ಉತ್ತರ ಪ್ರದೇಶ | ಹಾಡಹಗಲೇ ನಡುರಸ್ತೆಯಲ್ಲೇ ಗುಂಪುಗಳ ನಡುವೆ ಗುಂಡಿನ ಕಾಳಗ; ವಿಡಿಯೋ ವೈರಲ್

Date:

ಬಿಜೆಪಿಯ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹಾಳಾಗುತ್ತಿದ್ದು, ಜಮೀನು ವಿವಾದವೊಂದರ ಸಂಬಂಧ ಹಾಡಹಗಲೇ ನಡುರಸ್ತೆಯಲ್ಲೇ ಗುಂಪುಗಳ ನಡುವೆ ಗುಂಡಿನ ಕಾಳಗ ಘಟನೆ ನಡೆದಿದೆ. ಸದ್ಯ ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಉತ್ತರ ಪ್ರದೇಶದ ಬರೇಲಿಯ ಇಜ್ಜತ್‌ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೆಲವರನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಬರೇಲಿಯ ಇಜ್ಜತ್‌ನಗರ ಪ್ರದೇಶದಲ್ಲಿ ಜಮೀನೊಂದನ್ನು ವಶಪಡಿಸಿಕೊಳ್ಳುವ ಕುರಿತು ಗಲಾಟೆ ನಡೆದಿದೆ. ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಪಿಲಿಭಿತ್ ಬೈಪಾಸ್‌ನಲ್ಲಿ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲದೇ, ಸ್ಥಳದಲ್ಲಿದ್ದ ಎರಡು ಬುಲ್ಡೋಝರ್‌ಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 30 ನಿಮಿಷಗಳ ಕಾಲ ರಸ್ತೆಯಲ್ಲಿ ಗುಂಡಿನ ಕಾಳಗ ನಡೆದಿತ್ತು, ಈ ಸಂಬಂಧ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಪೊಲೀಸರು ಬರುವುದನ್ನು ಅರಿತ ಗುಂಡಿನ ಕಾಳಗದಲ್ಲಿ ನಿರತರಾಗಿದ್ದವರ ಪೈಕಿ ಕೆಲವರು ಪರಾರಿಯಾಗಿದ್ದಾರೆ. ಎರಡು ಗುಂಪಿನ ಪೈಕಿ ಒಂದು ಗುಂಪಿನ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

UP SHOOTOUT

 

ಘಟನೆಯ ಹಲವು ವೀಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ಸಿನಿಮಾ ಶೈಲಿಯಲ್ಲಿ ನಡುರಸ್ತೆಯಲ್ಲೇ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ. ಅದೃಷ್ಟವಶಾತ್ ಯಾವುದೇ ಸಾರ್ವಜನಿಕರಿಗೆ ಗಾಯವಾಗಿಲ್ಲ ಎಂದು ವರದಿಯಾಗಿದೆ.

“ಜಮೀನು ವಿವಾದಕ್ಕೆ ಸಂಬಂಧಿಸಿ ಆದಿತ್ಯ ಉಪಾಧ್ಯಾಯ ಮತ್ತು ರಾಜೀವ್ ರಾಣಾ ಎಂಬ ಎರಡು ಗುಂಪುಗಳ ನಡುವೆ ಪರಸ್ಪರ ಗುಂಡಿನ ಚಕಮಕಿ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಇಜ್ಜತ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ. ಘಟನೆಯ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಜಯ್ ಮತ್ತು ರೋಹಿತ್ ಎಂಬ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ಇತರ ಆರೋಪಿಗಳನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿ ಅನಿತಾ ಚೌಹಾಣ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...