ಅರುಣಾಚಲ ಪ್ರದೇಶ ಬಿಜೆಪಿ ಸಿಎಂ ಕುಟುಂಬದ 4 ಸಂಸ್ಥೆಗಳಿಗೆ 146 ಸರ್ಕಾರಿ ಗುತ್ತಿಗೆ

Date:

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರ ಕುಟುಂಬ ಸದಸ್ಯರಿಗೆ ಸೇರಿದ ನಾಲ್ಕು ಸಂಸ್ಥೆಗಳಿಗೆ ತವಾಂಗ್ ಜಿಲ್ಲೆಯೊಂದರಲ್ಲೇ 146 ಸರ್ಕಾರಿ ಗುತ್ತಿಗೆಗಳು ಲಭಿಸಿವೆ ಎಂದು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ.

2012ರಿಂದ 2023ರ ಅವಧಿಯಲ್ಲಿ ಸಿಎಂ ಪೆಮಾ ಖಂಡು ಅವರ ಪತ್ನಿ ತ್ಸೆರಿಂಗ್ ಡೊಲ್ಮಾ, ಸಹೋದರ ತಾಶಿ ಖಂಡು ಮತ್ತು ಅತ್ತಿಗೆ ನಿಮಾ ಡ್ರೆಮಾ ಅವರ ಒಡೆತನದ ಸಂಸ್ಥೆಗಳಿಗೆ ಒಟ್ಟು 383.74 ರೂ. ಕೋಟಿ ಮೌಲ್ಯದ ಕಾಮಗಾರಿಗಳನ್ನು ನೀಡಲಾಗಿದೆ. ಇದರಲ್ಲಿ 59 ಗುತ್ತಿಗೆಗಳನ್ನು (ಮೌಲ್ಯ 16.83 ಕೋಟಿ ರೂ.) ಟೆಂಡರ್ ಕರೆಯದೆಯೇ ನೇರ ಕಾರ್ಯಾದೇಶದ ಮೂಲಕ ನೀಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಸರ್ಕಾರ ಸಲ್ಲಿಸಿದ ಮಾಹಿತಿಯ ಪ್ರಕಾರ, ಸಿಎಂ ಪತ್ನಿ ಒಡೆತನದ ಮೆ/ಸರ್ಸ್ ಫ್ರಾಂಟಿಯರ್ ಅಸೋಸಿಯೇಟ್ಸ್ ಮತ್ತು ಬ್ರ್ಯಾಂಡ್ ಈಗಲ್ಸ್ ಸಂಸ್ಥೆಗಳಿಗೆ ₹209.6 ಕೋಟಿ ಮೌಲ್ಯದ 42 ಗುತ್ತಿಗೆಗಳು ಸಿಕ್ಕಿವೆ. ಸಹೋದರನ ಆರ್‌.ಡಿ ಕನ್ಸ್ಟ್ರಕ್ಷನ್‌ಗೆ ₹29.1 ಕೋಟಿ ಮೌಲ್ಯದ 13 ಗುತ್ತಿಗೆಗಳು ಹಾಗೂ ಅತ್ತಿಗೆಯ ಅಲಯನ್ಸ್ ಟ್ರೇಡಿಂಗ್ ಕಂಪನಿಗೆ ₹145.04 ಕೋಟಿ ಮೌಲ್ಯದ 91 ಗುತ್ತಿಗೆಗಳು ದೊರೆತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ‘ದೇವರ’ ದಾಖಲೆ ಮುರಿದು ಮುನ್ನುಗ್ಗುತ್ತಿರುವ ಕೊಹ್ಲಿ

