ವಿವಾದಾತ್ಮಕ ಎಸ್‌ಐಆರ್ ನಂತರ ಬಿಹಾರದ ಅಂತಿಮ ಮತದಾರರ ಪಟ್ಟಿ ಪ್ರಕಟ

Date:

ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಮಂಗಳವಾರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. 22 ವರ್ಷಗಳ ಬಳಿಕ ನಡೆಸಲಾದ ‘ವಿಶೇಷ ತೀವ್ರ ಪರಿಷ್ಕರಣೆ ‘(ಎಸ್‌ಐಆರ್) ಯೋಜನೆ ನಂತರ ಬಿಡುಗಡೆಗೊಂಡ ಈ ಪಟ್ಟಿಯು ಕರಡು ಪಟ್ಟಿಗೆ ಹೋಲಿಸಿದರೆ ಅಂತಿಮ ಮತದಾರರ ಪಟ್ಟಿಯಲ್ಲಿ ನೋಂದಾಯಿತ ಮತದಾರರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.

ಪಾಟ್ನಾ ಜಿಲ್ಲೆಯಲ್ಲಿ ಮತದಾರರ ಸಂಖ್ಯೆ ಈಗ 48,15,294ಕ್ಕೆ ಏರಿಕೆಯಾಗಿದೆ. ಆಗಸ್ಟ್ 1ರಂದು ಪ್ರಕಟಗೊಂಡ ಕರಡು ಪಟ್ಟಿಯಲ್ಲಿ 46,51,694 ಹೆಸರುಗಳಿದ್ದು, ಆಕ್ಷೇಪ–ದಾವೆ ಪ್ರಕ್ರಿಯೆ ಬಳಿಕ 1,63,600 ಹೊಸ ಹೆಸರುಗಳು ಸೇರ್ಪಡೆಯಾಗಿವೆ.

ರಾಜ್ಯ ಮಟ್ಟದ ಕರಡು ಪಟ್ಟಿಯಲ್ಲಿ 7.24 ಕೋಟಿ ಹೆಸರುಗಳಿದ್ದು, ಹಿಂದಿನ 7.89 ಕೋಟಿಗೆ ಹೋಲಿಸಿದರೆ 65.63 ಲಕ್ಷ ಹೆಸರುಗಳು ತೆಗೆದುಹಾಕಲ್ಪಟ್ಟಿದ್ದವು. ಆಕ್ಷೇಪ ಅವಧಿಯಲ್ಲಿ 16.93 ಲಕ್ಷ ಜನರು ಸೇರಿಸಿಕೊಳ್ಳಲು ಅರ್ಜಿ ಸಲ್ಲಿಸಿದ್ದು, 2.17 ಲಕ್ಷ ಜನರು ತಮ್ಮ ಹೆಸರು ತೆಗೆದುಹಾಕಲು ಮನವಿ ಮಾಡಿದ್ದಾರೆ. ಕೇವಲ ಆಗಸ್ಟ್ 1ರಿಂದ ಸೆಪ್ಟೆಂಬರ್ 1ರೊಳಗೆ 16.56 ಲಕ್ಷ ಜನರು ಹೊಸ ನೋಂದಣಿಗೆ ಅರ್ಜಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಆಯೋಗದ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಮತದಾರರು ತಮ್ಮ ವಿವರಗಳನ್ನು ಆಯೋಗದ ಅಧಿಕೃತ ಜಾಲತಾಣದಲ್ಲಿ ಪರಿಶೀಲಿಸಬಹುದು ಎಂದು ತಿಳಿಸಿದ್ದಾರೆ. ನಿಯಮಾನುಸಾರ ನಾಮಪತ್ರ ಸಲ್ಲಿಕೆಯ ಅಂತಿಮ ದಿನಾಂಕಕ್ಕಿಂತ 10 ದಿನಗಳವರೆಗೆ ಹೊಸ ಹೆಸರುಗಳನ್ನು ಸೇರಿಸಿಕೊಳ್ಳಲು ಅವಕಾಶವಿದ್ದು, ಅಂತಹ ಹೆಸರುಗಳನ್ನು ಪೂರಕ ಪಟ್ಟಿಯಲ್ಲಿ ಸೇರಿಸಲಾಗುತ್ತದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

ಈ ಯೋಜನೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿದ್ದು, ಬಡವರು ಮತ್ತು ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಸಾಮೂಹಿಕವಾಗಿ ಮತದಾರರ ಹಕ್ಕು ಕಿತ್ತುಕೊಳ್ಳುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಆರ್‌ಜೆಡಿಯ ತೇಜಸ್ವಿ ಯಾದವ್ “ಮತದಾರ ಹಕ್ಕು ಯಾತ್ರೆ” ನಡೆಸಿ ಇದನ್ನು “ಮತ ಕಳ್ಳತನ” ಎಂದು ಕರೆದಿದ್ದಾರೆ.

ಪ್ರಕರಣ ಸುಪ್ರೀಂ ಕೋರ್ಟ್‌ಗೂ ತಲುಪಿದ್ದು, ಅಕ್ರಮಗಳು ಕಂಡುಬಂದರೆ ಮತದಾರರ ಪಟ್ಟಿಯನ್ನೇ ರದ್ದುಪಡಿಸಲು ಹಿಂಜರಿಯುವುದಿಲ್ಲ ಎಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ.

ಬಿಹಾರ ವಿಧಾನಸಭೆಯ ಅವಧಿ ನವೆಂಬರ್ 22ರಂದು ಮುಕ್ತಾಯವಾಗಲಿದ್ದು, ಅಂತಿಮ ಮತದಾರರ ಪಟ್ಟಿ ಹೊರಬಂದಿರುವ ಹಿನ್ನಲೆಯಲ್ಲಿ ಚುನಾವಣಾ ವೇಳಾಪಟ್ಟಿ ಅಕ್ಟೋಬರ್ 6 ಅಥವಾ 7ರಂದು ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...