ಸರ್ಕಾರಿ ಅಧಿಕಾರಿಯ ಮೇಲೆ ಮೀನು ಎಸೆದ ಪ್ರಕರಣ: ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಖುಲಾಸೆ

Date:

ಸರ್ಕಾರಿ ಅಧಿಕಾರಿಯ ಮೇಲೆ ಮೀನು ಎಸೆದ ಮತ್ತು ಅವರನ್ನು ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಿಜೆಪಿ ಸಚಿವ ನಿತೇಶ್ ರಾಣೆ ಮತ್ತು ಇತರ 30 ಜನರನ್ನು ಮಹಾರಾಷ್ಟ್ರದ ಸಿಂಧುದುರ್ಗದ ನ್ಯಾಯಾಲಯವು ಖುಲಾಸೆಗೊಳಿಸಿದೆ.

2017ರ ಜುಲೈ 6ರಂದು ರಾಣೆ ಮತ್ತು ಸುಮಾರು 100 ಇತರರು ಮೀನುಗಾರಿಕೆ ಇಲಾಖೆಯ ಸಹಾಯಕ ಆಯುಕ್ತ ಪ್ರದೀಪ್ ವಾಸ್ಟ್ ಅವರ ಮಾಲ್ವನ್ ಕಚೇರಿಗೆ ವಲಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಲೆಂದು ಬಂದಿದ್ದರು. ಈ ವೇಳೆ ಅವರನ್ನು ನಿಂದಿಸಿ, ಅವರ ಮೇಲೆ ಮೀನು ಎಸೆದಿದ್ದರು. ಮೀನುಗಾರಿಕೆ ದೋಣಿಗಳನ್ನು ಸುಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದೂ ಆರೋಪಿಸಲಾಗಿದೆ. ಈ ಸಂಬಂಧ ರಾಣೆ ಮತ್ತು ಇತರೆ ಮೂವತ್ತು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿದ್ದೀರಾ? ಮೀನು ತಿಂದರೆ ನಿಮ್ಮ ಕಣ್ಣು ಐಶ್ವರ್ಯ ರೈ ತರಹ ಆಗುತ್ತದೆ: ಮಹಾರಾಷ್ಟ್ರ ಬಿಜೆಪಿ ಮಂತ್ರಿಯ ವಿವಾದಾತ್ಮಕ ಹೇಳಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಮೇ 21ರಂದು ನೀಡಿದ ತೀರ್ಪಿನ ವಿವರವನ್ನು ಭಾನುವಾರ ನೀಡಲಾಗಿದೆ. ಅಧಿಕಾರಿ ಪ್ರದೀಪ್ ವಾಸ್ಟ್ ಅವರು ತಮ್ಮ ಮೇಲೆ ರಾಣೆ ಅವರು ಮೀನು ಎಸೆದಿದ್ದಾರೆ ಎಂದು ತಮ್ಮ ಸಾಕ್ಷ್ಯದಲ್ಲಿ ತಿಳಿಸಿಲ್ಲ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು(ಸಿಂಧುದುರ್ಗ) ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರದೀಪ್ ವಾಸ್ಟ್ ಅವರು ಒದಗಿಸಿದ ಸಾಕ್ಷ್ಯದ ಪ್ರಕಾರ ರಾಣೆ ಜೊತೆಗಿದ್ದ ವ್ಯಕ್ತಿಗಳು ಅಧಿಕಾರಿಯ ಮೇಲೆ ಮೀನು ಎಸೆದಿದ್ದಾರೆ. ಆದರೆ ಯಾರು ಎಸೆದಿರುವುದು, ಯಾರು ನೋವುಂಟುಮಾಡಿದ್ದು ಎಂಬುದು ಖಚಿತವಾಗಿಲ್ಲ. ಯಾವುದೇ ವಿಶ್ವಾಸಾರ್ಹ ಪುರಾವೆಗಳು ದಾಖಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಆಪಾದಿತ ಘಟನೆಯ ವೀಡಿಯೊ ಕ್ಲಿಪ್ ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾದ ನಂತರ ರಾಣೆ ಮತ್ತು ಇತರರನ್ನು ಬಂಧಿಸಲಾಗಿದ್ದು, ಅದೇ ದಿನ ಅವರಿಗೆ ಜಾಮೀನು ಸಿಕ್ಕಿದೆ.

2014ರಿಂದ ಸಿಂಧುದುರ್ಗ ಜಿಲ್ಲೆಯ ಕಂಕವಲಿಯಲ್ಲಿ ಶಾಸಕರಾಗಿರುವ ರಾಣೆ ಅವರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೊದಲ ಬಾರಿಗೆ ಸಚಿವರನ್ನಾಗಿ ದೇವೇಂದ್ರ ಫಡ್ನವೀಸ್ ಅವರ ಸಂಪುಟಕ್ಕೆ ಸೇರಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...