ಪೆರಿಯಾರ್ ಸಂಘಟನೆ ವಿರುದ್ಧ ದಾಳಿ ಆರೋಪ: ಇಶಾ ಫೌಂಡೇಷನ್ ವಿರುದ್ಧ ಎಫ್ಐಆರ್

Date:

ತಂತೈ ಪೆರಿಯಾರ್‌ ದ್ರಾವಿಡ ಕಾಳಗಂ(ಟಿಪಿಡಿಕೆ) ಕಾರ್ಯಕರ್ತರ ಮೇಲೆ ಕೊಯಂಬತ್ತೂರು ಮೂಲದ ಜಗ್ಗಿ ವಾಸುದೇವ್‌ ಅವರ ಇಶಾ ಫೌಂಡೇಷನ್‌ ಕಾರ್ಯಕರ್ತರು ದಾಳಿ ನಡೆಸಿದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಕೊಯಂಬತ್ತೂರಿನ ಇಕ್ಕರೈ ಬೊಲುವಮ್‌ಪಟ್ಟಿ ಗ್ರಾಮದ ಸ್ಮಶಾನದಲ್ಲಿ ಅಕ್ರಮವಾಗಿ ನಿರ್ಮಾಣ ಕಾಮಗಾರಿ ನಿರ್ಮಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಟಿಪಿಡಿಕೆ ಕಾರ್ಯಕರ್ತರು ಭೇಟಿ ನೀಡಿದ ಸಂದರ್ಭದಲ್ಲಿ ಇಶಾ ಫೌಂಡೇಷನ್‌ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.

ದೂರಿನ ಆಧಾರದ ಮೇಲೆ ಇಶಾ ಯೋಗ ಸಂಸ್ಥೆ ಹಾಗೂ ಆದಿವಾಸಿ ಹಕ್ಕುಗಳ ಸಂಸ್ಥೆಯಾದ ವೆಲ್ಲನ್‌ಗಿರಿ ಕಣಿವೆ ಬುಡಕಟ್ಟು ಸಂರಕ್ಷಣ ಸಮಾಜದ ನಡುವೆಯಿರುವ 44.3 ಎಕರೆ ಭೂಮಿಯಲ್ಲಿ ವಿವಾದಿದ ಸ್ಮಶಾನದ ಭೂಮಿಯಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರಿಗೆ ದೂರು ನೀಡಿರುವ ಟಿಪಿಡಿಕೆಯ ಪ್ರಧಾನ ಕಾರ್ಯದರ್ಶಿ ಅವರ ಪ್ರಕಾರ, ಇಶಾ ಯೋಗ ಸಂಸ್ಥೆಯ ವ್ಯಕ್ತಿಗಳು ತಮ್ಮ ವಾಹನವನ್ನು ಅಡ್ಡಗಟ್ಟಿ ತಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವುದರ ಜೊತೆ ತಮ್ಮ ವಾಹನದ ಮೇಲೆ ದಾಳಿ ನಡೆಸಿದ್ದಾರೆ. ಅಲನ್‌ದೊರೈ ಪೊಲೀಸ್‌ ಠಾಣೆಯಲ್ಲಿ ಇಶಾ ಯೋಗ ಸಂಸ್ಥೆ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಳಪೆ ಫಲಿತಾಂಶಕ್ಕೆ ಸಿ ಎಂ ಸಿಟ್ಟಾದರೆ ಸಾಲದು, ಶಿಕ್ಷಣ ಇಲಾಖೆಗೆ ಬಿಸಿ ಮುಟ್ಟಿಸಬೇಕು

ಈ ನಡುವೆ ಇಶಾ ಯೋಗ ಕೇಂದ್ರ ಟಿಪಿಡೆಕೆ ಕಾರ್ಯಕರ್ತರ ಆರೋಪಗಳನ್ನು ನಿರಾಕರಿಸಿದ್ದು, ತಾವು ನಿರ್ಮಿಸುತ್ತಿರುವ ಪ್ರದೇಶದಲ್ಲಿ ಕೋರ್ಟ್ ಅಥವಾ ರಾಜ್ಯ ಸರ್ಕಾರದ ಅನುಮತಿ ಪಡೆದು ಆಗಮಿಸಿರಲಿಲ್ಲ. ಅಲ್ಲದೆ ತಾವು ಈ ಪ್ರದೇಶಕ್ಕೆ ಕಾರ್ಯಕರ್ತರು ಆಗಮಿಸದಂತೆ ಕೋರ್ಟ್‌ನಿಂದ ಮಧ್ಯಂತರ ತಡೆ ತಂದಿರುವುದಾಗಿ ತಿಳಿಸಿದೆ.

ಇಶಾ ಯೋಗ ಸಂಸ್ಥೆ ಆದಿವಾಸಿಗಳ ಭೂಮಿಯನ್ನು ಅತಿಕ್ರಮಿಸಿ ಹಲವು ಕಟ್ಟಡಗಳನ್ನು ನಿರ್ಮಿಸಿದೆ ಎಂದು ವೆಲ್ಲನ್‌ಗಿರಿ ಕಣಿವೆ ಬುಡಕಟ್ಟು ಸಂರಕ್ಷಣ ಸಮಾಜ 2016ರಲ್ಲಿ ಮದ್ರಾಸ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇಕ್ಕರೈ ಬೊಲುವಮ್‌ಪಟ್ಟಿ ಗ್ರಾಮದಲ್ಲಿ 150 ಎಕರೆ ಕ್ಯಾಂಪಸ್‌ಅನ್ನು ಕೂಡ ನಿರ್ಮಿಸಿದ್ದು, ಇದಕ್ಕೆ ಜಿಲ್ಲಾಡಳಿತ, ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅನುಮತಿ ಪಡೆದಿಲ್ಲ ಎಂದು ಆರೋಪಿಸಿದೆ.

ಅಲ್ಲದೆ ಇಶಾ ಸಂಸ್ಥೆಯ ಕ್ಯಾಂಪಸ್‌ ಈ ಪ್ರದೇಶವು ಆನೆಗಳು ವಾಸಿಸುವ ನೀಲಗಿರಿ ಜೈವಿಕ ಮೀಸಲು ಪ್ರದೇಶದಲ್ಲಿದೆ. 2016ರಿಂದಲೂ ವೆಲ್ಲನ್‌ಗಿರಿ ಕಣಿವೆ ಬುಡಕಟ್ಟು ಸಂರಕ್ಷಣ ಸಮಾಜ ಇಶಾ ಸಂಸ್ಥೆಯ ಅಕ್ರಮಗಳ ಬಗ್ಗೆ ಹೋರಾಟ ನಡೆಸುತ್ತಿದೆ. ಈ ನಡುವೆ ಮದ್ರಾಸ್‌ ಹೈಕೋರ್ಟ್ 2013 ಇಶಾ ಸಂಸ್ಥೆಯ ಭೂಖರೀದಿ ದಾಖಲೆಗಳನ್ನು ಪರಿಶೀಲಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...