ಆಂಧ್ರ ಪ್ರದೇಶ | ರೈಲಿನಲ್ಲಿ ಬೆಂಕಿ; ಓರ್ವ ಪ್ರಯಾಣಿಕ ಸಾವು, 3 ಬೋಗಿಗಳು ಭಸ್ಮ

Date:

ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ದುವ್ವಾಡ ಮೂಲಕ ಹಾದುಹೋಗುತ್ತಿದ್ದ ಟಾಟಾ ನಗರ–ಎರ್ನಾಕುಲಂ (18189) ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಸೋಮವಾರ ಬೆಳಗಿನ ಜಾವ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಈ ದುರಂತದಲ್ಲಿ ಒಬ್ಬ ಪ್ರಯಾಣಿಕ ಮೃತಪಟ್ಟಿದ್ದಾರೆ.

ಮೃತರನ್ನು ವಿಜಯವಾಡ ನಿವಾಸಿ ಚಂದ್ರಶೇಖರ್ ಸುಂದರ್ (70) ಎಂದು ಗುರುತಿಸಲಾಗಿದೆ. ಅವರು ಬಿ1 ಎಸಿ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬೆಳಗಿನ ಜಾವ 1.30ರ ಸುಮಾರಿಗೆ ಪ್ಯಾಂಟ್ರಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಅದು ಪಕ್ಕದ ಬಿ1 ಹಾಗೂ ಎಂ2 ಎಸಿ ಬೋಗಿಗಳಿಗೆ ವೇಗವಾಗಿ ಹರಡಿತು. ಎಲಮಂಚಿಲಿ ಸಮೀಪ ಹೊಗೆ ಕಂಡುಬಂದ ತಕ್ಷಣ ಲೋಕೋ ಪೈಲಟ್‌ ಗಳು ರೈಲನ್ನು ಹತ್ತಿರದ ನಿಲ್ದಾಣದಲ್ಲಿ ನಿಲ್ಲಿಸಿದರೂ, ಅಗ್ನಿಶಾಮಕ ದಳ ಆಗಮಿಸುವಷ್ಟರಲ್ಲಿ ಎರಡು ಬೋಗಿಗಳು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದ್ದವು.

ಘಟನೆಯಿಂದ ರೈಲಿನಲ್ಲಿದ್ದ ಪ್ರಯಾಣಿಕರು ಆತಂಕಿತರಾದರು. ದಟ್ಟವಾದ ಹೊಗೆ ಆವರಿಸುತ್ತಿದ್ದಂತೆ ನಿದ್ದೆಯಲ್ಲಿದ್ದ, ಭಯಭೀತರಾದ ಪ್ರಯಾಣಿಕರು ತಮ್ಮ ಬೋಗಿಗಳಿಂದ ಹೊರಬಂದು ಪ್ಲಾಟ್‌ಫಾರ್ಮ್‌ಗೆ ಧಾವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈಲು ಅನಕಪಲ್ಲಿಗೆ ಸುಮಾರು ನಾಲ್ಕು ಗಂಟೆಗಳ ತಡವಾಗಿ ತಲುಪಿತು. ನಂತರ ನರಸಿಂಗಬಳ್ಳಿ ಬಳಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಬಿ1 ಬೋಗಿಯಲ್ಲಿ ಬ್ರೇಕ್ ಜಾಮ್ ಆಗಿರುವುದೇ ಬೆಂಕಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಈ ದಿನ ಸಂಪಾದಕೀಯ | SIR – ಬಿಜೆಪಿಗಾಗಿ ಚುನಾವಣಾ ಆಯೋಗ ನಡೆಸುತ್ತಿರುವ ರಕ್ತರಹಿತ ನರಮೇಧ

ಎಲಮಂಚಿಲಿ ಹಾಗೂ ನಕ್ಕಪಲ್ಲಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ನಂದಿಸಿದರು. ಸುಟ್ಟುಹೋದ ಬೋಗಿಗಳಲ್ಲಿದ್ದ ಎಲ್ಲ ವಸ್ತುಗಳು ಸಂಪೂರ್ಣವಾಗಿ ನಾಶವಾಗಿವೆ. ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು.

ಚಳಿಗಾಲದ ತೀವ್ರ ಚಳಿ ನಡುವೆಯೇ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ಸುಮಾರು 2,000 ಪ್ರಯಾಣಿಕರು ನಿಲ್ದಾಣದಲ್ಲೇ ಸಿಲುಕಿಕೊಂಡರು. ಘಟನೆಯಿಂದ ವಿಶಾಖಪಟ್ಟಣ–ವಿಜಯವಾಡ ಮಾರ್ಗದಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಬೆಳಗಿನ ಜಾವ 3.30ರ ಸುಮಾರಿಗೆ ಸುಟ್ಟುಹೋದ ಬೋಗಿಗಳನ್ನು ಬೇರ್ಪಡಿಸಿ, ಉಳಿದ ಬೋಗಿಗಳಲ್ಲಿ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸಿ ರೈಲನ್ನು ಮುಂದುವರಿಸಲು ಅಧಿಕಾರಿಗಳು ಅನುಮತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...