ಕೇಂದ್ರ ಸಚಿವ ಅಮಿತ್ ಶಾ ಹೆಸರಿನಲ್ಲಿ ಮಾಜಿ ಬ್ಯಾಂಕರ್‌ಗೆ 4 ಕೋಟಿ ರೂ. ವಂಚನೆ

Date:

ತಾನೊಬ್ಬ ಗುಪ್ತಚರ ಅಧಿಕಾರಿ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾನ್ಫರೆನ್ಸ್‌ ‘ಕಾಲ್‌’ನಲ್ಲಿದ್ದಾರೆ ಎಂದು ಹೇಳಿಕೊಂಡು ವಂಚಕನೊಬ್ಬ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ 4 ಕೋಟಿ ರೂ. ವಂಚಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ನಿವೃತ್ತ ಬ್ಯಾಂಕ್ ಅಧಿಕಾರಿ ಸೂರ್ಯಕಾಂತ್ ಥೋರಟ್‌ ಅವರು ವಂಚನೆಗೆ ತುತ್ತಾದ ಸಂತ್ರಸ್ತ. ಸೂರ್ಯಕಾಂತ್ ಅವರಿಗೆ ಪರಿಚಿತರೇ ಆಗಿದ್ದ ವಂಚಕರಿಗೆ, ಸೂರ್ಯಕಾಂತ್ ಅವರ ಮಗ ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದು ಗೊತ್ತಿತ್ತು. ಹೀಗಾಗಿ, ಗುಪ್ತಚರ ಅಧಿಕಾರಿಯ ಹೆಸರಿನಲ್ಲಿ ವಂಚಕರು ಕರೆ ಮಾಡಿದ್ದಾರೆ. ‘ನಿಮ್ಮ ಪುತ್ರ ವಿಶೇಷ ಕಾರ್ಯಾಚರಣೆ ಒಂದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆ ಕಾರಣಕ್ಕೆ, ಕೇಂದ್ರ ಸರ್ಕಾರವು 38 ಕೋಟಿ ರೂ. ಬಹುಮಾನ ನೀಡಲು ನಿರ್ಧರಿಸಿದೆ. ಆದರೆ, ಅದಕ್ಕೂ ಮುಂಚೆ ಸಂಸ್ಕರಣಾ ಶುಲ್ಕ, ವಕೀಲರ ಶುಲ್ಕ ಹಾಗೂ ಹಿರಿಯ ಅಧಿಕಾರಿಗಳಿಗೆ ಉಡುಗೊರೆಗಳನ್ನು ಪಾವತಿಸಬೇಕಿದೆ. ಅದಕ್ಕಾಗಿ, 4 ಕೋಟಿ ರೂ. ಪಾವತಿಸಬೇಕು’ ಎಂದು ಕೇಳಿದ್ದಾಗಿ ಆರೋಪಿಸಲಾಗಿದೆ.

ಮುಂಗಡವಾಗಿ ಪಾವತಿಸುವ ಹಣವನ್ನು ಮರುಪಾವತಿ ಮಾಡಲಾಗುತ್ತದೆ ಎಂದು ವಂಚಕರು ಭರವಸೆ ನೀಡಿದ್ದಾರೆ. ಅಲ್ಲದೆ, ಸೂರ್ಯಕಾಂತ್ ಅವರ ವಿಶ್ವಾಸವನ್ನು ಗಳಿಸಲು, ಆರೋಪಿಗಳು ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಹಾಗೂ ಕೆಲವು ಅಧಿಕಾರಿಗಳು ಕಾನ್ಫರೆನ್ಸ್‌ ಕಾಲ್‌ನಲ್ಲಿದ್ದಾರೆ ಎಂದು ನಟಿಸಿದ್ದಾರೆ. ಅವರನ್ನು ನಂಬಿದ ಸೂರ್ಯಕಾಂತ್ ಅವರು ವಿವಿಧ ಬ್ಯಾಂಕ್‌ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ಪಾವತಿ ಮಾಡಿದ್ದಾರೆ. ಅದಕ್ಕಾಗಿ, ಪರಿಚಿತರಿಂದ ಸಾಲವನ್ನೂ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಕೆ.ಆರ್.ಪೇಟೆ | ರಾತ್ರೋರಾತ್ರಿ ಗಣಪತಿ ಇಟ್ಟು ವಿವಾದ ಸೃಷ್ಟಿಸಲು ಯತ್ನ?

ತಮಗಾದ ವಂಚನೆ ಬಗ್ಗೆ ಹೇಳಿಕೊಂಡಿರುವ ಸೂರ್ಯಕಾಂತ್, “ಅವರು (ವಂಚಕರು) ತಮ್ಮ ಮಗನ ಐಡಿ ಕಾರ್ಡ್, ರಿವಾಲ್ವರ್, ಬ್ಯಾಂಕ್‌ ಸಂದೇಶವನ್ನು ನನಗೆ ತೋರಿಸಿದರು. ನಮಗೆ ಅವರ ಬಗ್ಗೆ ಎಂದಿಗೂ ಅನುಮಾನವೇ ಮೂಡಲಿಲ್ಲ. ನನ್ನ ಫ್ಲಾಟ್‌ಗಳು, ತೋಟ, ಅಂಗಡಿ, ಕಾರು ಹಾಗೂ ಹೆಂಡತಿಯ ಆಭರಣಗಳನ್ನು ಮಾರಾಟ ಮಾಡಿ ಹಣ ಹೊಂದಿಸಿ, ಅವರಿಗೆ 4 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ಕೊಟ್ಟಿದ್ದೇನೆ” ಎಂದು ಹೇಳಿದ್ದಾರೆ.

ಹಣ ಪಾವತಿಸಿದ ಕೆಲವು ತಿಂಗಳುಗಳ ಬಳಿಕ, ನಮಗೆ ಇದು ವಂಚನೆ, ಅದೊಂದು ಕಟ್ಟುಕಥೆ ಎಂಬುದು ಗೊತ್ತಾಯಿತು. ಬಳಿಕ ದೂರು ದಾಖಲಿಸಿದ್ದೇನೆ ಎಂದು ಸೂರ್ಯಕಾಂತ್ ಹೇಳಿಕೊಂಡಿದ್ದಾರೆ.

ಶುಭಂ ಸನಿಲ್ ಪ್ರಭಾಲೆ, ಸುನಿಲ್ ಬಬನ್‌ರಾವ್ ಪ್ರಭಾಲೆ, ಓಂಕಾರ್ ಸುನಿಲ್ ಪ್ರಭಾಲೆ, ಪ್ರಶಾಂತ್ ರಾಜೇಂದ್ರ ಪ್ರಭಾಲೆ ಮತ್ತು ಭಾಗ್ಯಶ್ರೀ ಸುನಿಲ್ ಪ್ರಭಾಲೆ ಎಂದು ಗುರುತಿಸಲಾದ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತನಿಖೆಯನ್ನು ಆರ್ಥಿಕ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...