ಮತ್ತೆ ಭುಗಿಲೆದ್ದ ಮಣಿಪುರ ಹಿಂಸಾಚಾರ; ನಾಲ್ವರು ಗುಂಡೇಟಿಗೆ ಬಲಿ, ಅಧಿಕಾರಿ ಹತ್ಯೆ

Date:

  • ಮಣಿಪುರ ಹಿಂಸಾಚಾರ ಘಟನೆಯಲ್ಲಿ 54 ಮಂದಿ ಸಾವು
  • ಎಸ್‌ಟಿ ಸ್ಥಾನಮಾನಕ್ಕೆ ಆಗ್ರಹಿಸಿರುವ ಮೇಟಿ ಸಮುದಾಯ

ಮಣಿಪುರ ಹಿಂಸಾಚಾರ ಶನಿವಾರ (ಮೇ 6) ಮತ್ತೆ ಭುಗಿಲೆದ್ದಿದೆ. ಚುರಾಚಂದ್‌ಪುರದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ವೇಳೆ ಮಾಡಿರುವ ಗುಂಡಿನ ದಾಳಿಗೆ ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ.

ಪ್ರದೇಶದಲ್ಲಿ ಮೇಟಿ ಸಮುದಾಯದ ತೆರವು ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ. ಚುರಾಚಂದ್‌ಪುರದಲ್ಲಿ ಮೇಟಿ ಸಮುದಾಯದ ತೆರವು ಕಾರ್ಯಾಚರಣೆ ವೇಳೆ ಸಮುದಾಯದ ನಾಯಕರು ಅಡ್ಡಿಪಡಿಸಿದಾಗ ಗುಂಡು ಹಾರಿಸಲಾಗಿದೆ.

ಮಣಿಪುರ ಹಿಂಸಾಚಾರದ ವೇಳೆ ಇಂಫಾಲದಲ್ಲಿ ತೆರಿಗೆ ಸಹಾಯಕರಾದ ಲೆಟ್ಮಿಂಥಂಗ್‌ ಹಾವೊಕಿಪ್‌ ಎಂಬುವವರ ಹತ್ಯೆಯಾಗಿದೆ ಎಂದು ಭಾರತೀಯ ಕಂದಾಯ ಸೇವೆಯ (ಐಆರ್‌ಎಸ್) ಸಂಘಟನೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಬಹುಸಂಖ್ಯಾತ ಮೇಟಿ ಸಮುದಾಯ ಮತ್ತು ಕುಕಿ ಬುಡಕಟ್ಟು ಸಮುದಾಯಗಳ ನಡುವೆ ಮೇ 3ರಿಂದ ರಾಜ್ಯದಲ್ಲಿ ಸಂಘರ್ಷ ನಡೆಯುತ್ತಿದೆ.

ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ಸೇನೆ ಮತ್ತು ಸರ್ಕಾರ ಸಮಾಧಾನದ ನಿಟ್ಟುಸಿರು ಬಿಡುತ್ತಿದ್ದಾಗ, ಶನಿವಾರ ಮತ್ತೆ ಹಿಂಸಾಚಾರ ನಡೆದಿರುವುದು ನಾಗರಿಕರ ಆತಂಕಕ್ಕೆ ಕಾರಣವಾಗಿದೆ.

ರಾಜಧಾನಿ ಇಂಪಾಲದಲ್ಲಿ ಕುಕಿ ಸಮುದಾಯ ಹಿಂಸಾಚಾರಕ್ಕೆ ಗುರಿಯಾಗುತ್ತಿದ್ದಾರೆ. ಬುಡಕಟ್ಟು ಸಮುದಾಯ ಅಧಿಕವಾಗಿರುವ ಸ್ಥಳಗಳಲ್ಲಿ ಮೇಟಿ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ.

ಟಿಡಿಮ್‌ ರೋಡ್‌ ಎಂಬಲ್ಲಿ ನೂರಾರು ಜನರು ತೆರವು ಕಾರ್ಯಾಚರಣೆ ವಿರೋಧಿಸಿದರು. ರಕ್ಷಣಾ ಪಡೆಗಳು ಗುಂಡು ಹಾರಿಸದಂತೆ ತಡೆಯಲು ಎದುರಿಗೆ ಮಹಿಳೆಯರನ್ನು ನಿಲ್ಲಿಸಲಾಗಿತ್ತು. ಆದರೂ ಗುಂಡು ಹಾರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

ಈ ಹಿಂದೆ ಗ್ರಾಮವೊಂದರಲ್ಲಿ ಕೆಲವು ಜನರು ಬೆಂಕಿ ಹಚ್ಚುತ್ತಿರುವುದನ್ನು ತಡೆದ ಸಿಆರ್‌ಪಿಎಫ್‌ ಪೇದೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಹಿಂಸಾಚಾರಕ್ಕೆ 54 ಮಂದಿ ಬಲಿ

ಮಣಿಪುರ ಹಿಂಸಾಚಾರಕ್ಕೆ ಈವರೆಗೆ 54 ಮಂದಿ ಬಲಿಯಾಗಿದ್ದಾರೆ. ಗಲಭೆಯಲ್ಲಿ ನೂರಾರು ಮಂದಿಗೆ ಗಾಯಗಳಾಗಿವೆ ಎಂದು ಶನಿವಾರ ಅಧಿಕಾರಿಗಳು ಅಧಿಕೃತ ವಿವರ ನೀಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇಂಫಾಲ ನಗರದಲ್ಲಿ ಜನ ಜೀವನ ಸಹಜ ಸ್ಥಿತಿಗೆ ಮರಳಿದ್ದು, ಅಂಗಡಿಗಳು ಮತ್ತು ಮಾರುಕಟ್ಟೆಗಳು ಎಂದಿನಂತೆ ಆರಂಭವಾಗಿವೆ. ರಸ್ತೆಗಳಲ್ಲಿ ವಾಹನಗಳ ಸಂಚಾರ ಸಹ ಆರಂಭವಾಗಿದೆ.

