ಒಡಿಶಾ ಪ್ರವಾಹ | 100 ಗ್ರಾಮಗಳ ಮೇಲೆ ಪ್ರಭಾವ: ರಸ್ತೆ, ಹೊಲಗಳು ಜಲಾವೃತ

Date:

ಒಡಿಶಾ ಪ್ರವಾಹ ಸ್ಥಿತಿ ಗಂಭೀರವಾಗುತ್ತಿದ್ದು ಬಾಲಸೋರ್‌ನ ಸುಮಾರು 100 ಗ್ರಾಮಗಳ ಮೇಲೆ ಪ್ರಭಾವ ಉಂಟಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ರಸ್ತೆಗಳು ಮತ್ತು ಹೊಲಗಳು ಜಲಾವೃತಗೊಂಡಿದ್ದು, ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.

ಭಾರೀ ಮಳೆ ಸುರಿಯುತ್ತಿದ್ದು, ಜಾರ್ಖಂಡ್‌ನಿಂದ ನೀರು ಬಿಡುಗಡೆ ಮಾಡಲಾಗಿದೆ. ಈ ಬೆನ್ನಲ್ಲೇ ಸುಬರ್ಣರೇಖಾ ನದಿಯ ಸಮೀಪದ ಭೋಗ್ರೈ, ಬಲಿಯಾಪಾಲ್, ಜಲೇಶ್ವರ ಮತ್ತು ಬಸ್ತಾ ಎಂಬ ನಾಲ್ಕು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ಜಲಕಾ ನದಿಯಲ್ಲಿ ಪ್ರವಾಹ ಉಂಟಾಗಿ ಕೆಲವು ಹಳ್ಳಿಗಳು ಮತ್ತು ಬಾಲಸೋರ್ ಸದರ್ ಪ್ರದೇಶದ ಭಾಗದ ಮೇಲೆ ಪ್ರಭಾವ ಬೀರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಚಿಕ್ಕೋಡಿ | ಅಕ್ಕ ಪ್ರಿಯಾಂಕಾ ಬೆನ್ನಿಗೆ ನಿಂತ ತಮ್ಮ ರಾಹುಲ್, ʼಗೆಲುವು ಅಕ್ಕಂದೆʼ ಎನ್ನುತ್ತಿರುವ ಕಾರ್ಯಕರ್ತರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಬರ್ಣರೇಖಾ ಮತ್ತು ಜಲಕಾ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದ್ದರೂ ಅಪಾಯಮಟ್ಟಕ್ಕಿಂತ ಕೆಳಕ್ಕಿಳಿದಿಲ್ಲ. ಬಸ್ತಾ, ಜಲೇಶ್ವರ, ಬಲಿಯಾಪಾಲ್, ಭೋಗ್ರೈಗೆ ಬಾಲಸೋರ್ ಜಿಲ್ಲಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಈವರೆಗೆ 46 ಗ್ರಾಮ ಪಂಚಾಯತ್‌ಗಳು ಪ್ರವಾಹಕ್ಕೆ ತುತ್ತಾಗಿದ್ದು 2,916 ಮಂದಿಯನ್ನು ಸ್ಥಳಾಂತರಿಸಲಾಗಿದೆ. ಈವರೆಗೆ 17 ನಿರಾಶ್ರಿತರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 300ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಈ ನಡುವೆ ಜುಲೈ 5ರವರೆಗೆ ಒಡಿಶಾದಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...