ಭಾರತದ ಮಾಜಿ ಕ್ರಿಕೆಟಿಗ, ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ ನಿಧನ

Date:

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಸ್ಪಿನ್ ಬೌಲರ್ ಬಿಷನ್ ಸಿಂಗ್ ಬೇಡಿ ಅವರು ತಮ್ಮ 77ನೇ ವಯಸ್ಸಿನಲ್ಲಿ ಅಕ್ಟೋಬರ್ 23ರಂದು ನಿಧನರಾಗಿದ್ದಾರೆ. ಪತ್ನಿ ಅಂಜು, ಪುತ್ರ ಅಂಗದ್ ಮತ್ತು ಪುತ್ರಿ ನೇಹಾರನ್ನು ಅಗಲಿದ್ದಾರೆ.

1967 ರಿಂದ 1979ರ ಭಾರತ ತಂಡವನ್ನು ಪ್ರತಿನಿಧಿಸಿದ್ದ ಈ ಲೆಜೆಂಡರಿ ಸ್ಪಿನ್ನರ್, 67 ಟೆಸ್ಟ್, 10 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಅವರು ಕ್ರಮವಾಗಿ 266 ವಿಕೆಟ್, 7 ವಿಕೆಟ್ ಪಡೆದಿದ್ದಾರೆ. ಅವರು ತಮ್ಮ 12 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ 10 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಏಳು ವಿಕೆಟ್‌ಗಳನ್ನು ಪಡೆದರು.

ಬೇಡಿ, ಎರಪಳ್ಳಿ ಪ್ರಸನ್ನ, ಬಿಎಸ್ ಚಂದ್ರಶೇಖರ್ ಮತ್ತು ಎಸ್. ವೆಂಕಟರಾಘವನ್ ಅವರೊಂದಿಗೆ ಭಾರತೀಯ ಸ್ಪಿನ್ ಬೌಲಿಂಗ್ ಇತಿಹಾಸದಲ್ಲಿ ಒಂದು ರೀತಿಯ ಕ್ರಾಂತಿಯನ್ನೇ ಕಂಡ ಕಾಲವದು. 1975ರ ವಿಶ್ವಕಪ್ ಪಂದ್ಯದಲ್ಲಿ, ಬಿಷನ್ ಸಿಂಗ್ ಬೇಡಿ ಅವರ 12-8-6-1 ಭರ್ಜರಿ ಬೌಲಿಂಗ್ ಪೂರ್ವ ಆಫ್ರಿಕಾವನ್ನು ಕೇವಲ 120 ರನ್‌ಗಳಿಗೆ ಕಟ್ಟಿಹಾಕಿತ್ತು. ಭಾರತ ತನ್ನ ಮೊದಲ ಏಕದಿನ ಪಂದ್ಯ ಗೆಲುವಿನಲ್ಲಿ ಬಿಷನ್ ಸಿಂಗ್ ಬೇಡಿ ಪ್ರಮುಖ ಪಾತ್ರ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇಡಿ

ಸೆಪ್ಟೆಂಬರ್ 25, 1946ರಂದು ಪಂಜಾಬ್‌ನ ಅಮೃತಸರದಲ್ಲಿ ಜನಿಸಿದ ಬಿಷನ್ ಸಿಂಗ್ ಬೇಡಿ, ಅತ್ಯಂತ ನುರಿತ ಎಡಗೈ ಸಾಂಪ್ರದಾಯಿಕ ಸ್ಪಿನ್ನರ್ ಆಗಿದ್ದರು. ಅವರ ಆಕರ್ಷಕವಾದ ಬೌಲಿಂಗ್ ಶೈಲಿಯು ವಿಭಿನ್ನವಾಗಿತ್ತು. ಅವರು 1966ರಲ್ಲಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರಯಾಣವನ್ನು ಪ್ರಾರಂಭಿಸಿದರು. 1979ರವರೆಗೆ ಭಾರತ ತಂಡವನ್ನು ಪ್ರತಿನಿಧಿಸಿದರು.

ಬೇಡಿ ಅವರ ಅಂತಾರಾಷ್ಟ್ರೀಯ ವೃತ್ತಿಜೀವನದ ಆಚೆಗೆ, ಬೇಡಿ ವಿಶಿಷ್ಟವಾದ ದೇಶೀಯ ಕ್ರಿಕೆಟ್ ವೃತ್ತಿಜೀವನವನ್ನು ಹೊಂದಿದ್ದರು. ವಿಶೇಷವಾಗಿ ದೆಹಲಿ ತಂಡದೊಂದಿಗೆ. ಅವರು ಹಲವಾರು ಸ್ಪಿನ್ ಬೌಲರ್‌ಗಳಿಗೆ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದರು. ಭಾರತದಲ್ಲಿ ಯುವ ಕ್ರಿಕೆಟ್ ಪ್ರತಿಭೆಗಳನ್ನು ಪೋಷಿಸುವಲ್ಲಿ ಬೇಡಿ ಮಹತ್ವದ ಪಾತ್ರವನ್ನು ವಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಕೇವಲ 20 ದಿನದಲ್ಲಿ 1404 ಡೆಂಗ್ಯೂ ಪ್ರಕರಣ

ಆಟದಿಂದ ನಿವೃತ್ತರಾದ ನಂತರವೂ ಬೇಡಿ ಕ್ರಿಕೆಟ್ ಜಗತ್ತಿನಲ್ಲಿ ಕಮೆಂಟರಿ ಟೇಬಲ್ ಮೇಲೆ ಧ್ವನಿಯಾಗಿ ಮುಂದುವರೆದರು. ನಾನಾ ಕ್ರಿಕೆಟ್ ಸಂಬಂಧಿತ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...