ಕೇರಳ | ಒಂದೇ ಬಣ್ಣದ ಶರ್ಟ್ ಖರೀದಿಸುವ ವಿಚಾರದಲ್ಲಿ ಯುವಕರ ನಡುವೆ ಮಾರಾಮಾರಿ!

Date:

ಒಂದೇ ಬಣ್ಣದ ಶರ್ಟ್ ಖರೀದಿಸುವ ವಿಚಾರದಲ್ಲಿ ಯುವಕರ ನಡುವೆ ಮಾರಾಮಾರಿ ನಡೆದ ಘಟನೆಯು ಕೇರಳದ ಕೋಝಿಕ್ಕೋಡ್‌ನ ನಾದಾಪುರಂ ಕಲ್ಲಚ್ಚಿಯ ಜವಳಿ ಮಳಿಗೆಯ ಬಳಿ ನಡೆದಿದೆ.

ಬಟ್ಟೆ ಅಂಗಡಿಗೆ ಬಂದ ಯುವಕರು ಒಂದೇ ಬಣ್ಣದ ಶರ್ಟ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ವಿಚಾರದಲ್ಲೇ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ನಂತರ ಈ ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಹುಳಿಯಾರು | ಇಬ್ಬರು ಶಾಲಾ ವಿದ್ಯಾರ್ಥಿಗಳ ಕ್ಷುಲ್ಲಕ ಕಿತ್ತಾಟ; ಕೋಮು ಬಣ್ಣ ಬಳಿದ ಹಿಂದುತ್ವವಾದಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ತಿಳಿಯುತ್ತಿದ್ದಂತೆ ಈ ಯುವಕರ ಸ್ನೇಹಿತರು ಸ್ಥಳಕ್ಕೆ ಧಾವಿಸಿದ್ದಾರೆ. ಬರೀ ಒಂದು ಶರ್ಟ್ ವಿಚಾರಕ್ಕೆ ಎರಡೂ ಕಡೆಯವರು ಹೊಡೆದಾಡಿಕೊಂಡಿದ್ದಾರೆ. ಕೂಡಲೇ ಸ್ಥಳೀಯರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಬಳಿಕ ಪೊಲೀಸರು ಕೂಡಾ ಮಧ್ಯಪ್ರವೇಶಿಸಿ ಗುಂಪನ್ನು ಚದುರಿಸಿದ್ದಾರೆ. ನಾದಾಪುರಂ ಪೊಲೀಸರು ಸ್ಥಳಕ್ಕೆ ಬಂದಾಗ ಎಲ್ಲರೂ ಓಡಿಹೋಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇನ್ನು ಈ ಗುಂಪಿನ ನಡುವೆ ಈ ಹಿಂದೆಯೂ ಘರ್ಷಣೆ ನಡೆದಿತ್ತು. ಇದೀಗ ಒಂದೇ ಬಣ್ಣದ ಶರ್ಟ್ ಖರೀದಿ ಮತ್ತೆ ಜಗಳಕ್ಕೆ ಒಂದು ನೆಪ ಮಾತ್ರವಾಗಿದೆ ಎಂದು ಹೇಳಲಾಗಿದೆ. ಸದ್ಯ ಈ ಎರಡೂ ಗುಂಪಿನ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ.

ಕ್ಷುಲ್ಲಕ ಕಾರಣದಿಂದಾಗಿ ಯುವಕರು ಗಲಾಟೆ ಮಾಡುವ, ಹೊಡೆದಾಡಿಕೊಳ್ಳುವ, ಅದರಲ್ಲೂ ಕೊಲೆ ಮಾಡುವಂತಹ ಘಟನೆಗಳು ದೇಶದಲ್ಲಿ ಹೆಚ್ಚಾಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟದಲ್ಲಿ 10ನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆ ಇದೇ ತಿಂಗಳಲ್ಲಿ ಕೇರಳದ ಕಲ್ಲಿಕೋಟೆಯಲ್ಲಿ ನಡೆದಿದೆ. ರಸ್ತೆಯಲ್ಲಿ ನಡೆಯುವಾಗ ಕೈ ತಗುಲಿತು ಎಂಬ ಕಾರಣಕ್ಕೆ, ದಿಟ್ಟಿಸಿ ನೋಡಿದ ಎಂಬ ಕಾರಣಕ್ಕೆ, ಹೀಗೆ ನಾನಾ ಕ್ಲುಲ್ಲಕ ಕಾರಣಗಳೇ ಕೊಲೆಗೆ ಕಾರಣವಾಗುತ್ತಿರುವುದು ವಿಷಾದನೀಯ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...