಅದನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ರಾಹುಲ್‌ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ.

‘ಉಭಯ ದೇಶಗಳ ನಡುವೆ ಈ ವ್ಯಾಪಾರ ಒಪ್ಪಂದ ಆರಂಭವಾದೆ, ಮುಂದಿನ ದಿನಗಳಲ್ಲಿ ಇದನ್ನು ತಡೆಯಲು ಸಾಧ್ಯವಾಗುತ್ತದೆಯೇ? ಇದು ವರ್ಷದಿಂದ ವರ್ಷಕ್ಕೆ ಹಚ್ಚಾಗುತ್ತಾ ಹೋಗುತ್ತದೆ. ಈ ಬಗ್ಗೆ ರೈತರು ಸ್ಪಷ್ಟತೆ ಪಡೆಯಬೇಕು’ ಎಂದು ಹೇಳಿದರು.

ಇದು ಕೇವಲ ಇಂದಿನ ಸಮಸ್ಯೆಯಲ್ಲ, ಭವಿಷ್ಯದ ದೃಷ್ಟಿಯಿಂದ ಗಂಭೀರವಾಗಿ ಯೋಚಿಸಬೇಕಾಗಿದೆ. ಭಾರತದ ಕೃಷಿ ಉದ್ಯಮದ ಮೇಲೆ ದೀರ್ಘಕಾಲದ ಹಿಡಿತ ಸಾಧಿಸಲು ಇನ್ನೊಂದು ದೇಶಕ್ಕೆ ಅವಕಾಶ ನೀಡುತ್ತಿದ್ದೇವೆಯೇ? ಎಂದು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...