ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

Date:

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್‌ ಅವರನ್ನು ಆಯ್ಕೆ ಮಾಡಲಾಗಿದೆ. ಭಾನುವಾರ, ಮುಂಬೈನಲ್ಲಿ ನಡೆದ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ಮಿಥುನ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಮಿಥುನ್ ಅವರನ್ನು ಸಭೆಯು ಅವಿರೋಧವಾಗಿ ಆಯ್ಕೆ ಮಾಡಿದೆ. ಸೌರವ್ ಗಂಗೂಲಿ ಮತ್ತು ರೋಜರ್ ಬಿನ್ನಿ ನಂತರ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ ಮೂರನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಮಿಥುನ್ ಪಾತ್ರರಾಗಿದ್ದಾರೆ.

ಈವರೆಗೆ ರೋಜರ್ ಬಿನ್ನಿ ಅವರು ಬಿಸಿಸಿಐ ಅಧ್ಯಕ್ಷರಾಗಿದ್ದರು. ಅವರು ಕಾರ್ಯಕ್ಷಮತೆ ಮತ್ತು ನಾವೀನ್ಯತೆಯೊಂದಿಗೆ ಬಿಸಿಸಿಐಅನ್ನು ಮುನ್ನಡೆಸಿದ್ದರು. ಅವರ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಮಿಥುನ್ ಅವರು ಆಯ್ಕೆಯಾಗಿದ್ದಾರೆ. ಅವರ ಜೊತೆಗೆ, ರಾಜೀವ್ ಶುಕ್ಲಾ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕರ್ನಾಟಕದ ಮಾಜಿ ಕ್ರಿಕೆಟಿಗ ರಘುರಾಮ್ ಭಟ್‌ ಅವರು ಖಜಾಂಚಿಯಾಗಿ ನೇಮಕಗೊಂಡಿದ್ದಾರೆ. ಅವರಿಗೆ ಬಿಸಿಸಿಐನ ಆರ್ಥಿಕ ಜವಾಬ್ದಾರಿಗಳನ್ನು ವಹಿಸಲಾಗಿದೆ. ಪ್ರಭತೇಜ್ ಭಾಟಿಯಾ ಜಂಟಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಿಥುನ್ ಅವರು ಈ ಹಿಂದೆ, ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್‌ನ ಕ್ರಿಕೆಟ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಮಿಥುನ್ ಮನ್ಹಾಸ್ ಯಾರು?

1979ರ ಅಕ್ಟೋಬರ್ 12ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಜನಿಸಿದ ಮಿಥುನ್ ಮನ್ಹಾಸ್ ಅವರು ಭಾರತೀಯ ಕ್ರಿಕೆಟ್‌ ತಂಡದ ಜೆರ್ಸಿಯನ್ನು ಎಂದಿಗೂ ಧರಿಸಲಿಲ್ಲ. ಆದಾಗ್ಯೂ, ಅವರು ಭಾರತೀಯ ದೇಶೀಯ ಕ್ರಿಕೆಟ್‌ನ ಪ್ರಮುಖ ವ್ಯಕ್ತಿಯಾಗಿ ಬೆಳೆದವರು. ಬಹುಮುಖ ಪ್ರತಿಭೆಗೆ ಹೆಸರುವಾಸಿಯಾದ ಮಿಥುನ್, ಬಲಗೈ ಬ್ಯಾಟ್ಸ್‌ಮನ್ ಆಗಿದ್ದರು. ಸಾಂದರ್ಭಿಕವಾಗಿ ಆಫ್-ಸ್ಪಿನ್ ಬೌಲಿಂಗ್ ಮಾಡಬಲ್ಲವರು. ಅಗತ್ಯವಿದ್ದಾಗ ವಿಕೆಟ್ ಕೀಪರ್ ಆಗಿಯೂ ಕ್ರೀಡಾಂಗಣಕ್ಕೆ ಇಳಿಯುತ್ತಿದ್ದವರು.

ಮಿಥುನ್ ಅವರು ರಣಜಿಯಲ್ಲಿ ದೆಹಲಿ ತಂಡವನ್ನು ಮುನ್ನಡೆಸುತ್ತಿದ್ದರು. ಗಮನಾರ್ಹವಾಗಿ, ವಿರಾಟ್ ಕೊಹ್ಲಿ ಕ್ರಿಕೆಟ್‌ ಅಂಗಳಕ್ಕೆ ಪಾದಾರ್ಪಣೆ ಮಾಡಿದಾಗ, ಮಿಥುನ್ ದೆಹಲಿ ತಂಡದ ನಾಯಕನಾಗಿದ್ದರು.

ಈ ಲೇಖನ ಓದಿದ್ದೀರಾ?: ಬೌದ್ಧರು, ಮುಸ್ಲಿಮರನ್ನು ಒಂದು ಮಾಡಿದೆ ಅಸ್ಮಿತೆಯ ಹೋರಾಟ: ಬಿಜೆಪಿ ಕುತಂತ್ರಕ್ಕಿಲ್ಲ ಆಸ್ಪದ

18 ವರ್ಷಗಳ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಮಿಥುನ್ 157 ಪಂದ್ಯಗಳಲ್ಲಿ ಆಡಿದ್ದಾರೆ. ಸರಾಸರಿ 46 ರನ್‌ ರೇಟ್‌ನೊಂದಿಗೆ 9,714 ರನ್ ಗಳಿಸಿದ್ದಾರೆ. ಅವರು 2007-08ರಲ್ಲಿ 27 ಶತಕಗಳು ಮತ್ತು 49 ಅರ್ಧಶತಕಗಳನ್ನು ಗಳಿಸಿದ್ದರು. ಆ ವರ್ಷ, ರಣಜಿ ಟ್ರೋಪಿಯಲ್ಲಿ ದೆಹಲಿ ತಂಡ ವಿಜಯ ಸಾಧಿಸುವಲ್ಲಿ ಬಹುಮುಖ್ಯ ಕೊಡುಗೆ ನೀಡಿದ್ದರು. ಆ ಟೂರ್ನಿಯಲ್ಲಿ ಅವರು 921 ರನ್‌ಗಳನ್ನು ಗಳಿಸಿದ್ದರು.

ಮಿಥುನ್ ಮನ್ಹಾಸ್ ಅವರು ಐಪಿಎಲ್‌ನಲ್ಲಿ ಹಲವು ತಂಡಗಳಲ್ಲಿ ಆಟವಾಡಿದ್ದಾರೆ. ಅವರು 2008 ರಿಂದ 2010 ರವರೆಗೆ ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಭಾಗವಾಗಿದ್ದರು. ಬಳಿಕ, ಪುಣೆ ವಾರಿಯರ್ಸ್‌ ತಂಡ ಸೇರಿದ ಮಿಥುನ್, 2011ರಿಂದ 2013ರವರೆಗೆ ತಂಡದ ಭಾಗವಾಗಿದ್ದರು. 2014 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡ ಸೇರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...