ಮೋಸದ ಜಾಹೀರಾತು; 24 ತರಬೇತಿ ಸಂಸ್ಥೆಗಳಿಗೆ ದಂಡ

Date:

  • ₹77.60 ಲಕ್ಷ ವಿಧಿಸಿದ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ
  • ಶಿಕ್ಷಣ ಕ್ಷೇತ್ರದ 600ಕ್ಕೂ ಅಭ್ಯರ್ಥಿಗಳಿಗೆ ₹1.56 ಕೋಟಿ ಮರುಪಾವತಿ

ದಾರಿ ತಪ್ಪಿಸುವ ಜಾಹೀರಾತು ನೀಡಿ ವಂಚಿಸಿದ ಕಾರಣಕ್ಕೆ 24 ತರಬೇತಿ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ₹77.60 ಲಕ್ಷ ದಂಡ ವಿಧಿಸಿದ್ದಲ್ಲದೆ, ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಮೂಲಕ ಶಿಕ್ಷಣ ಕ್ಷೇತ್ರದ 600ಕ್ಕೂ ಅಭ್ಯರ್ಥಿಗಳಿಗೆ ₹1.56 ಕೋಟಿ ಮರುಪಾವತಿ ಮಾಡಿದೆ ಎಂದು ಗ್ರಾಹಕ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ.

ನಾಗರಿಕ ಸೇವೆ, ಎಂಜಿನಿಯರಿಂಗ್ ಕೋರ್ಸ್ ಮತ್ತಿತರ ಶಿಕ್ಷಣಕ್ಕೆ ತರಬೇತಿ ಕೇಂದ್ರಗಳಲ್ಲಿ ದಾಖಲಾಗಿದ್ದ ಅಭ್ಯರ್ಥಿಗಳು ನಿಯಮ, ಷರತ್ತುಗಳನ್ನು ಅನುಸರಿಸಿದರೂ ಮರುಪಾವತಿ ನಿರಾಕರಿಸಲಾಗಿದೆ ಎಂದು ಅಭ್ಯರ್ಥಿಗಳು ಗ್ರಾಹಕ ರಕ್ಷಣಾ ಪ್ರಾಧಿಕಾರದ ಗಮನ ಸೆಳೆದಿದ್ದರು.

ಗ್ರಾಹಕ ವ್ಯವಹಾರಗಳ ಇಲಾಖೆ ಗ್ರಾಹಕರ ರಕ್ಷಣೆ ಮತ್ತು ಸಬಲೀಕರಣಕ್ಕಾಗಿ ಪ್ರಗತಿಪರ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. CONFONET ಯೋಜನೆಯಡಿ ವಿಡಿಯೋ ಕಾನ್ಫರೆನ್ಸಿಂಗ್ ಮೋಡ್ ಮೂಲಕ ವಿಚಾರಣೆ ನಡೆಸಲು ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಆಯೋಗದ (NCDRC) 10 ಪೀಠಗಳು ಮತ್ತು ರಾಜ್ಯ ಗ್ರಾಹಕ ವಿವಾದ ಪರಿಹಾರ ಆಯೋಗಗಳ (SCDRCs) 35 ಪೀಠಗಳಲ್ಲಿ VC ಉಪಕರಣಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಗ್ರಾಹಕ ಆಯೋಗಗಳಲ್ಲಿ ಈಗ ತೀರ್ಪು ಪ್ರಕ್ರಿಯೆಯ ಸರಳೀಕೃತವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಹಕ ಸಂರಕ್ಷಣಾ ಕಾಯ್ದೆ 1986 ರದ್ದುಪಡಿಸಿ 2019ರ ಹೊಸ ಕಾಯ್ದೆ ಜಾರಿ

ಜಾಗತೀಕರಣ, ತಂತ್ರಜ್ಞಾನ, ಇ-ವಾಣಿಜ್ಯ ಮಾರುಕಟ್ಟೆಗಳಲ್ಲಿ ಗ್ರಾಹಕರ ರಕ್ಷಣೆಗಾಗಿ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ಅನ್ನು ರದ್ದುಪಡಿಸಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಹೊಸ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಗ್ರಾಹಕರು ಆನ್‌ಲೈನ್‌ನಲ್ಲಿ ದೂರು ಸಲ್ಲಿಕೆ, ವಿಚಾರಣೆಗಾಗಿ ವೀಡಿಯೊ ಕಾನ್ಫರೆನ್ಸಿಂಗ್, 21 ದಿನಗಳಲ್ಲಿ ದೂರುಗಳ ಸ್ವೀಕಾರ ಮತ್ತು ತ್ವರಿತ ಪರಿಹಾರ ಸಾಧ್ಯವಾಗುತ್ತಿದೆ.

ಗ್ರಾಹಕ ವ್ಯವಹಾರಗಳ ಇಲಾಖೆ ದೇಶಾದ್ಯಂತ ಗ್ರಾಹಕರಿಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಸೌಲಭ್ಯ ಒದಗಿಸಿದೆ. ಹಿಂದಿ, ಇಂಗ್ಲಿಷ್, ಕಾಶ್ಮೀರಿ, ಪಂಜಾಬಿ, ನೇಪಾಳಿ, ಗುಜರಾತಿ, ಮರಾಠಿ, ಕನ್ನಡ, ತೆಲುಗು, ತಮಿಳು, ಮಲಯಾಳಂ, ಮೈಥಿಲಿ, ಸಂಥಾಲಿ, ಬಂಗಾಳಿ, ಒಡಿಯಾ, ಅಸ್ಸಾಮಿ ಮತ್ತು ಮಣಿಪುರಿ ಸೇರಿದಂತೆ 17 ಭಾಷೆಗಳಲ್ಲಿ ಗ್ರಾಹಕರು ಟೋಲ್-ಫ್ರೀ ಸಂಖ್ಯೆ 1915 ಮೂಲಕ ನೋಂದಾಯಿಸಬಹುದು. ಅಲ್ಲದೇ, ಇಂಟಿಗ್ರೇಟೆಡ್ ಗ್ರೀವೆನ್ಸ್ ರಿಡ್ರೆಸಲ್ ಮೆಕ್ಯಾನಿಸಂ (INGRAM), ಓಮ್ನಿ-ಚಾನೆಲ್ ಐಟಿ-ಶಕ್ತಗೊಂಡ ಕೇಂದ್ರ ಪೋರ್ಟಲ್, ವಿವಿಧ ಚಾನೆಲ್‌ಗಳ ಮೂಲಕವೂ ನೋಂದಾಯಿಸಬಹುದು.

ವಿಮಾನ ಕಂಪನಿಗಳಿಂದ ₹ 1,454 ಕೋಟಿ ಮರುಪಾವತಿ

ಕೋವಿಡ್-19 ಲಾಕ್‌ಡೌನ್‌ ವೇಳೆ ವಿಮಾನ ಸಂಚಾರ ರದ್ದಾದ ಪ್ರಯುಕ್ತ ಕಂಪನಿಗಳು CCPA ನಿರ್ದೇಶನದಂತೆ ಗ್ರಾಹಕರಿಗೆ ₹ 1,454 ಕೋಟಿ ಮರುಪಾವತಿಸಿವೆ. ವಿಮಾನ ಕಂಪನಿಗಳು ತಮ್ಮ ವೆಬ್‌ಸೈಟ್‌ ನವೀಕರಿಸಬೇಕೆಂದು CCPA ಆದೇಶಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...