ಒಡಿಶಾ | ಅಲೆಮಾರಿ ಕುಟುಂಬದ ಐವರ ಬರ್ಬರ ಹತ್ಯೆ; ಐವರ ಅಪಹರಣ

Date:

ಎದುರಾಳಿ ಗುಂಪೊಂದು ಅಲೆಮಾರಿ ಕುಟುಂಬದ ಮೂವರು ಮಹಿಳೆಯರು ಸೇರಿದಂತೆ ಐವರನ್ನು ಬರ್ಬರವಾಗಿ ಹತ್ಯೆ ಮಾಡಿ, ಮತ್ತೆ ಐದು ಮಂದಿಯನ್ನು ಅಪಹರಣ ಮಾಡಿರುವ ಘಟನೆ ಮಂಗಳವಾರ ರಾತ್ರಿ ಒಡಿಶಾದ ಸುಂದರ್‌ಗಢ ಜಿಲ್ಲೆಯ ಸದರ್ ಪೊಲೀಸ್ ವ್ಯಾಪ್ತಿಯ ಕರಮ್‌ಡಿಹಿ ಗ್ರಾಮದ ಬಳಿ ನಡೆದಿದೆ.

ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ನಾಲ್ವರು ಮಕ್ಕಳು ಮತ್ತು ಓರ್ವ ಮಹಿಳೆಯನ್ನು ಅಪಹರಣ ಮಾಡಲಾಗಿದೆ. ಇತರ ನಾಲ್ಕು ಮಕ್ಕಳಿಗೆ ಮತ್ತು ಕುಟುಂಬದ ನಾಲ್ವವರು ಪುರುಷರಿಗೆ ಗಾಯವಾಗಿದೆ. ಎದುರಾಳಿ ತಂಡ ದಾಳಿ ನಡೆಸಿದ ವೇಳೆ ಅಲೆಮಾರಿ ಕುಟುಂಬ ತಂಗಿದ್ದ ಟೆಂಟ್‌ನಲ್ಲಿ ಸುಮಾರು 20 ಮಂದಿ ಇದ್ದರು ಎಂದು ವರದಿಯಾಗಿದೆ.

ಸದ್ಯ ಪೊಲೀಸರು ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಹಾಗೆಯೇ ಅಪಹರಣಕ್ಕೊಳಗಾದವರ ರಕ್ಷಣೆಗೆ ಭಾರೀ ಶೋಧ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬೀದರ್ | ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ; ಮೂಲಸೌಕರ್ಯ ಒದಗಿಸಲು ಅಲೆಮಾರಿಗಳ ಆಗ್ರಹ

ಘಟನೆಯ ಸ್ವಲ್ಪ ಸಮಯದ ನಂತರ ಪೊಲೀಸ್ ಡಿಐಜಿ (ಪಶ್ಚಿಮ ಶ್ರೇಣಿ) ಬಿರ್ಜೇಶ್ ಕುಮಾರ್ ರೈ ಮತ್ತು ಸುಂದರ್‌ಗಢ ಎಸ್‌ಪಿ ಪ್ರತ್ಯೂಷ್ ದಿವಾಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಹಾಗೆಯೇ ಬುಧವಾರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಗಾಯಾಳುಗಳಲ್ಲಿ ಒಬ್ಬರಾದ ಅವಿನಾಶ್ ಪವಾರ್ ನೀಡಿದ ದೂರಿನ ಪ್ರಕಾರ ರಾತ್ರಿ ಎಲ್ಲರು ನಿದ್ರಿಸುತ್ತಿದ್ದಾಗ ದಾಳಿ ನಡೆದಿದೆ. ವಿವಾಹೇತರ ಸಂಬಂಧವೇ ಈ ದಾಳಿಗೆ ಕಾರಣ ಎಂದು ಪವಾರ್ ಪೊಲೀಸರಿಗೆ ತಿಳಿಸಿದ್ದಾರೆ. ಹಾಗೆಯೇ ಈ ಅಪರಾಧದಲ್ಲಿ ತಮ್ಮ ಸೋದರ ಮಾವ ಭಾಗಿಯಾಗಿರುವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

ಅವಿನಾಶ್ ಪವಾರ್ ಅವರ ಎರಡನೇ ಪತ್ನಿ, ಇಬ್ಬರು ಮಕ್ಕಳು ಮತ್ತು ಕುಟುಂಬದ ಇನ್ನಿಬ್ಬರು ಮಕ್ಕಳ ಅಪಹರಣ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...