ಬಾಂಬೆ ಹೈಕೋರ್ಟ್‌ಗೆ ನ್ಯಾಯಮೂರ್ತಿಯಾಗಿ BJP ಮಾಜಿ ವಕ್ತಾರೆ ನೇಮಕ; ವಿವಾದ-ಅನುಮಾನ

Date:

ಮಹಾರಾಷ್ಟ್ರದ ಬಾಂಬೆ ಹೈಕೋರ್ಟ್‌ಗೆ ಬಿಜೆಪಿ ಮಾಜಿ ವಕ್ತಾರೆ ಆರತಿ ಸಾಠೆ ಅವರನ್ನು ನೇಮಕ ಮಾಡಲಾಗಿದೆ. ಈ ನೇಮಕದ ಬಗ್ಗೆ ವಿಪಕ್ಷಗಳು ಆಕ್ಷೇಪ, ಅನುಮಾನ ವ್ಯಕ್ತಪಡಿಸಿದ್ದು, ವಿವಾದ ಹುಟ್ಟಿಕೊಂಡಿದೆ.

ಸಾಠೆ ಅವರು 2023ರ ಫೆಬ್ರವರಿಯಲ್ಲಿ ಮಹಾರಾಷ್ಟ್ರ ಬಿಜೆಪಿಯ ಅಧಿಕೃತ ವಕ್ತಾರೆಯಾಅಗಿ ನೇಮಕಗೊಂಡಿದ್ದರು. ಒಂದು ವರ್ಷ ಬಿಜೆಪಿ ವಕ್ತಾರೆಯಾಗಿದ್ದ ಸಾಠೆ, 2024ರ ಜನವರಿಯಲ್ಲಿ ವೃತ್ತಿಪರ ಕಾರಣಗಳನ್ನು ನೀಡಿ, ಬಿಜೆಪಿ ವಕ್ತಾರೆ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಅವರು ಬಿಜೆಪಿ ತೊರೆದ 19 ತಿಂಗಳಲ್ಲಿಯೇ ಅವರನ್ನು ಬಾಂಬೆ ಹೈಕೋರ್ಟ್‌ ನ್ಯಾಯಾಧೀಶೆಯಾಗಿ ನೇಮಿಸಲು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿದೆ. ಸಾಠೆ ಅವರು ಶೀಘ್ರವೇ ಬಾಂಬೆ ಹೈಕೋರ್ಟ್‌ ನ್ಯಾಯಾಧೀಶೆಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಅವರ ಆಯ್ಕೆಗೆ ವಿಪಕ್ಷಗಳು ಕಳವಳ ವ್ಯಕ್ತಪಡಿಸಿವೆ. ಆಡಳಿತ ಪಕ್ಷದ ಹುದ್ದೆಯಲ್ಲಿದ್ದವರು ನ್ಯಾಯಮೂರ್ತಿ ಸ್ಥಾನದಲ್ಲಿ ಕುಳಿತಾಗ, ಅವರ ತೀರ್ಪುಗಳು ರಾಜಕೀಯ ಪ್ರೇರಿತವಾಗುವ ಸಾಧ್ಯತೆಗಳೇ ಹೆಚ್ಚು ಎಂದು ವಾದಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂದಹಾಗೆ, ಆರತಿ ಸಾಠೆ ಅವರು ಸುಮಾರು 20 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ನಿರ್ವಹಿಸಿದ್ದಾರೆ. ಅವರು ಪ್ರತ್ಯಕ್ಷ ತೆರಿಗೆ ವಿಷಯಗಳಲ್ಲಿ ಪರಿಣತಿಯನ್ನೂ ಹೊಂದಿದ್ದಾರೆ. ಆದಾಗ್ಯೂ, ಅವರು ಬಿಜೆಪಿಯಲ್ಲಿ ಸಕ್ರಿಯವಾಗಿದ್ದರು. ಮಾತ್ರವಲ್ಲದೆ, ಅವರ ತಂದೆ ಅರುಣ್ ಸಾಠೆ ಕೂಡ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಜೊತೆಗೆ ದೀರ್ಘಾವಧಿಯ ಸಂಬಂಧ ಹೊಂದಿದ್ದರು. ಹೀಗಾಗಿ, ಆರತಿ ಸಾಠೆ ಮತ್ತು ಅವರ ಕುಟುಂಬವು ದೀರ್ಘಕಾಲದಿಂದ ಬಿಜೆಪಿ ಜೊತೆ ಗುರುತಿಸಿಕೊಂಡಿದೆ.

