ಗೆಹ್ಲೋಟ್‌ ರಾವಣ ಹೋಲಿಕೆ; ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪ್ರಕರಣ

Date:

  • ಸಚಿವ ಗಜೇಂದ್ರ ಸಿಂಗ್‌ ವಿರುದ್ದ ಚಿತ್ತೋರ್‌ಗಢದಲ್ಲಿ ಪ್ರಕರಣ ದಾಖಲು
  • ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ರಾವಣನೆಂದು ಟೀಕಿಸಿದ ಸಚಿವ

ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರನ್ನು ರಾವಣನಿಗೆ ಹೋಲಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪೊಲೀಸರು ಭಾನುವಾರ (ಏಪ್ರಿಲ್‌ 30) ಪ್ರಕರಣ ದಾಖಲಿಸಿದ್ದಾರೆ.

ಕಾಂಗ್ರೆಸ್‌ ಮುಖಂಡ ಮತ್ತು ಶಾಸಕ ಸುರೇಂದ್ರ ಸಿಂಗ್‌ ಅವರು ನೀಡಿದ ದೂರಿನ ಆಧಾರದಲ್ಲಿ ರಾಜಸ್ಥಾನದ ಪೊಲೀಸರು ಗಜೇಂದ್ರ ಅವರ ವಿರುದ್ಧ ಚಿತ್ತೋಗಢ ಜಿಲ್ಲೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ಗಜೇಂದ್ರ ಶೇಖಾವತ್‌ ಅವರು ರಾಜಸ್ಥಾನ ರಾಜಕೀಯ ಹದಗೆಟ್ಟಿದೆ. ಇಲ್ಲಿಯದು ರಾವಣನ ರಾಜಕೀಯ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುರೇಂದ್ರ ಸಿಂಗ್‌ ಅವರು ರಾಜಸ್ಥಾನ ಪರಂಪರೆ ಸಂರಕ್ಷಣೆ ಮತ್ತು ಉತ್ತೇಜನ ಪ್ರಾಧಿಕಾರದ ಅಧ್ಯಕ್ಷರು. “ಗೇಜೇಂದ್ರ ಅವರ ಹೇಳಿಕೆಯಿಂದ ನನ್ನ ಮನಸ್ಸಿಗೆ ಘಾಸಿಯಾಗಿದೆ” ಎಂದು ದೂರಿನಲ್ಲಿ ಹೇಳಿದ್ದಾರೆ.

ಚಿತ್ತೋರ್‌ಗಢದಲ್ಲಿ ಏಪ್ರಿಲ್‌ 27ರಂದು ಬಿಜೆಪಿಯ ‘ಜನ ಆಕ್ರೋಶ’ ಸಮಾರಂಭದಲ್ಲಿ ಮಾತನಾಡಿದ್ದ ಗಜೇಂದ್ರ ಅವರು, “ರಾಜಸ್ಥಾನದಲ್ಲಿ ಅಶೋಕ್‌ ಗೆಹ್ಲೋಟ್‌ ಅವರು ರಾವಣನ ರಾಜಕೀಯ ಮಾಡುತ್ತಿದ್ದಾರೆ. ನೀವು ರಾಮರಾಜ್ಯವಾಗಿ ಮಾಡಬೇಕು” ಎಂದು ಹೇಳಿದ್ದರು.

ಗಜೇಂದ್ರ ಅವರ ಹೇಳಿಕೆ ಖಂಡಿಸಿ ಅವರ ವಿರುದ್ಧ ಕಾಂಗ್ರೆಸ್‌ ನಾಯಕ ಸುರೇಂದ್ರ ಸಿಂಗ್‌ ದೂರು ನೀಡಿದ್ದರು. “ಮುಖ್ಯಮಂತ್ರಿ ವಿರುದ್ಧ ಇಂತಹ ಅವಹೇಳನಕಾರಿ ಭಾಷೆ ಬಳಸಿದ ಗಜೇಂದ್ರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ. ಅವರು ಸಮಾವೇಶದಲ್ಲಿ ಮಾತನಾಡುವಾಗ ಧಾರ್ಮಿಕ ಭಾವನೆ ಕೆರಳಿಸುವ ಪ್ರಯತ್ನ ಮಾಡಿದ್ದಾರೆ” ಎಂದು ಸುರೇಂದ್ರ ಸಿಂಗ್‌ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ವಿರುದ್ಧ ಮೋದಿ ಸರ್‌ನೇಮ್ ಪ್ರಕರಣ; ವಿಚಾರಣೆ ಮೇ 2ಕ್ಕೆ ಮುಂದೂಡಿಕೆ

ಗಜೇಂದ್ರ ಅವರು ಜೋಧಪುರದಲ್ಲಿ ಬಿಜೆಪಿ ಸಂಸದರು. ಈ ಹಿಂದೆ ಅಶೋಕ್ ಗೆಹ್ಲೋಟ್ ಈ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿದ್ದರು. 2019ರ ಲೋಕಸಭೆ ಚುನಾವಣೆ ವೇಳೆ ಗೆಹ್ಲೋಟ್ ಅವರ ಪುತ್ರ ವೈಭವ್ ವಿರುದ್ಧ ಜಯಿಸಿ ಎರಡನೇ ಅವಧಿಗೆ ಸಂಸದರಾಗಿದ್ದಾರೆ.

ಗಜೇಂದ್ರ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನು ಬಾಹಿರ ಸಭೆ), 500 (ಮಾನಹಾನಿ) ಸೇರಿದಂತೆ ನಾನಾ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...