ಗುಣಮಟ್ಟ ಪರೀಕ್ಷೆಯಲ್ಲಿ ವಿಫಲರಾದ 54 ಕೆಮ್ಮಿನ ಸಿರಪ್ ತಯಾರಕರು

Date:

ದೇಶದಲ್ಲಿ ಕೆಮ್ಮಿನ ಸಿರಪ್‌ ಗಳನ್ನು ತಯಾರಿಸುತ್ತಿರುವ 54 ಕಂಪನಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲಗೊಂಡಿವೆ ಎಂದು ಸರಕಾರಿ ವರದಿಯೊಂದು ಹೇಳಿದೆ.

ಭಾರತದಲ್ಲಿ ತಯಾರಾದ ಕೆಮ್ಮಿನ ಸಿರಪ್‌ ಗಳಿಗೂ ವಿಶ್ವಾದ್ಯಂತ 141 ಮಕ್ಕಳ ಸಾವಿಗೂ ತಳುಕು ಹಾಕಿದ ವರದಿಗಳ ಬಳಿಕ ವಿವಿಧ ರಾಜ್ಯಗಳಲ್ಲಿ ನಡೆಸಲಾದ ಪ್ರಯೋಗಾಲಯ ಪರೀಕ್ಷೆಗಳನ್ನು ವರದಿಯು ಉಲ್ಲೇಖಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಅಕ್ಟೋಬರ್‌ವರೆಗೆ ಬಿಡುಗಡೆಗೊಳಿಸಲಾದ 2,104 ಪರೀಕ್ಷಾ ವರದಿಗಳ ಪೈಕಿ 54 ಕಂಪನಿಗಳಿಗೆ ಸಂಬಂಧಿಸಿದ 126 (ಶೇ.6) ವರದಿಗಳು ಪ್ರಮಾಣಿತ ಗುಣಮಟ್ಟಕ್ಕೆ ಅನುಗುಣವಾಗಿರಲಿಲ್ಲ ಎಂದು ಕೇಂದ್ರೀಯ ಔಷಧಿ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ)ಯ ವರದಿಯು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿಯು ಕೆಮ್ಮಿನ ಸಿರಪ್‌ಗಳು ಕಳಪೆ ಗುಣಮಟ್ಟದ್ದಾಗಿರುವ ನಿರ್ದಿಷ್ಟ ಪ್ರಕರಣಗಳನ್ನು ಬೆಟ್ಟು ಮಾಡಿದೆ. ಉದಾಹರಣೆಗೆ ಗುಜರಾತಿನ ಆಹಾರ ಮತ್ತು ಔಷಧಿ ಪ್ರಯೋಗಶಾಲೆಯು ಅಕ್ಟೋಬರ್‌ವರೆಗೆ 385 ಸ್ಯಾಂಪಲ್‌ಗಳನ್ನು ವಿಶ್ಲೇಷಿಸಿದ್ದು,ಈ ಪೈಕಿ 20 ಕಂಪನಿಗಳ 51 ಕೆಮ್ಮಿನ್ ಸಿರಪ್‌ಗಳು ಪ್ರಮಾಣಿತ ಗುಣಮಟ್ಟದ್ದಾಗಿರಲಿಲ್ಲ. ಈ ಪೈಕಿ 10 ಕಂಪನಿಗಳ 18 ಸ್ಯಾಂಪಲ್‌ಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲಗೊಂಡಿವೆ.

ಈ ಸುದ್ದಿ ಓದಿದ್ದೀರಾ? ಫೋಟೋ ಆಲ್ಬಮ್ | ಮಳೆ ಅಬ್ಬರಕ್ಕೆ ತಮಿಳುನಾಡು ತತ್ತರ

ಚಂಡಿಗಡದ ಪ್ರಾದೇಶಿಕ ಔಷಧಿ ಪರೀಕ್ಷಾ ಪ್ರಯೋಗಾಲಯವು 284 ಪರೀಕ್ಷಾ ವರದಿಗಳನ್ನು ಬಿಡುಗಡೆಗೊಳಿಸಿದ್ದು,10 ಕಂಪನಿಗಳ 23 ಸ್ಯಾಂಪಲ್‌ಗಳು ಪ್ರಮಾಣಿತ ಗುಣಮಟ್ಟದ್ದಾಗಿರಲಿಲ್ಲ. ಗಾಝಿಯಾಬಾದ್‌ನ ಇಂಡಿಯನ್ ಫಾರ್ಮಾಕೋಪಿಯಾ ಕಮಿಷನ್ 502 ವರದಿಗಳನ್ನು ಬಿಡುಗಡೆಗೊಳಿಸಿದ್ದು ಒಂಭತ್ತು ಕಂಪನಿಗಳ 29 ಸ್ಯಾಂಪಲ್‌ಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲಗೊಂಡಿವೆ.

ಗಾಂಬಿಯಾದಲ್ಲಿ ಮೂತ್ರಪಿಂಡ ವೈಫಲ್ಯದಿಂದಾಗಿ ಸಂಭವಿಸಿದ್ದ 70 ಮಕ್ಕಳ ಸಾವುಗಳಿಗೂ ಭಾರತೀಯ ಕಂಪನಿ ಮೇಡನ್ ಫಾರ್ಮಾಸ್ಯೂಟಿಕಲ್ಸ್ ಲಿ. ತಯಾರಿಸಿದ್ದ ಕೆಮ್ಮು ಮತ್ತು ಶೀತದ ಸಿರಪ್‌ಗಳಿಗೂ ನಂಟು ಕಲ್ಪಿಸಬಹುದಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ  ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಹೇಳಿದ ಬಳಿಕ ಭಾರತದಲ್ಲಿ ಉತ್ಪಾದಿತ ಕೆಮ್ಮಿನ ಸಿರಪ್‌ಗಳು ನಿಗಾದಲ್ಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...