ಇ.ಡಿ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಹೇಮಂತ್ ಸೊರೇನ್: ನಾಳೆ ವಿಚಾರಣೆ

Date:

ಇ.ಡಿ ಬಂಧನ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಪ್ರಕರಣ ಸಂಬಂಧ ಸುಪ್ರೀಂ ಮುಖ್ಯ ನ್ಯಾಯಾಧೀಶರಾದ ಡಿ ವೈ ಚಂದ್ರಚೂಡ್ ಅವರು ಕೂಡ ನಾಳೆ(ಫೆ.02) ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿದ್ದಾರೆ.

ಹಿರಿಯ ನ್ಯಾಯವಾದಿಗಳಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಕಪಿಲ್ ಸಿಬಲ್ ಅವರು ಸೊರೇನ್ ಪರವಾಗಿ ಡಿ ವೈ ಚಂದ್ರಚೂಡ್ ಪೀಠಕ್ಕೆ ತುರ್ತು ವಿಚಾರಣೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ.

ಸೊರೇನ್ ಅವರು ಇದೇ ರೀತಿಯ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್‌ನಲ್ಲಿ ಸಾಲಿಟರ್ ಜನರಲ್ ತುಷಾರ್ ಮೆಹ್ತಾ ಪೀಠಕ್ಕೆ ತಿಳಿಸಿದರು. ಆಗ ಮಧ್ಯ ಪ್ರವೇಶಿಸಿ ಮಾತನಾಡಿದ ಸಿಬಲ್, ಹೈಕೋರ್ಟ್‌ನಿಂದ ಅರ್ಜಿ ಹಿಂಪಡೆಯುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಬಲ್ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಾಧೀಶರು ಕೂಡ ಪ್ರಕರಣವನ್ನು ನಾಳೆ ವಿಚಾರಣೆ ನಡೆಸುವುದಾಗಿ ಒಪ್ಪಿಕೊಂಡರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

ಅರ್ಜಿಯು ಗಂಭೀರ ಸಮಸ್ಯೆಗಳನ್ನು ಉಲ್ಲಂಘಿಸುತ್ತದೆ ಎಂದು ಸಿಬಲ್ ಪ್ರತಿಪಾದಿಸಿದರು. ಇದಕ್ಕೆ ಉತ್ತರ ನೀಡಿದ ಹೆಚ್ಚುವರಿ ಸಾಲಿಟರ್ ಜನರಲ್ ಎಸ್‌ವಿ ರಾಜು, ಸೊರೇನ್ ವಿರುದ್ಧ ಇರುವ ಆರೋಪಗಳು ಕೂಡ ತುಂಬ ಗಂಭೀರವಾದವು ಎಂದು ಹೇಳಿದರು. ಇ.ಡಿ ಬಂಧನಕ್ಕೂ ಮುನ್ನ ಹೇಮಂತ್ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸೊರೇನ್ ರಾಜೀನಾಮೆ ನೀಡಿದ ಹಿನ್ನೆಲೆ ಜೆಎಂಎಂನ ಹಿರಿಯ ನಾಯಕರಾದ ಚಂಪಯ್ ಸೊರೇನ್ ಅವರು ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಇಂದು(ಫೆ. 1) ಅಧಿಕಾರ ಸ್ವೀಕರಿಸಲಿದ್ದಾರೆ.

ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧನಕ್ಕೂ ಮುನ್ನ ತಮ್ಮ ಬೆಂಬಲಿಗರೊಂದಿಗೆ ಜ. 31ರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

ಜಾರ್ಖಂಡ್‌ ರಾಜಧಾನಿ ರಾಂಚಿಯಲ್ಲಿ ಸೇನೆಗೆ ಸೇರಿದ ನೂರಾರು ಕೋಟಿ ರೂ. ಬೆಲೆ ಬಾಳುವ ಸುಮಾರು 7 ಎಕರೆ ಭೂಮಿಯನ್ನು ಅಕ್ರಮ ದಾಖಲೆ ಸೃಷ್ಟಿಸುವ ಮೂಲಕ ಕಬಳಿಸಿದ ಆರೋಪ ಹೇಮಂತ್ ಸೊರೇನ್‌ ಮೇಲಿದೆ. ಈ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿ ಸೇರಿದಂತೆ 14 ಜನರನ್ನು ಇ.ಡಿ. ಈಗಾಗಲೇ ಬಂಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...