21 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಲಡಾಖ್ ಹೋರಾಟಗಾರ ಸೋನಮ್ ವಾಂಗ್​ಚುಕ್

Date:

ಲಡಾಖಿನ ನಾಜೂಕು ಪರಿಸರದ ಉಳಿವು ಮತ್ತು 6ನೇ ಶೆಡ್ಯೂಲಿನೊಂದಿಗೆ ರಾಜ್ಯದ ಸ್ಥಾನಮಾನಕ್ಕೆ ಒತ್ತಾಯಿಸಿ ಇಂಜಿನಿಯರ್ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್​ಚುಕ್ ಕಳೆದ 21 ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಮಾ.26ರಂದು ಕೊನೆಗೊಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

21 ದಿನಗಳ ಕಾಲ ಉಪ್ಪು ಮತ್ತು ನೀರನ್ನು ಮಾತ್ರ ಸೇವಿಸಿ ಸತ್ಯಾಗ್ರಹ ನಡೆಸುತ್ತಿದ್ದರು. ನನ್ನ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರೂ ಕೂಡ, ಹೋರಾಟ ಮುಂದುವರಿಯಲಿದೆ ಎಂದು ಸೋನಮ್ ವಾಂಗ್​ಚುಕ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಇವರ ಹೋರಾಟಕ್ಕೆ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಡಾಖ್‌ಗೆ ಸಾಂವಿಧಾನಿಕ ರಕ್ಷಣೆ ಮತ್ತು ಜನರ ರಾಜಕೀಯ ಹಕ್ಕುಗಳಿಗಾಗಿ ನಾನು ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಹೇಳುವ ಮೂಲಕ ವಾಂಗ್‌ಚುಕ್ ಅವರು ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು.

ಉಪವಾಸ ಅಂತ್ಯಗೊಳ್ಳುತ್ತಿದ್ದಂತೆ ಕೇಂದ್ರಾಡಳಿತ ಪ್ರದೇಶದ ವಿವಿಧ ಭಾಗಗಳಲ್ಲಿ ಸಾವಿರಾರು ಮಂದಿ ಜಮಾಯಿಸಿದ್ದು, ಇದೇ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಮಹಿಳಾ ಸಂಘಟನೆಗಳು ಘೋಷಿಸಿವೆ.

ಮಾರ್ಚ್ 6ರಂದು ಸೋನಮ್ ವಾಂಗ್​ಚುಕ್ ತಮ್ಮ ಉಪವಾಸವನ್ನು ಪ್ರಾರಂಭಿಸಿದ್ದರು. 21 ದಿನಗಳವರೆಗೆ ಸತ್ಯಾಗ್ರಹ ನಡೆಸುತ್ತೇನೆ. ಕೇಂದ್ರ ಸರ್ಕಾರವು ಒಂದು ವೇಳೆ ನಮ್ಮ ಮನವಿಗೆ ಓಗೊಡದಿದ್ದರೆ, ನನ್ನ ಹೋರಾಟವನ್ನು ಸಾವಿನವರೆಗೂ ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲೂಬಹುದು” ಎಂದು ಹೇಳಿದ್ದರು.

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಲಡಾಖ್‌ಗೆ ತೆರಳಿದ್ದ ಖ್ಯಾತ ನಟ ಪ್ರಕಾಶ್ ರಾಜ್, ಹೋರಾಟದಲ್ಲಿ ಭಾಗವಹಿಸುವ ಮೂಲಕ ಸೋನಮ್ ವಾಂಗ್​ಚುಕ್ ಅವರನ್ನು ಬೆಂಬಲಿಸಿದ್ದರು. ಅಲ್ಲದೇ, ಈ ಕುರಿತು ಅವರು ಟ್ವಿಟರ್​ನಲ್ಲಿ ಪೋಸ್ಟ್ ಕೂಡ ಹಂಚಿಕೊಂಡಿದ್ದರು.

ಇದನ್ನು ಓದಿದ್ದೀರಾ? ಲಡಾಖ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ನಟ ಪ್ರಕಾಶ್ ರಾಜ್; ವಾಂಗ್​ಚುಕ್ ಹೋರಾಟಕ್ಕೆ ಬೆಂಬಲ

ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್​ಚುಕ್, ಬಾಲಿವುಡ್ ನಟ ಅಮೀರ್ ಖಾನ್, ಕರೀನಾ ಕಪೂರ್, ಬೊಮನ್ ಇರಾನಿ ನಟನೆಯ, ರಾಜ್‌ಕುಮಾರ್ ಹಿರಾನಿ ನಿರ್ದೇರ್ಶನದ ‘ತ್ರೀ ಈಡಿಯಟ್ಸ್ (3 idiots) ಸಿನಿಮಾಕ್ಕೆ ಪ್ರೇರಣೆಯಾಗಿದ್ದರು. ಆದರೆ, ಈ ಹೋರಾಟಕ್ಕೆ ಚಿತ್ರತಂಡವಾಗಲೀ, ನಟರಾಗಲೀ ಬೆಂಬಲ ಸೂಚಿಸಿರಲಿಲ್ಲ. ಹೀಗಾಗಿ, ಸೋಷಿಯಲ್ ಮೀಡಿಯಾಗಳಲ್ಲಿ ಇದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...