ಇಂಫಾಲದ ಪ್ರಮುಖ ಪ್ರದೇಶಗಳು ಮತ್ತು ರಸ್ತೆಗಳಲ್ಲಿ ಹೆಚ್ಚಿನ ಸೇನಾ ಪಡೆಗಳು, ಕ್ಷಿಪ್ರ ಕಾರ್ಯಾಚರಣೆ ಪಡೆ ಹಾಗೂ ಕೇಂದ್ರ ಪೊಲೀಸ್ ಪಡೆಗಳ ನಿಯೋಜನೆ ಮೂಲಕ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಹಿಂಸಾಚಾರದಲ್ಲಿ ಮೃತಪಟ್ಟವರ ಪೈಕಿ 16 ಶವಗಳನ್ನು ಚುರಾಚಂದ್‌ಪುರ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. 15 ಮೃತದೇಹಗಳು ಇಂಫಾಲ ಪೂರ್ವ ಜಿಲ್ಲೆಯ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಶುಕ್ರವಾರ ರಾತ್ರಿ ಚುರಾಚಂದ್‌ಪುರ ಜಿಲ್ಲೆಯಲ್ಲಿ ಬಂಡುಕೋರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಐವರು ಗುಡ್ಡಗಾಡು ಮೂಲದ ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಭಾರತೀಯ ಮೀಸಲುಪಡೆಯ ಬೆಟಾಲಿಯನ್‌ನ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಮ್ಮು ಮತ್ತು ಕಾಶ್ಮೀರ | ಉಗ್ರರ ಬಾಂಬ್ ದಾಳಿಗೆ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮ

ಹೈಕೋರ್ಟ್ ಆದೇಶದಂತೆ ಮೇಟಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವುದನ್ನು ವಿರೋಧಿಸಿ ಬುಡಕಟ್ಟು ಸಮುದಾಯ ಹೋರಾಟ ಮಾಡುತ್ತಿರುವುದು ಹಾಗೂ ಬುಡಕಟ್ಟು ಸಮುದಾಯಗಳನ್ನು ಅರಣ್ಯ ಪ್ರದೇಶಗಳಿಂದ ತೆರವು ಮಾಡಲು ಸರ್ಕಾರ ಈಚೆಗೆ ತೆಗೆದುಕೊಂಡಿರುವ ಕ್ರಮಗಳು ಸಂಘರ್ಷಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಬಿಜೆಪಿ ಸರ್ಕಾರದ ನಾಯಕರ ಅಲಕ್ಷ್ಯ ಸಂಬಂಧ ಟೀಕೆ

ಮಣಿಪುರದಲ್ಲಿ ಹಿಂಸಾಚಾರ ವರದಿಯಾಗುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಅತ್ತ ಗಮನ ಹರಿಸದೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಂಗಳೂರಿನಲ್ಲಿ ರಸ್ತೆ ಮೆರವಣಿಗೆ ಮೂಲಕ ಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದು ಅಂತರ್ಜಾಲದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಅಂತಾರಾಷ್ಟ್ರೀಯ ವ್ಯವಹಾರಗಳ ಪ್ರೊಫೆಸರ್ ಅಶೋಕ್ ಸ್ವೇನ್ ಈ ಬಗ್ಗೆ ಟ್ವೀಟ್ ಮಾಡಿ ಖಂಡಿಸಿದ್ದಾರೆ.

ಗೃಹಸಚಿವ ಅಮಿತ್ ಶಾ ಅವರು ಮಣಿಪುರ ಹಿಂಸಾಚಾರದ ಹಿನ್ನೆಲೆಯಲ್ಲಿ ಕರ್ನಾಟಕದ ರ‍್ಯಾಲಿ ರದ್ದುಗೊಳಿಸಿದ್ದಾರೆ ಎಂದು ಶುಕ್ರವಾರ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಸತ್ಯಶೋಧನಾ ತಂಡ ‘ಆಲ್ಟ್‌ ನ್ಯೂಸ್‌’ನ ಮೊಹಮ್ಮದ್ ಝುಬೇರ್ ಅವರು ಟ್ವಿಟರ್‌ನಲ್ಲಿ ಸತ್ಯಾಂಶವನ್ನು ಬಹಿರಂಗಪಡಿಸಿ, ಅಮಿತ್ ಶಾ ಶನಿವಾರ ಕರ್ನಾಟಕದ ಸವದತ್ತಿ ಎಲ್ಲಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿರುವುದನ್ನು ಟ್ವೀಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...