ಶುಲ್ಕ ವಿವಾದ | ಶಾಲೆಯಿಂದ ಹೊರಹಾಕಲಾಗಿದ್ದ 32 ವಿದ್ಯಾರ್ಥಿಗಳ ಮರು ಸೇರ್ಪಡೆಗೆ ಆದೇಶ

Date:

ದೆಹಲಿಯಲ್ಲಿ ಶುಲ್ಕ ವಿವಾದ ಕಾರಣಕ್ಕಾಗಿ ಶಾಲೆಯಿಂದ ಹೊರದಬ್ಬಲಾಗಿದ್ದ 32 ವಿದ್ಯಾರ್ಥಿಗಳ ಪೋಷಕರು ದೂರುಗಳನ್ನು ನೀಡಿದ ಬಳಿಕ ವಿದ್ಯಾರ್ಥಿಗಳನ್ನು ಮರಳಿ ಸೇರಿಸಿಕೊಳ್ಳುವಂತೆ ಡಿಪಿಎಸ್‌ ದ್ವಾರಕಾ ಶಾಲೆಗೆ ಶಿಕ್ಷಣ ನಿರ್ದೇಶನಾಲಯ (ಡಿಒಇ) ನಿರ್ದೇಶನ ನೀಡಿದೆ.

ಶಾಲೆಗೆ ನೀಡಲಾದ ಆದೇಶ ಪ್ರತಿಯಲ್ಲಿ ಡಿಒಇ, “ಶಾಲೆಯ ಧೋರಣೆ, ಕ್ರಮಗಳು ನ್ಯಾಯಾಲಯದ ನಿರ್ದೇಶನಗಳನ್ನು ಉಲ್ಲಂಘಿಸಿವೆ. ಶಾಲೆಯು ಇಲಾಖೆಯ ಅನುಮೋದನೆಯಿಲ್ಲದೆ ಶುಲ್ಕ ಹೆಚ್ಚಳ ಮತ್ತು ಶುಲ್ಕ ಸಂಬಂಧಿತ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳ ವಿರುದ್ಧ ಯಾವುದೇ ರೀತಿಯ ತಾರತಮ್ಯವನ್ನು ಮಾಡುವಂತಿಲ್ಲ. ಯಾವುದೇ ಮಗು ಶುಲ್ಕ ಸಂಬಂಧಿತ ಸಮಸ್ಯೆಗಳ ಕಾರಣಕ್ಕೆ ತಾರತಮ್ಯವನ್ನು ಎದುರಿಸಬಾರದು. ಆದರೂ, ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಲಾಗಿದೆ. ಇದು ಕಾನೂನುಬಾಹಿರ ಕ್ರಮ. ಶಾಲೆಯಿಂದ ಹೊರಹಾಕಲ್ಪಟ್ಟ ಮಕ್ಕಳನ್ನು ಮರಳಿ ಸೇರಿಸಿಕೊಳ್ಳಬೇಕು” ಎಂದು ಸೂಚಿಸಿದೆ.

“ಸರಿಯಾದ ಯಾವುದೇ ಕಾರಣ, ಸಮರ್ಥನೆಯ ಅಂಶಗಳಿಲ್ಲದೆ ವಿದ್ಯಾರ್ಥಿಗಳನ್ನು ತೆಗೆದುಹಾಕುವುದು, ಪೋಷಕರ ಒಪ್ಪಿಗೆಯಿಲ್ಲದೆ ವಿದ್ಯಾರ್ಥಿಗಳನ್ನು ಶಾಲಾ ಬಸ್‌ಗಳಲ್ಲಿಯೇ ಮನೆಗೆ ಕಳುಹಿಸುವುದು ಅನುಚಿತ ಕೃತ್ಯವಾಗಿದೆ. ಹೆಚ್ಚಿನ ಶುಲ್ಕವನ್ನು ಪಾವತಿಸದ ಕಾರಣ ಪ್ರವೇಶ ಪತ್ರ ಅಥವಾ ವರ್ಗಾವಣೆ ಪ್ರಮಾಣಪತ್ರಗಳನ್ನು ತಡೆಹಿಡಿಯುವುದು ಸೂಕ್ತವಲ್ಲ. ಇಂತಹ ಧೋರಣೆಯನ್ನು ಸಹಿಸಲಾಗದು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶುಲ್ಕ ವಿವಾದದ ಕಾರಣಕ್ಕಾಗಿ ಶಾಲೆಯಿಂದ ತೆಗೆದುಹಾಕಲಾದ ಎಲ್ಲ ವಿದ್ಯಾರ್ಥಿಗಳನ್ನು ಮತ್ತೆ ಸೇರಿಸಿಕೊಳ್ಳಬೇಕು. ಬಲವಂತ ಅಥವಾ ತಾರತಮ್ಯಕ್ಕೆ ಒಳಪಡಿಸಬಾರದು. ಶಾಲೆಯು ಮೂರು ದಿನಗಳಲ್ಲಿ ಅನುಸರಣಾ ವರದಿಯನ್ನು ಇಲಾಖೆಗೆ ಸಲ್ಲಿಸಬೇಕು ಎಂದು ಡಿಒಇ ಹೇಳಿದೆ. ಆದಾಗ್ಯೂ, ಈವರೆಗೆ ಶಾಲೆಯಿಂದ ಯಾವುದೇ ಪಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

ಪೋಷಕರ ದೂರಿನ ಪ್ರಕಾರ, “ಶಾಲೆಯು ಕಳೆದ ಕೆಲವು ವರ್ಷಗಳಿಂದ ಅನುಮೋದಿಸದ ಶುಲ್ಕಗಳನ್ನು ಸಂಗ್ರಹಿಸಲು ಮುಂದಾಗಿದೆ. ಆ ಶುಲ್ಕಗಳನ್ನು ಪಾವತಿಸುವಂತೆ ಪೋಷಕರ ಮೇಲೆ ಒತ್ತಡ ಮತ್ತು ಬಲವಂತದ ತಂತ್ರಗಳನ್ನು ಬಳಸಿದೆ. ಮಾಸಿಕ ಶುಲ್ಕವನ್ನು ಈ ಹಿಂದೆ 7,000 ರೂ. ಹೆಚ್ಚಿಸಲಾಗಿತ್ತು. ಇತ್ತೀಚೆಗೆ ಅದನ್ನು 9,000 ರೂ.ಗೆ ಹೆಚ್ಚಿಸಲಾಗಿದೆ” ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...