ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ; ಯುಪಿ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್

Date:

ಕೆಲಸ ಕೊಡಿಸುವ ನೆಪದಲ್ಲಿ ಕರೆಸಿ ಗನ್ ತೋರಿಸಿ ದೆಹಲಿಯ ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕನ ವಿರುದ್ಧ ಬಿಎನ್‌ಎಸ್‌ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಹೈವೇ ಪೊಲೀಸ್ ಠಾಣೆಯ ಎಸ್‌ಎಚ್‌ಒ ಆನಂದ್ ಕುಮಾರ್, “ಆರೋಪಿಯ ವಿರುದ್ಧ ಬಿಎನ್‌ಎಸ್ ಸೆಕ್ಷನ್ 64 (1) (ಅತ್ಯಾಚಾರ) ಮತ್ತು 351 (3) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಹಿಳೆಯರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುತ್ತದೆ. ಹೇಳಿಕೆ ದಾಖಲಿಸಿ ತನಿಖೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದೇವಸ್ಥಾನದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಹರಿಬಿಟ್ಟ ವಿಕೃತ ಕಾಮಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಯ ಕಿಸಾನ್ ಮೋರ್ಚಾದ ಮಾಜಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಮತ್ತು ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾದ ನಾಯಕರಾಗಿರುವ ಆರೋಪಿಯು ತನ್ನ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. “ನನ್ನ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳು ಆಧಾರರಹಿತ ಮತ್ತು ನನ್ನ ಪ್ರತಿಷ್ಠೆಗೆ ಕಳಂಕ ತರುವ ಪ್ರಯತ್ನವಾಗಿದೆ” ಎಂದಿದ್ದಾರೆ.

ದೆಹಲಿಯಲ್ಲಿ ನೆಲೆಸಿರುವ ಸಂತ್ರಸ್ತೆ ತನ್ನ ದೂರಿನಲ್ಲಿ ತನಗೆ ಬಿಜೆಪಿ ಮುಖಂಡ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದು, ನಾಲ್ಕು ವರ್ಷದಿಂದ ಇಬ್ಬರು ಆನ್‌ಲೈನ್ ಮೂಲಕವೇ ಸಂಪರ್ಕ ಹೊಂದಿದ್ದರು ಎಂದು ತಿಳಿಸಿದ್ದಾರೆ.

“ಆರೋಪಿಯು ಎನ್‌ಜಿಒ ನಡೆಸುತ್ತಿದ್ದಾನೆ. ಸೆಪ್ಟಂಬರ್‌ನಲ್ಲಿ ನಾವು ಎನ್‌ಜಿಒ ಸಂಬಂಧಿತ ವಿಚಾರದಲ್ಲಿ ಸಂಪರ್ಕಿಸಿದ್ದೆವು. ಸೆಪ್ಟೆಂಬರ್ 14ರಂದು ಉದ್ಯೋಗ ನೀಡುವ ನೆಪದಲ್ಲಿ ನನ್ನನ್ನು ಮಥುರಾಗೆ ಕರೆದನು. ನಾನು ನನ್ನ ಸ್ನೇಹಿತನೊಂದಿಗೆ ನರಹೌಲಿ ಪ್ರದೇಶ ತಲುಪಿದೆ. ಅಲ್ಲಿಂದ ಆರೋಪಿ ಮತ್ತು ಆತನ ಸಹಚರರು ನಮ್ಮನ್ನು ಕರೆದೊಯ್ದರು” ಎಂದು ದೂರುದಾರೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವಿದ್ಯಾರ್ಥಿನಿ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತನೂ ಸೇರಿ 6 ಮಂದಿ ಕಾಮುಕರ ಬಂಧನ

“ಅಲ್ಲಿ ಕೋಣೆಯೊಂದಕ್ಕೆ ಕರೆದೊಯ್ದು ಗನ್ ತೋರಿಸಿ ಅತ್ಯಾಚಾರ ಮಾಡಿದ್ದಾರೆ ಮತ್ತು ಮುಂದಿನ ಬಾರಿ ಸ್ನೇಹಿತನೊಂದಿಗೆ ಬರದೆ ಒಬ್ಬಳೇ ಬರಬೇಕು ಎಂದು ಸೂಚಿಸಿದ್ದಾರೆ” ಎಂದಿದ್ದಾರೆ.

ಇನ್ನು ಈ ಘಟನೆ ನಡೆದ ಮರುದಿನವೇ ಸಂತ್ರಸ್ತೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಆರೋಪಿಗೆ ಹೆಚ್ಚು ಪ್ರಭಾವ ಇರುವ ಕಾರಣ ಪೊಲೀಸರು ದೂರನ್ನು ನಿರ್ಲಕ್ಷಿಸಿದ್ದಾರೆ ಎಂದು ಮಹಿಳೆ ದೂರಿದ್ದಾರೆ. ಇದಾದ ಬಳಿಕ ನಿರಂತರವಾಗಿ ಮಹಿಳೆ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಕೊನೆಗೆ ಈ ಅಪರಾಧ ನಡೆದ ಮೂರು ತಿಂಗಳ ಬಳಿಕ ಶುಕ್ರವಾರ ಮಥುರಾದ ಹೆದ್ದಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ನ ಆದೇಶದಂತೆ ಆಕೆಯ ಗೌಪ್ಯತೆಯನ್ನು ರಕ್ಷಿಸಲು ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಲಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...