ಆಂಧ್ರಪ್ರದೇಶ | ದೌಲೇಶ್ವರಂನಲ್ಲಿ ಮತ್ತೆ ಪ್ರವಾಹದ ಆತಂಕ; ಹೈಅಲರ್ಟ್‌ ಘೋಷಣೆ

Date:

ಗೋದಾವರಿ ನದಿ ಉಕ್ಕಿ ಹಿಯುತ್ತಿದ್ದು, ನದಿಗೆ ಒಳಹರಿವು ಹೆಚ್ಚಾಗಿದೆ. ಪರಿಣಾಮ, ಗೋದಾವರಿ ಜಲಾನಯ ಪ್ರದೇಶ ಮತ್ತು ಪೋಲಾವರಂ ಹಿನ್ನೀರು ಪ್ರದೇಶಗಳಲ್ಲಿ ‘ಹೈಅಲರ್ಟ್‌’ ಘೋಷಿಸಲಾಗಿದೆ. ಭದ್ರಾಚಲಂ ಮತ್ತು ದೌಲೇಶ್ವರಂ ಪಟ್ಟಣಗಳ ತಗ್ಗು ಪ್ರದೇಶಗಳು ಮುಳುಗಡೆಯಾಗುವ ಸಾಧ್ಯತೆ ಇದ್ದು, ಮತ್ತೆ ಪ್ರವಾಹವಾಗುವ ಆತಂಕ ಎದುರಾಗಿದೆ.

ಶನಿವಾರ ರಾತ್ರಿ 8 ಗಂಟೆಗೆ ಭದ್ರಾಚಲಂನಲ್ಲಿ ನೀರಿನ ಮಟ್ಟ 53.8 ಅಡಿ ಇದ್ದು, ದೌಲೇಶ್ವರಂ ಬ್ಯಾರೇಜ್‌ನಲ್ಲಿ ನೀರಿನ ಮಟ್ಟ 17 ಅಡಿ ಮೀರುತ್ತಿದೆ. ಮುಂದಿನ ದಿನಗಳಲ್ಲಿ ಹಲವು ಪ್ರದೇಶಗಳು ಮುಳುಗಡೆಯಾಗುವ ಸಾಧ್ಯತೆ ಇದ್ದು, ಹೈಅಲರ್ಟ್‌ ಘೋಷಿಸಲಾಗಿದೆ.

ದೌಲೇಶ್ವರಂನ ನದಿ ಸಂರಕ್ಷಣಾಧಿಕಾರಿ ಕಾಶಿ ವಿಶ್ವೇಶ್ವರರಾವ್ ಪ್ರಕಾರ, ಸುಮಾರು 14 ಲಕ್ಷ ಕ್ಯೂಸೆಕ್ ನೀರನ್ನು ಬಂಗಾಳಕೊಲ್ಲಿಗೆ ಬಿಡಲಾಗುತ್ತಿದೆ. ಕೇಂದ್ರ ಜಲ ಆಯೋಗದ ಪ್ರಕಾರ, ಮಹಾರಾಷ್ಟ್ರ, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಗೋದಾವರ ಉಕ್ಕು ಹರಿಯುತ್ತಿದ್ದು, ಮುಂದಿನ ಮೂರು ದಿನಗಳಲ್ಲಿ ಪ್ರವಾಹದ ಒಳಹರಿವು ಹೆಚ್ಚಾಗುವ ನಿರೀಕ್ಷೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರವಾಹ ಪರಿಹಾರ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಿಂದ 21,051 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. 13,289 ಜನರನ್ನು 82 ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಈಗಾಗಲೇ, ವೇಲೇರುಪಾಡು ಮತ್ತು ಕುಕ್ಕುನೂರು ಮಂಡಲಗಳು ಪ್ರವಾಹಕ್ಕೆ ಸಿಲುಕಿವೆ. ಈ ಪ್ರದೇಶದ ಚಿಂತೂರು, ಯೆಟಪಾಕ, ಕುನವರಂ, ವಿಆರ್ ಪುರಂ ಮಂಡಲಗಳಲ್ಲಿ ಗ್ರಾಮಗಳು ಮತ್ತು ಜಮೀನುಗಳು ಮುಳುಗಡೆಯಾಗಿವೆ. ಪ್ರವಾಹ ಪೀಡಿತ ಜಿಲ್ಲೆಗಳ ವೇಲೇರುಪಾಡು, ಸೀತಾಗ್ರಾಮ, ಚಿಂತೂರು, ವಿಆರ್ ಪುರಂ, ಜಂಗಾರೆಡ್ಡಿಗುಡೆಂ, ಅಮಲಾಪುರಂ, ಕುನವರಂಗಳಲ್ಲಿ ಪ್ರವಾಹದ ಮಟ್ಟ ಹೆಚ್ಚಾದರೆ ಕ್ಷಿಪ್ರ ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿಗಳಮನ್ನು ನಿಯೋಜಿಸಲಾಗಿದೆ.

newindianexpress%2F2024 07%2F9ab81b54 bed6 4b91 a323 110381ebef69%2Fwarning

ಕೃಷ್ಣಾ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಐತಿಹಾಸಿಕ ಸಂಗಮೇಶ್ವರ ಸ್ವಾಮಿ ದೇವಸ್ಥಾನ ಮುಳುಗಡೆಯಾಗಿದೆ. ದೇವಾಲಯದ ಗೋಪುರಗಳು ಮಾತ್ರ ಗೋಚರಿಸುತ್ತಿವೆ. ಕೊತಪಲ್ಲಿ ಮಂಡಲದಲ್ಲಿರುವ ಈ ದೇವಾಲಯವು ಪ್ರತಿ ವರ್ಷ ಎಂಟು ತಿಂಗಳ ಕಾಲ ನೀರಿನಲ್ಲಿ ಮುಳುಗಿರುತ್ತದೆ. ನಾಲ್ಕು ತಿಂಗಳು ಮಾತ್ರ ಭಕ್ತರಿಗೆ ಕಾಣಸಿಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...