ಸ್ಥಳೀಯ ಗುತ್ತಿಗೆದಾರರಿಗೆ ಆದ್ಯತೆ ನೀಡುವ ಉದ್ದೇಶದಿಂದ 2020ರಲ್ಲಿ ಜಾರಿಗೆ ಬಂದ ನಿಯಮದ ಪ್ರಕಾರ, ₹50 ಲಕ್ಷದವರೆಗಿನ ಕಾಮಗಾರಿಗಳನ್ನು ಮಾತ್ರ ಟೆಂಡರ್ ಇಲ್ಲದೆ ನೀಡಬಹುದು. ಆದರೆ, ಈ ಮಿತಿ ಜಾರಿಗೆ ಬರುವ ಮುನ್ನವೇ ಸಿಎಂ ಕುಟುಂಬದ ಸಂಸ್ಥೆಗಳಿಗೆ ನೀಡಲಾದ 11 ಕಾಮಗಾರಿಗಳು ₹50 ಲಕ್ಷದ ಮಿತಿಯನ್ನು ಮೀರಿವೆ. ಉದಾಹರಣೆಗೆ, 2018ರಲ್ಲಿ ತವಾಂಗ್‌ನಲ್ಲಿ ಸರ್ಕಾರಿ ಕಾಲೇಜು ಸ್ಥಾಪನೆಗೆ ಅಲಯನ್ಸ್ ಟ್ರೇಡಿಂಗ್‌ಗೆ ₹2 ಕೋಟಿ ಮೌಲ್ಯದ ಗುತ್ತಿಗೆಯನ್ನು ನೇರವಾಗಿ ನೀಡಲಾಗಿತ್ತು.

ರಸ್ತೆ, ಸೇತುವೆ, ಚರಂಡಿ, ನೀರಾವರಿ ಕಾಲುವೆ, ವಿದ್ಯುತ್ ಮಾರ್ಗ, ಸಮುದಾಯ ಭವನ, ಯುದ್ಧ ಸ್ಮಾರಕ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಈ ಗುತ್ತಿಗೆಗಳನ್ನು ನೀಡಲಾಗಿದೆ.

‘ಸೇವ್ ಮೋನ್ ರೀಜನ್ ಫೆಡರೇಶನ್’ ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಇಷ್ಟೊಂದು ಗುತ್ತಿಗೆಗಳು ಸಿಎಂ ಕುಟುಂಬಕ್ಕೇ ಸಿಕ್ಕಿರುವುದರ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದೆ. ಅರ್ಜಿದಾರರ ಪರ ವಕೀಲರಾದ ಪ್ರಶಾಂತ್ ಭೂಷಣ್ ಅವರ ಮನವಿ ಮೇರೆಗೆ, 2015ರಿಂದ 2025ರವರೆಗಿನ ಎಲ್ಲ ಜಿಲ್ಲೆಗಳ ಸಂಪೂರ್ಣ ಮಾಹಿತಿಯನ್ನು ಎಂಟು ವಾರಗಳಲ್ಲಿ ಸಲ್ಲಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ.

ಗ್ರಾಮಸ್ಥರು ಅಭಿವೃದ್ಧಿ ಕಾರ್ಯಗಳಿಗೆ ಉಚಿತವಾಗಿ ಭೂಮಿ ನೀಡುವುದರಿಂದ, ಅವರು ನಂಬಿಕೆ ಇಟ್ಟಿರುವ ಗುತ್ತಿಗೆದಾರರಿಗೆ ಕೆಲಸ ನೀಡುವುದು ಇಲ್ಲಿನ ವಾಡಿಕೆ ಎಂದು ರಾಜ್ಯ ಸರ್ಕಾರ ಸಮಜಾಯಿಷಿ ನೀಡಿದೆ. ಅಲ್ಲದೆ, ಶೇ 95ರಷ್ಟು ಕಾಮಗಾರಿಗಳನ್ನು ಮುಕ್ತ ಟೆಂಡರ್ ಮೂಲಕವೇ ನೀಡಲಾಗಿದೆ, ಇದರಲ್ಲಿ ಯಾವುದೇ ಪಕ್ಷಪಾತವಿಲ್ಲ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ. ಮುಂದಿನ ವಿಚಾರಣೆ 2026ರ ಫೆಬ್ರವರಿ 3ರಂದು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...