ಪಂಜಾಬ್ | ಶಂಭು ಗಡಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ತೆರವುಗೊಳಿಸಿದ ಪೊಲೀಸರು

Date:

ಉಪವಾಸ ನಿರತ ರೈತ ಮುಖಂಡರಾದ ಜಗಜೀತ್ ಸಿಂಗ್ ದಲ್ಲೇವಾಲ್ ಮತ್ತು ಕಿಸಾನ್ ಮಜ್ದೂರು ಮೋರ್ಚಾ ಮುಖ್ಯಸ್ಥ ಸರ್ವನ್ ಸಿಂಗ್ ಪಂಧೇರ್ ಸೇರಿದಂತೆ ಹಲವು ಮಂದಿ ಪ್ರಮುಖ ರೈತ ಹೋರಾಟಗಾರರನ್ನು ಪೊಲೀಸರು ಮೊಹಾಲಿಯಲ್ಲಿ ಬಂಧಿಸಿದ್ದಾರೆ.

ಕೇಂದ್ರ ಸರ್ಕಾರದ ನಿಯೋಗದ ಜತೆ ಚಂಡೀಗಢದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ವಾಪಸ್ಸಾದ ಇವರನ್ನು ಬಂಧಿಸಲಾಗಿದ್ದು, ಶಂಭು ಗಡಿ ಮತ್ತು ಖನೌರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನೂ ತೆರವುಗೊಳಿಸಲಾಗಿದೆ.

ಶಂಭು ಮತ್ತು ಖನೌರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಯಾವುದೇ ತೊಂದರೆ ಕೊಡುವುದಿಲ್ಲ ಎಂದು ಪಂಜಾಬ್ ಸಚಿವರು ಹೇಳಿಕೆ ನೀಡುತ್ತಿರುವ ನಡುವೆಯೇ ಈ ಕಾರ್ಯಾಚರಣೆ ನಡೆದಿದೆ. ಬುಧವಾರ ತಡರಾತ್ರಿ ಉಭಯ ಪ್ರತಿಭಟನಾ ತಾಣಗಳಲ್ಲಿ ರೈತರನ್ನು ತೆರವುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖನೌರಿಯಲ್ಲಿ 250 ಮಂದಿ ಹಾಗೂ ಶಂಭು ಗಡಿಯಲ್ಲಿ 110 ಮಂದಿಯನ್ನು ಮತ್ತು ಮೊಹಾಲಿಯಲ್ಲಿ ಕೆಲ ರೈತರನ್ನು ಬಂಧಿಸಲಾಗಿದೆ ಎಂದು ಹಿರಿಯ ಪಂಜಾಬ್ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಎಲ್ಲರನ್ನೂ ಕಲ್ಯಾಣ ಮಂಟಪವೊಂದಕ್ಕೆ ಸ್ಥಳಾಂತರಿಸಲಾಗಿದೆ. ಫೆಬ್ರವರಿಯ ಬಳಿಕ ರೈತರು ಹಾಗೂ ಕೇಂದ್ರದ ಪ್ರತಿನಿಧಿಗಳ ನಡುವೆ ನಡೆದ ಏಳನೇ ಸುತ್ತಿನ ಮಾತುಕತೆ ಇದಾಗಿತ್ತು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕಾನೂನು ಜಾರಿಗೊಳಿಸಬೇಕೆಂಬ ಬೇಡಿಕೆ ಬಗ್ಗೆ ಮಾತುಕತೆ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮನರೇಗ- ಕೂಲಿ ಸಂಕಟಕ್ಕೆ ಮೋದಿ ತಾತ್ಸಾರ

ಎಂಎಸ್‌ಪಿ ಸಮಸ್ಯೆ ಬಗ್ಗೆ ಆಳವಾಗಿ ಅಧ್ಯಯನ ನಡೆಸುವ ಸಲುವಾಗಿ ವಿವಿಧ ಹಕ್ಕುದಾರರನ್ನು ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಜಂಟಿ ಕಾರ್ಯದರ್ಶಿಯನ್ನು ನೇಮಕ ಮಾಡಲು ಕೇಂದ್ರ ಸಚಿವರು ನಿರ್ಧರಿಸಿದರು. ಮುಂದಿನ ಸುತ್ತಿನ ಮಾತುಕತೆ ಮೇ 4ರಂದು ನಡೆಯಲಿದೆ.

ಜಂಟಿ ಕಾರ್ಯದರ್ಶಿ ಪೂರ್ಣಚಂದ ಕಿಶನ್ ಅವರು ಕೃಷಿ ತಜ್ಞರು ಮತ್ತು ರೈತ ಮುಖಂಡರ ಜತೆ ಚರ್ಚೆ ನಡೆಸುವರು. ಪ್ರತಿಷ್ಠಿತ ಸಂಸ್ಥೆಗಳಾದ ಆರ್ಗನೈಸೇಷನ್ ಫಾರ್ ಎಕನಾಮಿಕ್ ಕೋ ಆಪರೇಷನ್ ಅಂಡ್ ಡೆವಲಪ್ಮೆಂಟ್, ಕ್ರಿಸಿಲ್ ಮತ್ತು ಆರ್ ಬಿಐನಂಥ ಸಂಸ್ಥೆಗಳ ಅಂಕಿ ಅಂಶಗಳನ್ನು ರೈತರು ಪ್ರಸ್ತುತಪಡಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.

https://twitter.com/ANI/status/1902547750098510137?ref_src=twsrc%5Etfw%7Ctwcamp%5Etweetembed%7Ctwterm%5E1902547750098510137%7Ctwgr%5E13e3ea3630c780535836030b39dc8dfd5757adcd%7Ctwcon%5Es1_&ref_url=https%3A%2F%2Fwww.deccanherald.com%2F%2Findia%2Findia-politics-live-news-latest-updates-jp-nadda-narendra-modi-amit-shah-congress-rahul-gandhi-jairam-ramesh-nagpur-violence-shiv-sena-devendra-fadnavis-tmc-mamata-banerjee-nda-nitish-kumar-farmers-protest-3454362

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...