ಈ ಲೇಖನ ಓದಿದ್ದೀರಾ?: ಯುವತಿಯ ಅಪಹರಣ- ಪ್ರತ್ಯಕ್ಷ ಸಾಕ್ಷಿಯಿಂದ ಎಸ್‌ಐಟಿಗೆ ದೂರು; ಅಲ್ಲಿದ್ದ ಆ ವ್ಯಕ್ತಿ ಯಾರು ಗೊತ್ತೇ?

ಹೀಗಿರುವಾಗ, ಆರತಿ ಸಾಠೆ ಅವರನ್ನು ಬಾಂಬೆ ಹೈಕೋರ್ಟ್‌ ನ್ಯಾಯಾಧೀಶೆಯಾಗಿ ನೇಮಿಸಿವುದು ನ್ಯಾಯಾಂಗ ವ್ಯವಸ್ಥೆಯನ್ನು ರಾಜಕೀಯಗೊಳಿಸಿದಂತೆ ಆಗುತ್ತದೆ ಎಂದು ವಿಪಕ್ಷಗಳು ಆರೋಪಿಸಿವೆ. ಅವರನ್ನು ನ್ಯಾಯಾಧೀಶ ಹುದ್ದೆಗೆ ನೇಮಿಸುವ ನಿರ್ಧಾರವನ್ನು ಹಿಂಪಡೆಯುವ ಮೂಲಕ ನ್ಯಾಯಾಂಗ ವ್ಯವಸ್ಥೆಯಲ್ಲಿ ನಿಷ್ಪಕ್ಷಪಾತತೆಯನ್ನು ಕಾಪಾಡಬೇಕು ಎಂದು ಆಗ್ರಹಿಸಿವೆ.

ಸಾಠೆ ಅವರ ನೇಮಕದ ಬಗ್ಗೆ ಪ್ರತಿಕ್ರಿಯಿಸಿರುವ ಎನ್‌ಸಿಪಿ (ಶರದ್ ಬಣ) ಶಾಸಕ ರೋಹಿತ್ ಪವಾರ್, “ನಾನು ಆರತಿ ಸಾಠೆ ಅವರ ವೃತ್ತಿಪರ ಅರ್ಹತೆಗಳನ್ನು ಪ್ರಶ್ನಿಸುವುದಿಲ್ಲ. ಆದರೆ, ಅವರು ದೀರ್ಘಕಾಲದವರೆಗೆ ಒಂದು ರಾಜಕೀಯ ಪಕ್ಷದಲ್ಲಿ ತೊಡಗಿಸಿಕೊಂಡಿದ್ದವರು. ಅವರ ರಾಜಕೀಯ ಹಿನ್ನೆಲೆಯು ನ್ಯಾಯಾಂಗದ ನಿಷ್ಪಕ್ಷಪಾತಕ್ಕೆ ಧಕ್ಕೆತರುತ್ತದೆ. ಆಡಳಿತ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ವ್ಯಕ್ತಿ ನ್ಯಾಯಪೀಠದಲ್ಲಿ ಕುಳಿತಾಗ, ಅವರ ತೀರ್ಪುಗಳು ರಾಜಕೀಯ ಪ್ರೇರಿತವಾಗಿರುವುದಿಲ್ಲ ಎಂಬುದಕ್ಕೆ ಖಾತಿ ಇಲ್ಲ. ಈ ನೇಮಕಾತಿ, ಇಡೀ ನ್ಯಾಯದಾನ ಪ್ರಕ್ರಿಯೆಯ ಮೇಲೆಯೇ ಅನುಮಾನ ಹುಟ್ಟಿಸುತ್ತದೆ. ಈ ಶಿಫಾರಸನ್ನು ಮರುಪರಿಶೀಲಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...