ದೆಹಲಿ ಚಲೋ ಪುನರಾರಂಭ: ರೈತರತ್ತ ಅಶ್ರುವಾಯು ಪ್ರಯೋಗ, ಮಾತುಕತೆಗೆ ಕೇಂದ್ರ ಪ್ರಸ್ತಾಪ

Date:

ದೆಹಲಿ ಚಲೋ ಮೆರವಣಿಗೆ ಇಂದು ಬೆಳಿಗ್ಗೆ(ಫೆ.21) 11 ಗಂಟೆಗೆ ಪುನಃ ಪ್ರಾರಂಭವಾಗಿದ್ದು, ಪಂಜಾಬ್ – ಹರಿಯಾಣ ಗಡಿಯಲ್ಲಿ ಭದ್ರತಾಪಡೆಗಳು ರೈತರತ್ತ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿವೆ. ಎಂಎಸ್‌ಪಿ ಗ್ಯಾರಂಟಿ ಖಾತರಿಗಾಗಿ ಕೇಂದ್ರ ಸರ್ಕಾರವು ಐದನೇ ಸುತ್ತಿನ ಮಾತುಕತೆಗೆ ರೈತ ಮುಖಂಡರನ್ನು ಆಹ್ವಾನಿಸಿದೆ.

ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಕೆಡವಲು ರೈತರು ತಂದಿರುವ ಸಲಕರಣೆಗಳನ್ನು  ವಶಪಡಿಸಿಕೊಳ್ಳುವಂತೆ ಪಂಜಾಬ್‌ ಪೊಲೀಸರಿಗೆ ಹರಿಯಾಣ ಪೊಲೀಸರು ಆಗ್ರಹಿಸಿದ್ದಾರೆ. ದೆಹಲಿ ಚಲೋ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಎರಡು ರಾಜ್ಯಗಳ ಗಡಿಯಲ್ಲಿ 14 ಸಾವಿರಕ್ಕೂ ಹೆಚ್ಚಿನ ರೈತರು, 1200 ಟ್ರಾಕ್ಟರ್‌ಗಳು, 300 ಕಾರುಗಳು ಹಾಗೂ 10 ಮಿನಿ ಬಸ್‌ಗಳು ಆಗಮಿಸಿವೆ.

ದೆಹಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ರಾಷ್ಟ್ರ ರಾಜಧಾನಿಯತ್ತ ರೈತರು ಬರುವುದನ್ನು ತಡೆಯಲು  ಫೆ.13ರಿಂದಲೇ ಅಂತರ್‌ರಾಜ್ಯ ಗಡಿಯನ್ನು ಬಂದ್ ಮಾಡಿದ್ದಾರೆ. ಕೇಂದ್ರ ಹಾಗೂ ಹರಿಯಾಣ ಸರ್ಕಾರ ರೈತರ ಪ್ರತಿಭಟನೆ ಬಗ್ಗೆ ಪಂಜಾಬ್‌ ಹಾಗೂ ಹರಿಯಾಣ ಕೋರ್ಟ್‌ಗಳಿಗೆ ಮನವಿ ಸಲ್ಲಿಸಿದ್ದು, ಆದರೆ ಕೋರ್ಟ್‌ಗಳು ತುರ್ತಾಗಿ ವಿಚಾರಣೆ ಕೈಗೊಳ್ಳಲು ನಿರಾಕರಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

ರೈತ ಪ್ರತಿಭಟನೆ ಪುನರಾರಂಭವಾದ ನಂತರ ಮಾತನಾಡಿದ ಕಿಸಾನ್ ಮಜ್ದೂರ್ ಮೋರ್ಚಾ ನಾಯಕ ಸರ್ವಾನ್ ಸಿಂಗ್ ಪಂಡೇರ್‌, ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದಾರೆ. ಸರ್ಕಾರವು ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ಯಾವುದೇ ಅಡೆತಡೆಯಿಲ್ಲದೆ ದೆಹಲಿಗೆ ತೆರಳಲು ಅನುಮತಿಸಬೇಕು ಎಂದು ಹೇಳಿದ್ದಾರೆ.

“ನಾವು ನಮ್ಮ ಕಡೆಯಿಂದ ಕೈಲಾದಷ್ಟು ಪ್ರಯತ್ನಿಸಿದೆವು. ನಾವು ಸಭೆಗಳಿಗೆ ಹಾಜರಾದೆವು. ಪ್ರತಿಯೊಂದು ವಿಷಯವನ್ನು ಚರ್ಚಿಸಲಾಯಿತು. ಈಗ ಕೇಂದ್ರ ಸರ್ಕಾರವು ನಿರ್ಧಾರವನ್ನು ಕೈಗೊಳ್ಳಬೇಕಿದೆ. ನಾವು ಶಾಂತಿಯುತವಾಗಿದ್ದೇವೆ. ಬ್ಯಾರಿಕೇಡ್‌ಗಳನ್ನು ತೆಗೆದು ದೆಹಲಿಯತ್ತ ಮೆರವಣಿಗೆಗೆ ತೆರಳಲು ನಮಗೆ ಅನುಮತಿಸಬೇಕು” ಎಂದು ಸರ್ವಾನ್ ಸಿಂಗ್ ಪಂಡೇರ್‌ ತಿಳಿಸಿದ್ದಾರೆ.

ಈ ನಡುವೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಕೇಂದ್ರ ಸಚಿವ ಅರ್ಜುನ್ ಮುಂಡಾ, ನಾಲ್ಕನೇ ಸುತ್ತಿನ ನಂತರ  ಸರ್ಕಾರವು ಎಲ್ಲ ಸಮಸ್ಯೆಗಳಾದ ಎಂಎಎಸ್‌ಪಿ ಬೇಡಿಕೆ, ಬೆಳೆ ವೈವಿದ್ಯೀಕರಣ, ರೈತರ ವಿರುದ್ಧದ ಪ್ರತಿಭಟನೆ ವಾಪಸ್ ಸೇರಿದಂತೆ ಮುಂತಾದ ಬೇಡಿಕೆಗಳನ್ನು ಐದನೇ ಸುತ್ತಿನಲ್ಲಿ ಚರ್ಚಿಸಲು ಸಿದ್ಧವಿದೆ. ರೈತ ನಾಯಕರನ್ನು ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸುತ್ತೇನೆ. ನಾವು ಶಾಂತಿ ಕಾಪಾಡಬೇಕು” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...