ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಯಾದವ್ ನಿವಾಸದ ಹೊರಗೆ ಗುಂಡಿನ ದಾಳಿ

Date:

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌ ಅವರ ಗುರುಗ್ರಾಮದಲ್ಲಿರುವ ನಿವಾಸದ ಹೊರಗೆ ಅಪರಿಚಿತರು ಭಾನುವಾರ ಮುಂಜಾನೆ ಗುಂಡು ಹಾರಿಸಿದ್ದಾರೆ. ಗುಂಡುಗಳು ಮನೆಯ ಹೊರಗೆ ಭೂಮಿಗೆ ಮತ್ತು ಮೊದಲ ಮಹಡಿಗೆ ತಗುಲಿವೆ.

ಬೆಳಿಗ್ಗೆ ಸುಮಾರು 5.30ರಿಂದ 6 ಗಂಟೆಯ ನಡುವೆ ಗುಂಡಿನ ದಾಳಿ ನಡೆದಿದೆ. ಬೈಕ್‌ನಲ್ಲಿ ಬಂದ ಮೂವರು ಸೆಕ್ಟರ್ 57ರಲ್ಲಿರುವ ಯಾದವ್ ಅವರ ಮನೆಯ ಮೇಲೆ 25ಕ್ಕೂ ಅಧಿಕ ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಹಾವಿನ ವಿಷ ಪ್ರಕರಣ | ಬಲಪಂಥೀಯ ಯೂಟ್ಯೂಬರ್ ಎಲ್ವಿಶ್ ಯಾದವ್ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ಮತ್ತು ಮೂರನೇ ಮಹಡಿಯಲ್ಲಿ ವಾಸಿಸುವ ಯಾದವ್ ಆ ಸಮಯದಲ್ಲಿ ಮನೆಯಲ್ಲಿ ಇರಲಿಲ್ಲ. ದಾಳಿ ನಡೆದಾಗ ಅವರ ಕೆಲವು ಕುಟುಂಬ ಸದಸ್ಯರು ಒಳಗೆ ಇದ್ದರು. ಯಾರಿಗೂ ಗಾಯಗಳಾಗಿಲ್ಲ. ಎಲ್ವಿಶ್‌ ಪ್ರಸ್ತುತ ಹರಿಯಾಣದ ಹೊರಗಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಗುರುಗ್ರಾಮ ಪೊಲೀಸ್ ಅಧಿಕಾರಿ ಸಂದೀಪ್ ಕುಮಾರ್, “ಗುರುಗ್ರಾಮದ ಸೆಕ್ಟರ್ 57ರಲ್ಲಿರುವ ಯೂಟ್ಯೂಬರ್ ಮತ್ತು ಬಿಗ್ ಬಾಸ್ ಒಟಿಟಿ ವಿಜೇತ ಎಲ್ವಿಶ್ ಯಾದವ್ ಅವರ ನಿವಾಸ ಹೊರಗೆ ಮೂವರು ಮುಸುಕುಧಾರಿ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಬೆಳಿಗ್ಗೆ 5:30 ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಡಜನ್‌ಗೂ(12ಕ್ಕೂ ಅಧಿಕ) ಹೆಚ್ಚು ಸುತ್ತು ಗುಂಡು ಹಾರಿಸಲಾಗಿದೆ. ಈ ವೇಳೆ ಎಲ್ವಿಶ್ ಯಾದವ್ ಮನೆಯಲ್ಲಿ ಇರಲಿಲ್ಲ” ಎಂದು ತಿಳಿಸಿದ್ದಾರೆ.

ಸದ್ಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ಆರಂಭಿಸಿದ್ದಾರೆ. ಕುಟುಂಬದಿಂದ ಔಪಚಾರಿಕ ದೂರು ದಾಖಲಾದ ನಂತರ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು “ಘಟನೆಗೂ ಮುನ್ನ ಎಲ್ವಿಶ್‌ಗೆ ಯಾವುದೇ ಬೆದರಿಕೆಗಳು ಬಂದಿಲ್ಲ. ನಾವು ಮಲಗಿದ್ದಾಗ ದಾಳಿಕೋರರು ಬೈಕ್‌ನಲ್ಲಿ ಬಂದು ಗುಂಡು ಹಾರಿಸಲು ಪ್ರಾರಂಭಿಸಿದರು. ಮೂವರು ಮುಸುಕುಧಾರಿಗಳು ಇದ್ದರು. ಒಬ್ಬರು ಬೈಕ್‌ನಲ್ಲಿ ಕುಳಿತಿದ್ದರು. ಉಳಿದ ಇಬ್ಬರು ಕೆಳಗೆ ಇಳಿದು ಮನೆಯ ಮೇಲೆ ಗುಂಡು ಹಾರಿಸಿದರು. ಅವರು ಸುಮಾರು 25 ರಿಂದ 30 ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಪ್ರಸ್ತುತ ಎಲ್ವಿಶ್ ಕೆಲಸದ ನಿಮಿತ್ತ ನಗರದಿಂದ ಹೊರಗಿದ್ದಾನೆ” ಎಂದು ತಂದೆ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ರೇವ್ ಪಾರ್ಟಿಗಾಗಿ ಹಾವಿನ ವಿಷ: ಬಲಪಂಥೀಯ ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಎಫ್‌ಐಆರ್

ವಿದೇಶಿಯರನ್ನು ಆಹ್ವಾನಿಸಿ, ವಿಷಕಾರಿ ಹಾವುಗಳ ವಿಷವನ್ನು ಬಳಸಿಕೊಂಡು ರೇವ್ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಆರೋಪದಲ್ಲಿ ಬಿಗ್‌ಬಾಸ್ ಸ್ಪರ್ಧಿ, ಯೂಟ್ಯೂಬರ್ ಎಲ್ವಿಶ್ ಯಾದವ್‌ ಅವರನ್ನು ನೋಯ್ಡಾ ಪೊಲೀಸರು ಕಳೆದ ವರ್ಷ ಮಾರ್ಚ್‌ನಲ್ಲಿ ಬಂಧಿಸಿದ್ದರು. ಸದ್ಯ ಎಲ್ವಿಶ್ ಜಾಮೀನು ಮೇಲೆ ಹೊರಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.

2023ರ ನವೆಂಬರ್‌ ತಿಂಗಳಲ್ಲಿ ನೋಯ್ಡಾದಲ್ಲಿ ಆಯೋಜನೆಗೊಂಡಿದ್ದ ರೇವ್ ಪಾರ್ಟಿಗೆ ದಾಳಿ ನಡೆಸಿ ನೋಯ್ಡಾ ಪೊಲೀಸರು ಐವರನ್ನು ಬಂಧಿಸಿದ್ದರು. ಈ ವೇಳೆ ಐದು ನಾಗರ ಹಾವು ಸೇರಿ ಒಟ್ಟಾಗಿ ಒಂಬತ್ತು ಹಾವುಗಳನ್ನು ಮತ್ತು ಹಾವಿನ ವಿಷವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಅದು ಮಾತ್ರವಲ್ಲದೆ ಎಲ್ವಿಶ್ ಯಾದವ್ ಮತ್ತು ಅವರ ಸಹಚರರು ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...